ಕೋವಿಡ್ನಿಂದ ಪಾಲಕರ ಕಳೆದುಕೊಂಡವರಿಗೆ ಉಚಿತ ಪ್ರವೇಶ
ಈ ಬಾರಿ ಶಾಲೆಯ 200 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.
Team Udayavani, Jul 20, 2021, 5:19 PM IST
ಧಾರವಾಡ: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮಕ್ಕಳಿಗೆ ದಿ| ಶಂಕರ ಪಾಟೀಲ ಅವರ ಜನ್ಮದಿನದ ಪ್ರಯುಕ್ತ ಪವನ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉಚಿತ ಪ್ರವೇಶ ನೀಡಲು ನಿರ್ಧರಿಸಲಾಗಿದೆ ಎಂದು ಶಾಲೆಯ ಉಪಾಧ್ಯಕ್ಷೆ ರತ್ನಾ ಶಂಕರ ಪಾಟೀಲ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ ಹೊಂದಿದ್ದ ಶಾಲೆಯ ಮುಖ್ಯಸ್ಥರಾಗಿದ್ದ ದಿ| ಶಂಕರ ಪಾಟೀಲರು ಅರ್ಹ ಬಡ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಿದ್ದರು. ಅನಿರೀಕ್ಷಿತವಾಗಿ ಕೋವಿಡ್ಗೆ ಅವರು ಮೃತಪಟ್ಟಿದ್ದು, ಇದೀಗ ಅವರ ಜನ್ಮದಿನದ ನಿಮಿತ್ತ ಕೋವಿಡ್ನಿಂದ ಮೃತಪಟ್ಟವರ 20 ಮಕ್ಕಳಿಗೆ ಉಚಿತ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ. ಯಾವುದೇ ವರ್ಗದಲ್ಲೂ ಪ್ರವೇಶ ಪಡೆಯಲಿದ್ದು, ಶಾಲೆಯಲ್ಲಿ 10ನೇ ತರಗತಿವರೆಗೂ ಅವರಿಗೆ ಪ್ರವೇಶ ಶುಲ್ಕ ಆಕರಣೆ ಇಲ್ಲ. ಪ್ರವೇಶ ಮಾತ್ರವಲ್ಲದೇ ಪುಸ್ತಕದ ವ್ಯವಸ್ಥೆ ಮಾಡಲಿದ್ದೇವೆ ಎಂದು ತಿಳಿಸಿದರು.
ಶಾಲೆಯ ಕಾರ್ಯದರ್ಶಿ ಮಹೇಶ ಪಾಟೀಲ ಹಾಗೂ ಅಕ್ಷತಾ ಪಾಟೀಲ ಮಾತನಾಡಿ, ಧಾರವಾಡದಲ್ಲಿ ಪವನ ಶಾಲೆಗೆ ಉತ್ತಮ ಹೆಸರಿದೆ. ಶಾಲೆಯ ಶ್ರೇಯೋಭಿವೃದ್ಧಿಗೆ ತಂದೆಯವರಾದ ಶಂಕರ ಪಾಟೀಲರು ತುಂಬ ಶ್ರಮಿಸಿದ್ದಾರೆ. ಹೀಗಾಗಿ ಅವರ ಹೆಸರಿನಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡುವ ಉದ್ದೇಶವಿದೆ. ಆದರೆ, ಕೋವಿಡ್ ಸೋಂಕು ನಮ್ಮನ್ನು ಕಟ್ಟಿ ಹಾಕಿದೆ. ಸದ್ಯಕ್ಕೆ ತಂದೆಯವರ ಜನ್ಮದಿನದ ನಿಮಿತ್ತ 20 ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ ಎಂದರು.
ಈ ಬಾರಿ ಶಾಲೆಯ 200 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಬರೀ ಸ್ಥಳೀಯವಾಗಿರದೇ ಜಾಗತಿಕವಾಗಿ ಶೈಕ್ಷಣಿಕ, ಔದ್ಯೋಗಿಕ ಅವಕಾಶಗಳನ್ನು ಪಡೆಯಲೆಂದು ಸ್ಕೂಲ್ ಐಕಾನ್ ಆನ್ಲೈನ್ ವೇದಿಕೆಯೊಂದನ್ನು ರಚಿಸಿದ್ದು ಯಶಸ್ವಿಯಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಕರಾದ ಅಶ್ವಿನಿ ಕುಂಬಾರಗೌಡರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ