ಬ್ಲಾಕ್ ಫಂಗಸ್ ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ವ್ಯವಸ್ಥೆ: ಆರೋಗ್ಯ ಸಚಿವ ಸುಧಾಕರ್
Team Udayavani, May 22, 2021, 12:28 PM IST
ಹುಬ್ಬಳ್ಳಿ: ಕಪ್ಪು ಶಿಲೀಂಧ್ರ ಸೋಂಕು ಕಡಿಮೆಯಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರಿಗೆ ಉಚಿತವಾಗಿ ಸರಿಯಾದ ಚಿಕಿತ್ಸೆ ಕೊಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ನಿಂದ ಸಾವಿನ ಪ್ರಮಾಣ ಜಾಸ್ತಿ ಆಗಿಲ್ಲ. ವರ್ಷಕ್ಕೆ 10 ಜನ ಇರುತ್ತಾ ಇದ್ದರು. ಆದರೆ ಈಗ 250 ಜನ ಸೋಂಕಿತರು ರಾಜ್ಯದಲ್ಲಿ ಇದ್ದಾರೆ. ಹೀಗಾಗಿ ಅವರಿಗೆಲ್ಲ ಎಷ್ಟು ಔಷಧಿ ಬೇಕೋ ಇವೆಲ್ಲವನ್ನು ಸರ್ಕಾರ ನೀಡಲಿದೆ ಎಂದರು.
ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಲಾಠಿ ಏಟು: 17 ವರ್ಷದ ಬಾಲಕ ಸಾವು, ಪೊಲೀಸರ ಅಮಾನತು
ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಶೀಘ್ರದಲ್ಲೇ ಔಷಧಿ ವಿತರಿಸುವುದಾಗಿ ಹೇಳಿದ್ದಾರೆ. ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತೇವೆ. ಇದರಲ್ಲಿ ಬ್ಲ್ಯಾಕ್, ವೈಟ್ ಅಂತೇನಿಲ್ಲ. ಅದು ಕೇವಲ ಫಂಗಸ್ ಅಷ್ಟೇ. ಕಲರ್ ಬಗ್ಗೆ ಏನಿಲ್ಲ, ಅದು ಹೇಗೆ ಬರುತ್ತೆ ಎಂದು ನಾನು ಈಗಾಗಲೇ ಮಾತನಾಡಿದ್ದೇನೆ. ಬ್ಲ್ಯಾಕ್ ಫಂಗಸ್ ಸಲುವಾಗಿ ಈಗಾಗಲೇ ತಜ್ಞರ ಸಮಿತಿ ರಚನೆ ಮಾಡಿದ್ದು, ಸಮಿತಿ ವರದಿ ನೀಡಿದೆ. ಜಾಸ್ತಿ ದಿನ ಐಸಿಯು ನಲ್ಲಿದ್ದವರು, ಆಕ್ಸಿಜನ್ ಪಡೆದವರಲ್ಲಿ ಈ ಫಂಗಸ್ ಕಾಣಿಸಿಕೊಂಡಿದೆ ಎಂದರು.
ನಂತರ ಕಿಮ್ಸ್ ನ ವೈದ್ಯರೊಂದಿಗೆ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ