ಅಳ್ನಾವರದಿಂದ 11 ಹಳ್ಳಿಗಳು ಧಾರವಾಡ ಗ್ರಾಮೀಣ ಠಾಣೆಗೆ
Team Udayavani, Aug 27, 2019, 10:07 AM IST
ಧಾರವಾಡ: ವಿನಯ್ ಕುಲಕರ್ಣಿಗೆ ಗ್ರಾಮಸ್ಥರು ಅಭಿನಂದಿಸಿದರು.
ಧಾರವಾಡ: ನಗರಕ್ಕೆ ಹತ್ತಿರವಿದ್ದ ಅಳ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದ 11 ಗ್ರಾಮಗಳು ಇದೀಗ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿಕೊಂಡಿದ್ದು, ಕೊನೆಗೂ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.
ಧಾರವಾಡ ತಾಲೂಕಿನ ಪಶ್ಚಿಮ ಭಾಗಕ್ಕಿರುವ ನಿಗದಿ, ಬೆನಕಟ್ಟಿ, ದೇವರಹುಬ್ಬಳ್ಳಿ, ಲಾಳಗಟ್ಟಿ, ದೇವಗಿರಿ, ಹಳ್ಳಿಗೇರಿ, ಹೊಲ್ತಿಕೋಟಿ, ಅಂಬ್ಲಿಕೊಪ್ಪ, ಮುರಕಟ್ಟಿ, ಬಣದೂರು, ಮಾವಿನಕೊಪ್ಪ ಗ್ರಾಮಗಳು ಇದೀಗ ಅಳ್ನಾವರ ಠಾಣೆಯಿಂದ ಧಾರವಾಡ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಸೇರಿದಂತಾಗಿದೆ.
ಧಾರವಾಡ ಗ್ರಾಮೀಣ ಠಾಣೆಗೆ ತಮ್ಮನ್ನು ಸೇರ್ಪಡೆ ಮಾಡುವಂತೆ ಹಳ್ಳಿಯ ಮುಖಂಡರು ಮಾಡಿಕೊಂಡ ಮನವಿಗೆ ಸರ್ಕಾರ ಸ್ಪಂದಿಸಿ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ.
ಕುಲಕರ್ಣಿಗೆ ಅಭಿನಂದನೆ: ಮಾಜಿ ಸಚಿವ ವಿನಯ್ ಕುಲಕರ್ಣಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಕ್ರಮವಹಿಸಲು ಶಿಫಾರಸು ಮಾಡಿದ್ದರು. ಈ ಹಳ್ಳಿಗಳನ್ನು ಅಳ್ನಾವರ ತಾಲೂಕಿಗೆ ಸೇರ್ಪಡೆಗೊಳಿಸಿದಾಗಲೂ ಮರಳಿ ಧಾರವಾಡ ತಾಲೂಕಿನಲ್ಲಿಯೇ ಇರುವಂತೆ ನೋಡಿಕೊಳ್ಳಲು ಶಿಫಾರಸು ಮಾಡಿದ್ದರು. ಹೀಗಾಗಿ ಈ ಹಳ್ಳಿಗಳ ಮುಖಂಡರು ವಿನಯ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಮಲ್ಲನಗೌಡ ಪಾಟೀಲ, ದ್ಯಾಮಪ್ಪ ನವನಕ್ಕಿ, ಮಹಾದೇವಪ್ಪ ನೀರಲಗಿ, ವೀರಭದ್ರ ರೇಶ್ಮಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ