ನಾಳೆಯಿಂದ ಶಾಲೆಗಳಲ್ಲಿ ‘ವೆರಿಗುಡ್‌ 10/10’ ತೆರೆಗೆ


Team Udayavani, Aug 26, 2018, 4:50 PM IST

26-agust-18.jpg

ಹುಬ್ಬಳ್ಳಿ: ಬಾಲಿವುಡ್‌ ತಾರೆ ಜೂಹಿ ಚಾವ್ಲಾ ನಟಿಸಿರುವ ಮಕ್ಕಳ ಆಧಾರಿತ ಕನ್ನಡ ಚಿತ್ರ ‘ವೆರಿಗುಡ್‌ 10/10’ ಚಿತ್ರ ಹ್ಯಾಂಗ್ಯೋ ಐಸ್‌ಕ್ರೀಂ ಕಂಪೆನಿ ಪ್ರಾಯೋಜಕತ್ವದಲ್ಲಿ ಆ. 27ರಿಂದ ರಾಜ್ಯದ ಸರಕಾರಿ ಶಾಲೆಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಯಶವಂತ ಸರದೇಶಪಾಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಕ್ಕಳ ಕಿಡಿಗೇಡಿತನ, ಅದನ್ನು ಸಹಿಸಿಕೊಳ್ಳದ ಪಾಲಕರು ಸೇರಿದಂತೆ ಮಕ್ಕಳ ಮನೋವಿಕಾಸದ ಮೇಲೆ ಚಿತ್ರ ನಿರ್ಮಿಸಲಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಸಾಧ್ಯವಾಗದ ಕಾರಣ ಶಾಲೆಗಳಲ್ಲಿ ಪ್ರದರ್ಶಿಸಲು ಚಿಂತಿಸಲಾಯಿತು. ಇದಕ್ಕೆ ಪೂರಕವಾಗಿ ಶಿಕ್ಷಣ ಇಲಾಖೆಯಿಂದ ಅನುಮತಿ ಕೂಡ ದೊರೆತಿದೆ. ಪ್ರದರ್ಶನಕ್ಕೆ ತಗಲುವ ವೆಚ್ಚದ ಪ್ರಾಯೋಜಕತ್ವವನ್ನು ಹ್ಯಾಂಗ್ಯೋ ಐಸ್‌ಕ್ರೀಂ ಕಂಪನಿ ವಹಿಸಿಕೊಂಡಿದೆ ಎಂದು ತಿಳಿಸಿದರು.

ಬಾಲಿವುಡ್‌ ತಾರೆ ಜೂಹಿ ಚಾವ್ಲಾ ಶಿಕ್ಷಕಿ ಪಾತ್ರದಲ್ಲಿ ನಟಿಸಿದ್ದಾರೆ. ಅಬ್ರಹಾಂ ಲಿಂಕನ್‌ ಬರೆದಿರುವ ಪತ್ರದ ಸಾರಾಂಶದ ಹಾಡಿಗೆ ಜೂಹಿ ಚಾವ್ಲಾ ಧ್ವನಿ ನೀಡಿದ್ದು, ಸಾಕಷ್ಟು ಜನಪ್ರಿಯತೆ ಗಳಿಸಿದೆ. ಗುರುಬಲ ಎಂಟರ್‌ಟೇನರ್ ಹಾಗೂ ಬಾಲಾಜಿ ಕ್ರಿಯೇಶನ್‌ ಅಡಿಯಲ್ಲಿ ನಿರ್ಮಾಣವಾಗಿರುವ ಚಿತ್ರ 90 ನಿಮಿಷದ್ದಾಗಿದೆ. ಬಾಲ ಎಕ್ಸ್‌ಪ್ರೆಸ್‌ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳೇ ಪ್ರಮುಖ ಪಾತ್ರದಲ್ಲಿದ್ದಾರೆ. ಅವರ ಪಾಲಕರಿಗೂ ಅಭಿನಯಿಸಲು ಅವಕಾಶ ನೀಡಲಾಗಿದೆ ಎಂದರು.

124 ವಿದ್ಯಾರ್ಥಿಗಳು ಚಿತ್ರದಲ್ಲಿ ನಟಿಸಿದ್ದು, ಬಾಲ್ಯದ ತುಂಟಾಟ, ತಂದೆ-ತಾಯಿ ಹಾಗೂ ಶಿಕ್ಷಕರ ಅಗತ್ಯತೆ ಕೇಂದ್ರೀಕರಿಸಿ ಚಿತ್ರಿಸಲಾಗಿದೆ. ಈಗಾಗಲೇ ಅಮೆರಿಕ, ಕತಾರ, ಇಟಲಿ, ಮಾಸ್ಕೋದಲ್ಲಿ ಚಿತ್ರ ತೆರೆಕಂಡಿದೆ. ಆದರೆ ರಾಜ್ಯದ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲು ಸಾಧ್ಯವಾಗದ ಕಾರಣ ಪ್ರತಿಯೊಂದು ಶಾಲೆಗೆ ಮುಟ್ಟಿಸುವ ಕಾರ್ಯಕ್ಕೆ ಮುಂದಾಗಲಾಗಿದೆ ಎಂದರು. 

ಆರಂಭದಲ್ಲಿ 100 ಶಾಲೆಗಳ ಪ್ರಾಯೋಜಕತ್ವ ದೊರೆತಿದ್ದು, ಸರಕಾರಿ ಶಾಲೆಗಳನ್ನು ಕೇಂದ್ರೀಕರಿಸಲಾಗಿದೆ. ವಿದ್ಯಾರ್ಥಿಯಿಂದ 10 ರೂ. ಸಂಗ್ರಹಿಸುವಂತೆ ಶಿಕ್ಷಣ ಇಲಾಖೆಯಿಂದ ನಿರ್ದೇಶನವಿದ್ದರೂ ಇದರಲ್ಲಿ ಯಾವುದೇ ಒತ್ತಾಯವಿಲ್ಲ. ಪ್ರದರ್ಶನಕ್ಕೆ ಅಗತ್ಯವಾದ ವಾಹನ, ದೊಡ್ಡ ಪರದೆಯ ಟಿವಿ, ಜನರೇಟರ್‌ ಸೇರಿದಂತೆ ಇತರೆ ಸಾಮಗ್ರಿ ನಮ್ಮಲ್ಲಿವೆ. ಖಾಸಗಿ ಶಾಲೆಗಳಿಂದ ಬೇಡಿಕೆ ಬಂದರೆ ಅಲ್ಲಿಯೂ ಪ್ರದರ್ಶಿಸಲಾಗುವುದು ಎಂದರು.

ಸಾಹಿತ್ಯ ಪ್ರಕಾಶನದ ಎಂ.ಎ. ಸುಬ್ರಹ್ಮಣ್ಯ ಮಾತನಾಡಿ, ಮಕ್ಕಳಿಗಾಗಿ ವಿಭಿನ್ನವಾಗಿ ನಿರ್ಮಾಣವಾಗಿರುವ ಚಿತ್ರವನ್ನು ಮಕ್ಕಳಿಗೆ ಮುಟ್ಟಿಸಬೇಕು ಎನ್ನುವ ಏಕೈಕ ಕಾರಣಕ್ಕೆ ಹ್ಯಾಂಗ್ಯೋ ಐಸ್‌ ಕ್ರೀಂ ಸಂಸ್ಥೆ ಪ್ರಾಯೋಜಕತ್ವ ತೆಗೆದುಕೊಂಡಿದೆ. ಈ ಚಿತ್ರವನ್ನು ವೀಕ್ಷಿಸಿದ ಹ್ಯಾಂಗ್ಯೋ ಐಸ್‌ ಕ್ರೀಂ ಸಂಸ್ಥೆ ಕಾರ್ಯನಿರ್ವಾಹಕ ಚೇರ್ಮ ನ್‌ ದಿನೇಶ ಪೈ ಅವರು ಚಿತ್ರ ಗ್ರಾಮೀಣ ಭಾಗದ ಮಕ್ಕಳಿಗೂ ತಲುಪಲಿ ಎನ್ನುವ ಉದ್ದೇಶದಿಂದ ಪ್ರಾಯೋಜಕತ್ವ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.