ಕೋಡಿ ಹರಿದ ನೀರಸಾಗರ ಜಲಾಶಯ
Team Udayavani, Jul 24, 2021, 7:42 PM IST
ಹುಬ್ಬಳ್ಳಿ: ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ನೀರಸಾಗರ ಜಲಾಶಯ ಭರ್ತಿಯಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಕೋಡಿ ಹರಿದಿದೆ.
ನೀರಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ 15 ದಿನಗಳಿಂದ ಸುರಿದ ಭಾರಿ ಮಳೆಗೆ ಜಲಾಶಯದಲ್ಲಿ ನೀರು ಸಂಗ್ರಹವಾಗಿತ್ತು. ಆದರೆ ಇದೀಗ ಮೂರ್ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯ ಭರ್ತಿಯಾಗಿ ಕೋಡಿ ಹರಿದಿದೆ. ಕೆಳಭಾಗದ ಗ್ರಾಮಸ್ಥರು, ರೈತರು ಮೇಲ್ಭಾಗಕ್ಕೆ ತೆರಳಬೇಕು. ದನಕರುಗಳನ್ನು ಬಿಡಬಾರದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನೀರಸಾಗರ ಜಲಾ ಶಯದಿಂದ ಹಳೇ ಹುಬ್ಬಳ್ಳಿ ಹಾಗೂ ಗೋಕುಲ ರಸ್ತೆ ಭಾಗದ ಪ್ರದೇಶ ಸೇರಿದಂತೆ ನಗರದ ಶೇ.25 ಭಾಗಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತದೆ. 1 ಟಿಎಂಸಿ ಅಡಿ ಸಾಮರ್ಥ್ಯ ಹೊಂದಿದ್ದು, ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ತುಂಬುತ್ತಿದೆ. ಸತತ ಮೂರು ವರ್ಷ ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದರು.
ಪ್ರಸಕ್ತ ವರ್ಷದಲ್ಲಿ ಕೇವಲ 10 ಅಡಿ ನೀರು ಮಾತ್ರ ಬಳಕೆಯಾಗಿತ್ತು. ಕಳೆದ ಎರಡು ವರ್ಷಕ್ಕಿಂತ ಈ ಬಾರಿ ಜಲಾಶಯ ಬೇಗ ಭರ್ತಿಯಾಗಿದೆ. ಗರಿಷ್ಠ ಸಾಮರ್ಥ್ಯದ 38 ಅಡಿಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ