ಬೆಣಚಿ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಗ್ರಾಮದ ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಾಣ

Team Udayavani, Oct 2, 2019, 10:08 AM IST

huballi-tdy-3

ಅಳ್ನಾವರ: ಪ್ರತಿಶತ 80 ಕರ ವಸೂಲಿ ಮತ್ತು ಪ್ರತಿ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿದ ಸಾಧನೆಗೈದ ಬೆಣಚಿ ಗ್ರಾಮವು “ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ.

ಧಾರವಾಡದಿಂದ 30 ಕಿ.ಮೀ. ಅಂತದಲ್ಲಿರುವ ಬೆಣಚಿ ಗ್ರಾಪಂ ಈ ಹಿಂದೆ ಅರವಟಗಿ ಮಂಡಳ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟಿತ್ತು. 1994ರಲ್ಲಿ ಸ್ವತಂತ್ರ ಗ್ರಾಪಂ ಆಗಿ ಅಸ್ತಿತ್ವಕ್ಕೆ ಬಂದಿದೆ. ಬೆಣಚಿ ಗ್ರಾಪಂ ಎರಡು ಕಂದಾಯ ಗ್ರಾಮಗಳು ಹಾಗೂ ಎರಡು ಬೆಚರಾಕ ಗ್ರಾಮಗಳನ್ನು ಒಳಗೊಂಡಿದ್ದು, 2011ರ ಜನಗಣತಿ ಪ್ರಕಾರ 3,509 ಜನಸಂಖ್ಯೆ ಹೊಂದಿದೆ.

ಈ ಗ್ರಾಮದಲ್ಲಿ ಸುಮಾರು 690 ಕುಟುಂಬಗಳು ವಾಸಿಸುತ್ತಿದ್ದು, ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಪ್ರಾಥಮಿಕ ಹಂತದಿಂದ ಹತ್ತನೇಯ ತರಗತಿವರೆಗೆ ಶೈಕ್ಷಣಿಕ ಸೌಲಭ್ಯ ಒಳಗೊಂಡಿದ್ದು, ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಹೊಂದಿದೆ. ತೆರಿಗೆ ವಸೂಲಿಯಲ್ಲಿ ಮುಂಚೂಣಿಯಲ್ಲಿರುವ ಬೆಣಚಿ ಗ್ರಾಪಂ ಶೇ.80ಕ್ಕೂ ಅಧಿಕ ಪ್ರಮಾಣದಲ್ಲಿ ತೆರಿಗೆ ಸಂಗ್ರಹಣೆ ಮಾಡಿದ್ದು, ಪ್ರತಿ ಕುಟುಂಬ ಶೌಚಾಲಯ ಹೊಂದಿದೆ. ಬಯಲು ಶೌಚ ಮುಕ್ತ ಗ್ರಾಮವಾಗಿದ್ದು ವಿಶೇಷ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಆನಂದ ಕೆಂಚಣ್ಣವರ, ಗ್ರಾಪಂ ಅಧ್ಯಕ್ಷೆ ಅಮೀನಾಬೇಗಂ ನದಾಫ್‌ ಅವರ ಮುಂದಾಳತ್ವದಲ್ಲಿ ಉಪಾಧ್ಯಕ್ಷ ಪ್ರಕಾಶ ಕುಣಕಿಕೊಪ್ಪ, ಸದಸ್ಯರಾದ , ಮಹಾದೇವ ಗೋದಗೇರಿಕರ, ರುಕ್ಮವ್ವ ದುಬ್ಬನಮರಡಿ, ರಹಿಮಾನಸಾಬ ದೊಡಮನಿ, ಸುವರ್ಣಾ ಬೈಲೂರ, ರೇಖಾ ಹರಿಜನ, ಜಗದೀಶ ಜಗತಾಪ ಮತ್ತು ಇತರೆ ಸಿಬ್ಬಂದಿಗಳ ಸಹಕಾರದಲ್ಲಿ ಗ್ರಾಮದ ಅಭಿವೃದ್ಧಿ ಸಾಧಿಸಿದ್ದಾರೆ.

ಇಂದು ಪ್ರಶಸ್ತಿ ಪ್ರದಾನ: ಉತ್ತಮ ಆಡಳಿತ, ಗ್ರಾಮಸ್ಥರ ಪಾಲ್ಗೊಳ್ಳುವಿಕೆ, ಮೂಲ ಸೌಕರ್ಯಗಳನ್ನು ಒದಗಿಸುವಿಕೆ, ಸರ್ಕಾರಿ ಯೋಜನೆಗಳ ಸದ್ಬಳಕೆ, ಆರ್ಥಿಕ ಸುಧಾರಣೆ ಎಲ್ಲವನ್ನು ಗಮನಿಸಿ ನೀಡಲಾಗುತ್ತಿರುವ “ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಬೆಣಚಿ ಗ್ರಾಪಂ ಪಾತ್ರವಾಗಿದೆ. ಅ.2ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಬಾಂಕ್ವೆಟ್‌ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ವಿತರಿಸಲಾಗುತ್ತದೆ. ಗ್ರಾಮ ಪಿಡಿಒ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸದಸ್ಯರು ಮತ್ತು ಸಿಬ್ಬಂದಿಯವರ ಸಹಕಾರದಲ್ಲಿ ಸ್ವತ್ಛತೆ ನೈರ್ಮಲೀಕರಣ ಜೊತೆಗೆ ಕರ ವಸೂಲಿಯಲ್ಲಿ ಉತ್ತಮ ಪ್ರಗತಿಸಾಧಿಸಲು ಸಾಧ್ಯವಾಗಿದೆ. ಗಾಂಧಿಗ್ರಾಮ ಪುರಸ್ಕಾರ ಪಡೆಯುವುದು ಹೆಮ್ಮೆಯ ಸಂಗತಿ. ಆನಂದ ಕೆಂಚನ್ನವರ, ಬೆಣಚಿ ಪಿಡಿಒ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.