Hubballi ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಅಂಜುಮನ್ ಅರ್ಜಿ ತಿರಸ್ಕೃತ

ಮಹಾನಗರ ಪಾಲಿಕೆ ಠರಾವಿಗೆ ಒಪ್ಪಿಗೆ ಸಿಕ್ಕಂತಾಗಿದೆ...

Team Udayavani, Sep 15, 2023, 2:38 PM IST

1-dasd

ಧಾರವಾಡ : ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋಟ್೯ ವಜಾಗೊಳಿಸಿದೆ.

ಗಣೇಶೋತ್ಸವ ಕುರಿತು ಮಹಾನಗರ ಪಾಲಿಕೆ ಕೈಗೊಂಡ ನಿರ್ಣಯವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ ಇಸ್ಲಾಂ ಸಂಸ್ಥೆಯವರು ಧಾರವಾಡ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ ಸಚಿನ‌ ಮಗದುಮ್ಮ‌ಅವರಿದ್ದ ಏಕಸದಸ್ಯ ಪೀಠವು ಮೇಲ್ಮನವಿ ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದೆ. ಈ ಮೂಲಕ ಎರಡನೆ ವರ್ಷವು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅನುಕೂಲ ಆದಂತಾಗಿದೆ.
ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಇದೀಗ ಮಹಾನಗರ ಪಾಲಿಕೆ ಠರಾವಿಗೆ ಒಪ್ಪಿಗೆ ಸಿಕ್ಕಂತಾಗಿದೆ.

ಗಣೇಶ ಪ್ರತಿಷ್ಠಾಪನೆಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ,ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ,ಮಾಜಿ ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಅನೇಕರು ಕಳೆದ ಎರಡು ದಿನದಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದ್ದರು.

ವಿಜಯೋತ್ಸವ

ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕಿರಿಸಿದ ಹಿನ್ನೆಲೆಯಲ್ಲಿ ಅವಕಾಶ ಕೋರಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ವಿಜಯೋತ್ಸವ ಆಚರಿಸಿದರು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೋರಿ ನಡೆಸುತ್ತಿರುವ ಹೋರಾಟಗಾರರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳು ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ‌. ಹೈಕೋರ್ಟ್ ಈ ನಿರ್ಧಾರ ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ‌ ಎಂದು ಅಭಿಪ್ರಾಯಪಟ್ಟರು. ಪಾಲಿಕೆ ಆಯುಕ್ತರ ಅನುಮತಿಗೆ ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಮುಂದೊರೆದಿದೆ.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಕಳೆದ ಬಾರಿ ಶಾಂತರೀತಿಯಿಂದ ಗಣೇಶೋತ್ಸವ ಮಾಡಿದ್ದೇವೆ. ಪಾಲಿಕೆಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಆದರೂ ಪಾಲಿಕೆ ಆಯುಕ್ತರು ಅನುಮತಿ ಕೊಡಲು ವಿಳಂಬ ಮಾಡಿದ್ದು ಸರಿಯಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ಸೂಚನೆಯಂತೆ ಕಮೀಷನರ್ ಹೀಗೆ ಮಾಡಿದ್ದಾರೆ. ಗಣೇಶನ ವಿಚಾರದಲ್ಲಿ ಹೀಗೆ ಮಾಡಿದ್ದು ವಿಷಾಧನೀಯ. ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸಿದವರಿಗೆ ಹೈಕೋರ್ಟ್ ಸರಿಯಾಗಿ ಪಾಠ ಕಲಿಸಿದೆ. ವಿರೋಧಿಗಳ ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ. ವಿಜೃಂಭಣೆಯಿಂದ ಗಣೇಶೋತ್ಸವ ಮಾಡುತ್ತೇವೆ ಎಂದರು.

ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ ಮಾತನಾಡಿ, ಗಣೇಶ ವಿರೋಧಿಗಳ ಕಪಾಳಕ್ಕೆ ಹೈಕೋರ್ಟ್ ಸರಿಯಾಗಿ ಬಾರಿಸಿದೆ. ಪ್ರಥಮ ಪೂಜಿತ ಗಣೇಶನ ಪ್ರತಿಷ್ಠಾಪಣೆ ವಿರೋಧಿಸಿದವರಿಗೆ ತಕ್ಕ ಶಾಸ್ತಿಯಾಗಿದೆ. ಚೆನ್ನಮ್ಮ ಮೈದಾನದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತೇವೆ. ಗಣೇಶೋತ್ಸವ ಬೇಡ ಅನ್ನೋರು ಪಾಕಿಸ್ತಾನಕ್ಕೆ ಹೋಗಲಿ. ಎಸ್‌ಡಿಪಿಐ, ಪಿಎಫ್‌ಐ, ಎಐಎಮ್‌ಐಎಮ್ ದೇಶ ವಿರೋಧಿಗಳು. ಅಂಜುಮನ್ ಸಂಸ್ಥೆಯವರು ಈಗಲಾದರೂ ಬುದ್ಧಿಕಲಿಯಲಿ ಎಂದರು.

ಟಾಪ್ ನ್ಯೂಸ್

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.