ಏಜೆಂಟರನ್ನು  ದೂರವಿಟ್ಟು ಸರ್ಕಾರಿ ಸೌಲಭ್ಯ ಪಡೆಯಿರಿ


Team Udayavani, Aug 6, 2018, 4:51 PM IST

6-agust-20.jpg

ಅಳ್ನಾವರ: ಸರ್ಕಾರಿ ಆಡಳಿತ ಪಾರದರ್ಶಕವಾಗಿದ್ದು, ಅರ್ಹರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಏಜೆಂಟರನ್ನು ಅವಲಂಬಿಸಬಾರದು ಎಂದು ಧಾರವಾಡ ತಹಶೀಲ್ದಾರ್‌ ಪ್ರಕಾಶ ಕುದರಿ ಹೇಳಿದರು. ಕುಂಬಾರಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಸಾಧ್ಯವಾದಷ್ಟು ಬೇಡಿಕೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಸಲುವಾಗಿ ಜಾರಿಗೆ ತಂದಿರುವ ಈ ಕಾರ್ಯಕ್ರಮದಿಂದ ಜನರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ ಎಂದರು.

ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ ಪಡೆಯಲು ಫಲಾನುಭವಿಗಳು ನೇರವಾಗಿ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಬೇಕು. ಇದರಿಂದ ಏಜೆಂಟರನ್ನು ದೂರವಿಡಬಹುದಾಗಿದೆ. ಈಗಾಗಲೇ ಕಂದಾಯ ಇಲಾಖೆ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಫಲಾನುಭವಿಗಳಿಗೆ ಮಾಸಾಶನ ಮಂಜೂರು ಮಾಡಿಸಲು ಪ್ರಯತ್ನಿಸುತ್ತಿದ್ದು, ಅಗತ್ಯ ದಾಖಲೆಗಳನ್ನು ಒದಗಿಸಿ ಯೋಜನೆ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು. ಎಲ್ಲಾ ಅ ಧಿಕಾರಿಗಳು ಕಾರ್ಯಕ್ರಮಕ್ಕೆ ಹಾಜರಾದಾಗ ಮಾತ್ರ ಇದರ ಲಾಭ ಜನರಿಗೆ ತಲುಪಲು ಸಾಧ್ಯವಿದೆ ಎಂದು ಸಾರ್ವಜನಿಕರು ದೂರಿದಾಗ ಪ್ರತಿಕ್ರಿಯಿಸಿದ ತಹಶೀಲ್ದಾರ್‌, ಜನಸ್ಪಂದನ ಕಾರ್ಯಕ್ರಮಕ್ಕೆ ಹಾಜರಾಗದ ಅ ಧಿಕಾರಿಗಳ ಮೇಲೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ವರದಿ ಮಾಡಲಾಗುವುದೆಂದು ತಿಳಿಸಿದರು.

127 ಶಾಲಾ ಕೊಠಡಿ ಶಿಥಿಲ: ಕ್ಷೇತ್ರ ಶಿಕ್ಷಣಾಧಿಕಾರಿ ವಿದ್ಯಾ ನಾಡಿಗೇರ ಮಾತನಾಡಿ, ಶಿಕ್ಷಣದ ಗುಣಮಟ್ಟದ ಕೊರತೆ ದೂರುಗಳು ಬಂದರೆ ಕರ್ತವ್ಯದಿಂದ ನುಣುಚಿಕೊಳ್ಳುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಕೈಕೊಳ್ಳಲು ಸಿದ್ಧ ಎಂದರು. ತಾಲೂಕಿನಲ್ಲಿ 127 ಕೊಠಡಿಗಳು ಪೂರ್ಣ ಶಿಥಿಲಗೊಂಡಿದ್ದು, ಕೆಲವಡೆ ಅನುಮತಿ ಕೋರಿ ಮೇಲಧಿ ಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಾಲೆಗಳಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆ ಸರಿಪಡಿಸಲು ಸಾರ್ವಜನಿಕರು ಒತ್ತಾಯಿಸಿದಾಗ ತಾಲೂಕಿನಲ್ಲಿ 245 ಶಾಲೆಗಳು ಇದ್ದು, ಕರ್ತವ್ಯದ ಒತ್ತಡದಲ್ಲಿ ಶಾಲೆಗಳಿಗೆ ಭೇಟಿ ನೀಡುವುದು ಸಾಧ್ಯ ಆಗುತ್ತಿಲ್ಲವೆಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದರು. ಆಗ ಗ್ರಾಮಸ್ಥ ಅಶೋಕ ಸಾವಂತ ಆಕ್ಷೇಪಿಸಿ, ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಲು ಶಿಕ್ಷಣ ಇಲಾಖೆಯೇ ಕಾರಣವೆಂದು ಆರೋಪಿಸಿದರು. ಬೆಳೆ ವಿಮೆ ಬಗ್ಗೆ ರೈತರಲ್ಲಿ ಮಾಹಿತಿ ಕೊರತೆ ಇದ್ದು, ಇದರ ಬಗ್ಗೆ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲು ಕೃಷಿ ಇಲಾಖೆ ಗಮನ ಹರಿಸಬೇಕೆಂದು ಕೋಗಿಲಗೇರಿ ಗ್ರಾಮದ ರೈತ ಮುಖಂಡ ಭರತೇಶ ಪಾಟೀಲ ಆಗ್ರಹಿಸಿದರು. ಗ್ರಾಪಂ ಮೂಲಕ ನೂರಕ್ಕೂ ಅಧಿಕ ಸೇವೆ ದೊರೆಯುತ್ತಿವೆ ಎಂದು ಹೇಳಲಾಗುತ್ತಿದೆ. ಆದರೆ ಯಾವೊಂದು ಸೇವೆ ಸಹ ದೊರೆಯುತ್ತಿಲ್ಲ ಎಂದು ನಾಗರಾಜ ಬುಡರಕಟ್ಟಿ ದೂರಿದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ನಿಂಗಪ್ಪ ಘಾಟೀನ ಮಾತನಾಡಿದರು. ಗ್ರಾಪಂ ಅಧ್ಯಕ್ಷ ವಿಶ್ವಂಬರ ಬನಸಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಳ್ನಾವರ ತಹಶೀಲ್ದಾರ್‌ ಪಾರ್ವತಿ, ಕೆಎಎಸ್‌ ತರಬೇತಿ ಅಧಿಕಾರಿ ಶೇಖರಪ್ಪ, ಗ್ರಾಪಂ ಉಪಾಧ್ಯಕ್ಷೆ ಸುಶೀಲಾ ಹಿರೇಕೆರೂರ, ಸದಸ್ಯರಾದ ಮಲ್ಲಪ್ಪ ಗಾಣಿಗೇರ, ಅಶೋಕ ಜೋಡಟ್ಟಿ, ಎಪಿಎಂಸಿ ಉಪಾಧ್ಯಕ್ಷ ರಾಯಪ್ಪ ಹುಡೆದ, ಶಿರಸ್ತೇದಾರ ಟಿ.ಬಿ. ಬಡಿಗೇರ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.