ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ
Team Udayavani, May 19, 2018, 5:23 PM IST
ಉಪ್ಪಿನಬೆಟಗೇರಿ: ಗ್ರಾಮದ ಶ್ರೀ ಮೂರುಸಾವಿರ ವಿರಕ್ತಮಠಕ್ಕೆ ಮಾಜಿ ಶಾಸಕ ಎ.ಬಿ. ದೇಸಾಯಿ ಭೇಟಿ ನೀಡಿ ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ವೇಳೆ ಕುಮಾರ ವಿರೂಪಾಕ್ಷ ಸ್ವಾಮೀಜಿ ಮಾತನಾಡಿ, ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಮೃತ ದೇಸಾಯಿ ಜಯ ಸಾಧಿಸಿ ಶಾಸಕರಾಗಿದ್ದು ಈ ಕ್ಷೇತ್ರದ ಸುದೈವ. ಜನರು ಚಿಕ್ಕ ವಯಸ್ಸಿನವರಾದ ಅಮೃತ ದೇಸಾಯಿ ಅವರನ್ನು ಆರಿಸಿ ತಂದಿದ್ದು ಎಲ್ಲರಿಗೂ ಸಂತೋಷದ ವಿಷಯ. ಅವರು ಜನರ ಅಪೇಕ್ಷೆಯಂತೆ ಕ್ಷೇತ್ರದಲ್ಲಿ ಉತ್ತಮವಾದ ಆಡಳಿತ ನೀಡಬೇಕು ಎಂದರು.
ಮಾಜಿ ಶಾಸಕ ಎ.ಬಿ. ದೇಸಾಯಿ ಮಾತನಾಡಿ, ಕ್ಷೇತ್ರದ ಜನ ನಂಬಿಕೆ ಇಟ್ಟು ನನ್ನ ಮಗ ಅಮೃತ ದೇಸಾಯಿ ಅವರನ್ನು ಗೆಲ್ಲಿಸಿದ್ದು ನಾನು ಚಿರ ಋಣಿಯಾಗಿದ್ದೇನೆ. ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕೆ ಮೊದಲು ಆದ್ಯತೆ ನೀಡಿ ಹಂತ ಹಂತವಾಗಿ ಜನರ ಎಲ್ಲ ಕಾರ್ಯಗಳನ್ನು ಮಾಡಲು ಅಮೃತಗೆ ತಿಳಿಸಲಾಗುವುದು ಎಂದರು.
ಶಂಕ್ರಯ್ಯ ಇಂಚಗೇರಿಮಠ, ಧರಣೇಂದ್ರ ಅಷ್ಟಗಿ, ಬಸವರಾಜ ಕಬ್ಬೂರ, ರುದ್ರಪ್ಪ ಬಡ್ಡೂರ, ದುಂಡಪ್ಪ ಪಟ್ಟಣಶೆಟ್ಟಿ, ಬಸವಂತಪ್ಪ ಲಗಮಣ್ಣವರ, ಕೃಷ್ಣಾ ಬುದ್ನಿ, ಈರಪ್ಪ ಬಡ್ಡೂರ, ಮಡಿವಾಳಪ್ಪ ಕೋಟೂರ, ವಿರೂಪಾಕ್ಷಪ್ಪ ಬೆಳವಡಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ