ರಂಗಕಲೆ-ಸಾಹಿತ್ಯ ಕರುಳುಬಳ್ಳಿ  ಸಂಬಂಧ: ಚೌಗಲೆ 


Team Udayavani, Aug 4, 2018, 4:59 PM IST

4-agust-18.jpg

ಬೆಳಗಾವಿ: ಸಮಾಜ ಆರೋಗ್ಯವಾಗಿರಲು ಹಾಗೂ ಕಲಾ ಶ್ರೀಮಂತಿಕೆ ಪಡೆಯಬೇಕಾದರೆ ರಂಗ ಕಲೆ, ಸಾಹಿತ್ಯದೊಂದಿಗೆ ನಂಟು ಬೆಸೆದುಕೊಳ್ಳಬೇಕು. ಇದೊಂದು ಕರುಳು ಬಳ್ಳಿಯ ಸಂಬಂಧವಾಗಬೇಕು ಎಂದು ನಾಟಕಕಾರ ಡಾ| ಡಿ.ಎಸ್‌. ಚೌಗಲೆ ಅಭಿಪ್ರಾಯಪಟ್ಟರು.

ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಯುವ ರಂಗ ಸಾಂಸ್ಕೃತಿಕ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ನಡೆದ ರಂಗ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಸಾಹಿತ್ಯ, ಲಲಿತ ಕಲೆ, ರಂಗಭೂಮಿ, ಜಾನಪದ ಸಾಹಿತ್ಯಗಳು ಗಟ್ಟಿಯಾಗಿ ನೆಲೆಯೂರಲು ಉತ್ತಮ ಸಂಬಂಧ ಹೊಂದಬೇಕಾಗುತ್ತದೆ ಎಂದರು.

ಸಮಾಜದಲ್ಲಿ ಧಾರ್ಮಿಕ ಸೇರಿದಂತೆ ಇತರೆ ಕಾರ್ಯ ಚಟುವಟಿಕೆಗಳಿಗೆ ಜನ ದಾನ, ಸಹಾಯಧನ ನೀಡುತ್ತಾರೆ. ಆದರೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಗಳಿಗೆ ಸಹಾಯ ಮಾಡಲು ಹಿಂದೇಟು ಹಾಕುತ್ತಾರೆ. ಈ ಬೆಳವಣಿಗೆ ರಂಗಭೂಮಿ ಕ್ಷೀಣಿಸಲು ಪ್ರಮುಖ ಕಾರಣವಾಗಿದೆ. ಮರಾಠಿ ರಂಗಭೂಮಿಗೆ ಅಲ್ಲಿಯ ಸಮಾಜ ಆರ್ಥಿಕ ಸಹಾಯ ಮಾಡುವ ಮೂಲಕ ಬೆಳೆಸುತ್ತಿದೆ. ಇದು ಇಲ್ಲಿಯ ಪ್ರದೇಶಕ್ಕೆ ಮಾದರಿಯಾಗಬೇಕಿದೆ ಎಂದರು.

ರಂಗಭೂಮಿಗೆ ಸೇವೆ ಸಲ್ಲಿಸುತ್ತಿರುವ ಬಾಬಾಸಾಹೇಬ ಕಾಂಬಳೆ ಹಾಗೂ ರಾಜು ಮಠಪತಿ ಅಂಥ ಯುವ ರಂಗಕರ್ಮಿಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಈ ರಂಗ ಶಿಬಿರಕ್ಕೆ ಆಯ್ಕೆ ಮಾಡಿಕೊಂಡಿರುವ ಸತ್ಯಶೋಧಕ ನಾಟಕ ಮರಾಠಿಯಲ್ಲಿ ಪ್ರಸಿದ್ಧಿ ಪಡೆದಿದೆ. ಮರಾಠಿಯಲ್ಲಿ ಖ್ಯಾತ ನಿರ್ದೇಶಕ ಅತುಲ ಪೇಠೆ ನಿರ್ದೇಶಿಸಿದರೆ, ಕನ್ನಡದಲ್ಲಿ ಜನಮಾನಸ ತಂಡಕ್ಕೆ ಗಣೇಶ ಅವರು ನಿರ್ದೇಶನ ಮಾಡಿದ್ದಾರೆ. ಇಲ್ಲಿಯೂ ಯುವ ನಿರ್ದೇಶಕರು ಉತ್ತಮವಾಗಿ ನಾಟಕ ಕಟ್ಟಿಕೊಡಲಿ ಎಂದು ಹಾರೈಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಪ್ಪ ಅದರಗುಂಚಿ ಮಾತನಾಡಿ, ಸದ್ಯ ರಂಗಭೂಮಿ ಅನುದಾನಕ್ಕಾಗಿ ಆಟ ಎಂಬ ಸ್ಥಿತಿಗೆ ಬಂದು ತಲುಪಿದೆ. ಹಣ ನೀಡಿದಾಗ ಮಾತ್ರ ನಾಟಕಗಳು ಪ್ರದರ್ಶನವಾಗುತ್ತಿವೆಯೇ ಎಂಬ ಭಾವ ಮೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಕಲೆ-ಸಂಸ್ಕೃತಿ ಬೆಳೆಯಬೇಕಾದರೆ ಸಹಾಯ-ಸಹಕಾರ ಅಗತ್ಯವಾಗಿದೆ ಎಂದರು. 

ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ರವಿ ಕೋಟಾರಗಸ್ತಿ ಹಾಗೂ ಬಾಬಾ ಸಾಹೇಬ ಕಾಂಬಳೆ ಮಾತನಾಡಿದರು. ನಾಟಕ ಅಕಾಡೆಮಿ ಸದಸ್ಯ ಬಸವರಾಜ ದೊಡಮನಿ, ಅಧ್ಯಕ್ಷತೆ ವಹಿಸಿದ್ದ ಅಶೋಕ ಮಳಗಲಿ, ರಂಗ ನಟ ಮಂಜುನಾಥ ನೀಲಣ್ಣವರ ಮಾತನಾಡಿದರು. ಯುವ ರಂಗ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ರಾಜು ಮಠಪತಿ, ಬಸವರಾಜ ತಳವಾರ ಇತರರು ಇದ್ದರು. 

ವಿದ್ಯಾರ್ಥಿಗಳಲ್ಲಿ ರಂಗಭೂಮಿ ಶಿಕ್ಷಕಣ ನೀಡುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಶಾಲೆಗಳಿಗೆ ರಂಗ ಶಿಕ್ಷಕರನ್ನು ನೇಮಿಸುವ ಬಗ್ಗೆ ಚಿಂತಿಸಲಾಗಿದೆ ಎಂದು ಶಿಕ್ಷಣ ಸಚಿವ ಮಹೇಶ ಅವರ ಹೇಳಿಕೆ ಇಂದಿನ ದಿನಮಾನಕ್ಕೆ ಸ್ತುತ್ಯಾರ್ಹವಾಗಿದೆ. ಅಭಿನಂದಿಸುತ್ತೇನೆ.
 ಡಾ| ಡಿ.ಎಸ್‌. ಚೌಗಲೆ, ನಾಟಕಕಾರರು

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.