ಕ್ಯಾನ್ಸರ್‌ ಪೀಡಿತರಿಗೆ ನೈತಿಕ ಬೆಂಬಲ ನೀಡಿ


Team Udayavani, Feb 4, 2020, 10:49 AM IST

huballi-tdy-2

ಹುಬ್ಬಳ್ಳಿ: ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವವರಿಗೆ ನೈತಿಕ ಬೆಂಬಲ ತೋರಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗಬೇಕು ಎಂದು ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌ ಹೇಳಿದರು.

ಸೋಮವಾರ ವಿಶ್ವ ಕ್ಯಾನ್ಸರ್‌ ದಿನ ಪ್ರಯುಕ್ತ ದೇಸಾಯಿ ವೃತ್ತ ಹಾಗೂ ರೈಲ್ವೆ ನಿಲ್ದಾಣದಲ್ಲಿ ಕ್ಯಾನ್ಸರ್‌ ಕುರಿತು ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌, ಸ್ವರ್ಣ ಗ್ರುಪ್‌ ಹಾಗೂ ನೈಋತ್ಯ ರೈಲ್ವೆ ವಲಯ ವತಿಯಿಂದ ಆಯೋಜಿಸಿದ್ದ ಕ್ಯಾನ್ಸರ್‌ ಜಾಗೃತಿ ಕಾರ್ಯಕ್ರಮ ಹಾಗೂ ಕಿತ್ತಳೆ-ನೀಲಿ ಬಣ್ಣದ ವಿದ್ಯುತ್‌ ದೀಪಗಳಿಗೆ ಚಾಲನೆ ನೀಡಿ ಮಾತನಾಡಿದರು. ಕ್ಯಾನ್ಸರ್‌ ಕಾಯಿಲೆಯು ರೋಗಿಯ ಜೊತೆಗೆ ಅವರ ಕುಟುಂಬವನ್ನು ಸಂಕಷ್ಟಕ್ಕೀಡು ಮಾಡುತ್ತದೆ. ಈ ಕಾಯಿಲೆಯಿಂದ ಪಾರಾಗಲು ಇಡೀ ಆಸ್ತಿಯನ್ನು ಕಳೆದುಕೊಂಡು ಕೊನೆಗೆ ಸಾವನ್ನಪ್ಪುವ ಘಟನೆಗಳನ್ನು ನೋಡಿದ್ದೇವೆ. ಹೀಗಾಗಿ ಈ ಕಾಯಿಲೆ ಬಗ್ಗೆ ಉದಾಸೀನ ಮಾಡದೆ ಸಕಾಲಕ್ಕೆ ಚಿಕಿತ್ಸೆ ಪಡೆದು ಆರಂಭದ ಹಂತದಲ್ಲೇ ಗುಣಮುಖರಾಗಬೇಕು. ರೋಗದಿಂದ ಬಳಲುತ್ತಿರುವ ವ್ಯಕ್ತಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ರೋಗದ ಕುರಿತು ಮಾಹಿತಿ ಪಡೆದು ಜಾಗೃತರಾಗಬೇಕು ಎಂದು ಹೇಳಿದರು.

ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌ ಸಿಒಒ ಡಾ| ಜೈಕಿಶನ್‌ ಅಗಿವಾಲ ಮಾತನಾಡಿ, ವಿಶ್ವ ಕ್ಯಾನ್ಸರ್‌ ದಿನ ಪ್ರಯುಕ್ತ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿರುವುದು ನಗರದಲ್ಲಿ ಮೊದಲನೆಯದಾಗಿದೆ. ಪ್ರತಿವರ್ಷ ಸುಮಾರು 18 ಲಕ್ಷ ಜನರಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಮುಂಜಾಗ್ರತೆ ಅಥವಾ ಮೊದಲ ಹಂತದಲ್ಲೇ ಚಿಕಿತ್ಸೆ ಪಡೆಯದ ಕಾರಣ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ದೇಸಾಯಿ ವೃತ್ತದಲ್ಲಿ ಕಿತ್ತಳೆ ಹಾಗೂ ನೀಲಿ ಬಣ್ಣದ ವಿದ್ಯುತ್‌ದೀಪಗಳನ್ನು ಕಾಯಂ ಉಳಿಸಲಾಗುವುದು ಎಂದರು.

ಸ್ವರ್ಣ ಗ್ರುಪ್‌ನ ಡಾ| ವಿಎಸ್‌ವಿ ಪ್ರಸಾದ ಮಾತನಾಡಿ, ಕಾಯಿಲೆ ಬಾರದಂತೆ ಎಚ್ಚರ ವಹಿಸುವುದು ಉತ್ತಮ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಲಯನ್ಸ್‌ ಕ್ಲಬ್‌, ಲಯನ್ಸ್‌ ಪರಿವಾರ ಹಾಗೂ ರೋಟರಿ ಕ್ಲಬ್‌ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ, ಎಜಿಎಂ ಪಿ.ಕೆ. ಮಿಶ್ರಾ, ಡಾ| ಸಂಜಯ ಮಿಶ್ರಾ, ಡಾ| ರುದ್ರೇಶ ತಬಾಲಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.