“ಜನಪರ ಕಾರ್ಯದಿಂದ ಜನರ ವಿಶ್ವಾಸ ಇಮ್ಮಡಿ’
Team Udayavani, Jul 15, 2021, 10:30 PM IST
ಹುಬ್ಬಳ್ಳಿ: ಇಲ್ಲಿನ ವಾರ್ಡ್ ಸಂಖ್ಯೆ 68ರ ಘಂಟಿಕೇರಿ ಓಣಿ ಮಂಗಳವಾರ ಪೇಟೆಯ ಮುಖ್ಯರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಜನಸಂಪರ್ಕ ಕಚೇರಿ ಆರಂಭಿಸಲಾಗಿದೆ. ಕಚೇರಿ ಹಾಗೂ ಉಚಿತ ಆನ್ಲೈನ್ ಸೇವಾ ಕೇಂದ್ರವನ್ನು ಶಾಸಕ ಪ್ರಸಾದ ಅಬ್ಬಯ್ಯ ಬುಧವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸರಕಾರಿ ಸೇವೆ ಹಾಗೂ ಸೌಲಭ್ಯಗಳನ್ನು ಜನರು ಪಡೆಯಲು ಹಾಗೂ ಅವರ ನೋವುಗಳಿಗೆ ಸ್ಪಂದಿಸುವ ಜನೋಪಯೋಗಿ ಕಾರ್ಯಗಳನ್ನು ಮಾಡಿದಾಗ ಮಾತ್ರ ಜನಸಂಪರ್ಕ ಕಚೇರಿಗೆ ನೈಜ ಅರ್ಥ ಬರಲಿದೆ ಎಂದರು. ಜನರು ನಮ್ಮ ಮೇಲೆ ಇರಿಸಿರುವ ವಿಶ್ವಾಸಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಬೇಕು. ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಜನರು ಎರಡು ಬಾರಿ ನನಗೆ ಆಶೀರ್ವಾದ ಮಾಡಿದ್ದು, ಅವರ ನಿರೀಕ್ಷೆ ಹುಸಿಯಾಗದಂತೆ ಕಾರ್ಯನಿರ್ವಹಿಸಿದ್ದೇನೆ.
ಜನಪರ ಕಾರ್ಯಗಳಿಂದ ಜನರ ವಿಶ್ವಾಸ ಗೆಲ್ಲಲು ಸಾಧ್ಯವಾಗಲಿದೆ. ಜನಸಂಪರ್ಕ ಕಚೇರಿ ಉತ್ತಮ ಸ್ಪಂದನೆ ಮೂಲಕ ಮಾದರಿಯಾಗಲಿ ಎಂದರು. ಕ್ಷೇತ್ರ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಪಡಿಸಿದ ಹೆಮ್ಮೆ ಇದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 18.35 ಕೋಟಿ ರೂ. ವೆಚ್ಚದಲ್ಲಿ ಜನತಾ ಬಜಾರ ಹೈಟೆಕ್ ಮಾರುಕಟ್ಟೆ ಸಂಕೀರ್ಣ, 14 ಕೋಟಿ ರೂ. ವೆಚ್ಚದಲ್ಲಿ ಹಳೇ ಹುಬ್ಬಳ್ಳಿ ಮಾರುಕಟ್ಟೆ ಸಂಕೀರ್ಣ, 5.38 ಕೋಟಿ ರೂ. ವೆಚ್ಚದಲ್ಲಿ ಗಣೇಶಪೇಟೆಯಲ್ಲಿ ಗೋವಾ ಮಾದರಿ ಹೈಟೆಕ್ ಮೀನು ಮಾರುಕಟ್ಟೆ ಕಾಮಗಾರಿ, 3 ಕೋಟಿ ರೂ. ವೆಚ್ಚದಲ್ಲಿ ಬಿಡ್ನಾಳದ ಆರ್. ಕೆ.ಪಾಟೀಲ ಶಾಲೆ ಹಾಗೂ 1 ಕೋಟಿ ರೂ. ವೆಚ್ಚದಲ್ಲಿ ಸದಾಶಿವ ನಗರ ಶಾಲೆ ಅಭಿವೃದ್ಧಿ ಪಡಿಸಲಾಗುತ್ತಿದೆ.
1.2 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಶಾಲೆಗಳಿಗೆ ಸವಾಲಾಗುವ ರೀತಿಯಲ್ಲಿ ಘಂಟಿಕೇರಿ ಶಾಸಕರ ಸರಕಾರಿ ಮಾದರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಈ ವಾರ್ಡ್ನಲ್ಲಿ ಸುಮಾರು 4 ಸಾವಿರ ಆಹಾರ ಧಾನ್ಯಗಳ ಕಿಟ್ ವಿತರಣೆ, ಸ್ವತ್ಛತೆ ಕಾರ್ಯಗಳನ್ನು ಕೈಗೊಂಡಿದಲ್ಲದೆ, ಇದೀಗ ಜನಸಂಪರ್ಕ ಕಚೇರಿ ಆರಂಭಿಸಿರುವ ನಿರಂಜನ ಹಿರೇಮಠ ಅವರ ಕಾರ್ಯ ಶ್ಲಾಘನೀಯ ಎಂದರು. ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ ಮಾತನಾಡಿದರು. ಮುಖಂಡರಾದ ಮೋಹನ ಅಸುಂಡಿ, ಯಮನೂರ ಗುಡಿಹಾಳ, ಮೆಹಮೂದ್, ನಿರಂಜನ ಹಿರೇಮಠ, ಶೇಖಣ್ಣ, ಪ್ರಕಾಶ, ಈಶ್ವರಪ್ಪ, ಬಸಪ್ಪ, ಈಶ್ವರಪ್ಪ, ಕಲ್ಲಪ್ಪ, ಗಂಗಾಧರ, ಎಸ್.ಜಿ. ಹಿರೇಮಠ, ಪ್ರವೀಣ, ಶಿವಾನಂದ, ವಾದಿರಾಜ, ಶರಣು, ಆರ್.ಆರ್. ಕುಲಕರ್ಣಿ, ವಿ.ಎಸ್. ಘಂಟಿಮಠ, ಸುರೇಖಾ, ಪದ್ಮಾ, ಪಲ್ಲವಿ ದುಂಬಾಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್