ಮೇವು ದಾಸ್ತಾನಿಗೆ ನೀಡಿ ಮೊದಲ ಆದ್ಯತೆ

•ಪಶು ಇಲಾಖೆ ಅಧಿಕಾರಿಗೆ ಜಿಪಂ ಸದಸ್ಯರ ಸೂಚನೆ•ರೈತರಿಗೆ ಅಗತ್ಯ ಬೀಜ ಮಾಹಿತಿ ನೀಡಲು ತಾಕೀತು

Team Udayavani, Jul 12, 2019, 1:13 PM IST

hubali-tdy-5..

ಕುಂದಗೋಳ: ಪಟ್ಟಣದ ತಾಪಂ ಸಭಾಭವನದಲ್ಲಿ ಹೆಸ್ಕಾಂ ಅಧಿಕಾರಿ ಟಿ.ಎಚ್. ಲಮಾಣಿ ವರದಿ ಮಂಡಿಸಿದರು.

ಕುಂದಗೋಳ: ಈಗತಾನೇ ಮಳೆ ಆರಂಭವಾಗಿದ್ದು, ಸುಮಾರು ಎರಡು ತಿಂಗಳು ಕಾಲ ಮೇವಿನ ಅವಶ್ಯಕತೆ ಇರಲಿದೆ. ರೈತರ ಜಾನುವಾರುಗಳಿಗೆ ಅಗತ್ಯ ಮೇವು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸದಸ್ಯ ಭರಮಪ್ಪ ಮುಗಳಿ ಪಶು ವೈದ್ಯಾಧಿಕಾರಿ ತಿರ್ಲಾಪುರ ಅವರಿಗೆ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ಜರುಗಿದ ಕೆಡಿಪಿ ಸಭೆಯಲ್ಲಿ ತಿರ್ಲಾಪುರ ಅವರು ವರದಿ ಮಂಡಿಸುವಾಗ ಜಿಪಂ ಸದಸ್ಯ ಭರಮಪ್ಪ ಮುಗಳಿ ಮಧ್ಯ ಪ್ರವೇಶಿಸಿ ಮೇವು ಸಂಗ್ರಹ ಮಾಹಿತಿ ಕೇಳಿದರು. ರೈತರ ಬೇಡಿಕೆ ಮೇರೆಗೆ ಮೇವು ಸಂಗ್ರಹಿಸುತ್ತೇವೆ ಎಂದು ಹಾರಿಕೆ ಉತ್ತರ ನೀಡಿದಾಗ ಸಿಡಿಮಿಡಿಗೊಂಡ ಸದಸ್ಯ ಮುಗಳಿ, ಮೇವು ಕೇಂದ್ರದಲ್ಲಿ ಸದಾ ಮೇವು ಇದ್ದರೆ ರೈತರು ತಮಗೆ ಬೇಕಾದಾಗ ಒಯ್ಯುತ್ತಾರೆ ಎಂದು ತಾಕೀತು ಮಾಡಿದರು.

ಬೀಜಗಳ ಮಾಹಿತಿ ನೀಡಿದ್ದೀರಾ?: ಕೃಷಿ ಸಹಾಯಕ ಪ್ರಭಾರಿ ಅಧಿಕಾರಿ ಎಸ್‌.ಎಫ್‌. ರಾಯನಗೌಡ್ರ ಮಾತನಾಡುತ್ತಿರುವ ಮಧ್ಯ ಜಿಪಂ ಸದಸ್ಯ ಉಮೇಶ ಹೆಬಸೂರ ಮಾತನಾಡಿ, ಬಿತ್ತನೆ ಹಂಗಾಮಿನ ಈ ವೇಳೆ ಬೀಜಗಳ ಕುರಿತು ಮಾಹಿತಿ ನೀಡಿದ್ದೀರಾ ಎಂದು ಪ್ರಶ್ನಿಸಿದರು. ಮಾಹಿತಿ ನೀಡಿದ್ದೇವೆ ಎಂದು ಅಧಿಕಾರಿ ಹಾರಿಕೆ ಉತ್ತರ ನೀಡಿದಾಗ, ಈಗ ಯಾವ ಬಿಟಿ ಬೀಜ ಊರಬೇಕು, ಅದಕ್ಕೆ ಯಾವ ಔಷಧಿ ಮತ್ತು ಗೊಬ್ಬರ ನೀಡಬೇಕು ಎಂಬುದರ ಬಗ್ಗೆ ತಿಳಿವಳಿಕೆ ನೀಡಿಲ್ಲ. ಕಳೆದ ವರ್ಷ ಗುಡಗೇರಿಯಲ್ಲಿ ಅನೇಕ ರೈತರು ಬಿಟಿ ಬೀಜ ಊರಿ ಕೈಸುಟ್ಟುಕೊಂಡಿದ್ದಾರೆ. ಕಂಪನಿಯವರು ತಮ್ಮ ಲಾಭಕ್ಕಾಗಿ ರೈತರಿಗೆ ಮೋಸಗೊಳಿಸುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ನೀಡಲೇಬೇಕು ಎಂದು ಎಚ್ಚರಿಕೆ ನೀಡಿದರು.

ಅರಣ್ಯ ಸಹಾಯಕ ಅಧಿಕಾರಿ ಬಸವರಾಜ ಬೆನಕಟ್ಟಿ ವರದಿ ಮಂಡಿಸುತ್ತಿರುವಾಗ ಭರಮಪ್ಪ ಮುಗಳಿ ಮಾತನಾಡಿ, ಒಂದು ಸಸಿ ಬೆಳೆಸಲು ಎಷ್ಟು ಖರ್ಚು ಆಗುತ್ತದೆ ಎಂದು ಪ್ರಶ್ನಿಸಿದರು. ಎನ್‌ಆರ್‌ಜಿಯಡಿ 300, ಸಾಗಾಣಿಕೆಗೆ 150, ನೀರು ಹಾಕಿ ಬೆಳೆಸಲು 50 ರೂ. ಸೇರಿ ಒಟ್ಟು 500 ರೂ. ಖರ್ಚಾಗುತ್ತದೆ ಎಂದು ಉತ್ತರಿಸಿದರು. ಮೂರು ವರ್ಷದಲ್ಲಿ ಎಷ್ಟು ಸಸಿ ಬೆಳೆಸಿದ್ದೀರಿ ಎಂದು ಪ್ರಶ್ನಿಸಿದಾಗ ಬೆನಕಟ್ಟಿ ಮಾತನಾಡಿ, ಹಿಂದಿನದು ನನಗೆ ಗೊತ್ತಿಲ್ಲ. ನನ್ನ ಅವಧಿಯಲ್ಲಿ ಸರಿಯಾಗಿ ಬೆಳೆಸುತ್ತೇನೆ ಎಂದರು.

ಸಿಡಿಪಿಒ ಅನುಪಮಾ ಅಂಗಡಿ ಮಾತನಾಡಿ, ತಾಲೂಕಿನ 212 ಅಂಗನವಾಡಿ ಕೇಂದ್ರಗಳಲ್ಲಿ 76 ಬಾಡಿಗೆ ಕಟ್ಟಡದಲ್ಲಿವೆ. ಇದರಿಂದ ಮೂಲಸೌಲಭ್ಯ ಒದಗಿಸಲು ತೊಂದರೆಯಾಗುತ್ತಿದ್ದು, ನಿವೇಶನ ನೀಡಬೇಕು ಎಂದು ಮನವಿ ಮಾಡಿದರು.

ಭೂಸೇನಾ ನಿಗಮದ ಸಹಾಯಕ ಅಧಿಕಾರಿ ವರದಿ ಮಂಡಿಸುವಾಗ ಉಮೇಶ ಹೆಬಸೂರ ಮಾತನಾಡಿ, ಪೌರಾಡಳಿತ ಸಚಿವರಾಗಿದ್ದ ಶಿವಳ್ಳಿ ಅವರು ಚಾಲನೆ ನೀಡಿದ ಕಾಮಗಾರಿಗಳಿಗೆ ಯಾಕೆ ಅಡೆತಡೆಯಾಗುತ್ತಿದೆ ಎಂದಾಗ ತ್ವರಿತವಾಗಿ ಮುಗಿಸುತ್ತೇನೆ ಎಂದು ಹಾರಿಕೆ ಉತ್ತರ ನೀಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯರಾದ ಉಮೇಶ ಹೆಬಸೂರ, ಎನ್‌.ಎನ್‌. ಪಾಟೀಲ, ಭರಮಪ್ಪ ಮುಗಳಿ, ಇಒ ಎಂ.ಎಸ್‌. ಮೇಟಿ ಮೊದಲಾದವರು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.