![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಗ್ಲಾಮರಸ್ ಆಗಿದ್ದರೆ ಮಾತ್ರ ಕಾಂಗ್ರೆಸ್ನಲ್ಲಿ ಅವಕಾಶ!
Team Udayavani, Jul 9, 2018, 6:15 AM IST
![congress-700.jpg](https://www.udayavani.com/wp-content/uploads/2018/07/9/congress-700-620x432.jpg)
ಧಾರವಾಡ: ಗ್ಲಾಮರಸ್ ಆಗಿದ್ದರೆ ಮಾತ್ರ ಹೆಣ್ಣು ಮಕ್ಕಳಿಗೆ ಕಾಂಗ್ರೆಸ್ನಲ್ಲಿ ಅವಕಾಶಗಳು ಸಿಗಲು ಸಾಧ್ಯವೇ? ಇಂಥದೊಂದು ಪ್ರಶ್ನೆ ಕೇಳಿದ್ದು ಕಾಂಗ್ರೆಸ್ ಕಾರ್ಯಕರ್ತೆ ಅನಿತಾ ಗುಂಜಾಳ.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಹಮ್ಮಿಕೊಂಡಿದ್ದ ಚುನಾವಣೆ ಒಳಗೆ ಮತ್ತು ಹೊರಗೆ ವಿಷಯ ಕುರಿತ ಸಂವಾದ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರನ್ನು ಕಾಂಗ್ರೆಸ್ ಕಾರ್ಯಕರ್ತೆ ಅನಿತಾ ಈ ರೀತಿ ಪ್ರಶ್ನಿಸಿದಾಗ ಸಭೆಯಲ್ಲಿ ಸಂಚಲನವೇ ಉಂಟಾಯಿತು. ಕಾಂಗ್ರೆಸ್ ಪಕ್ಷಕ್ಕಾಗಿ 20 ವರ್ಷಗಳಿಂದ ನಾನು ದುಡಿಯುತ್ತಿದ್ದು, ಪಕ್ಷದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ.
ಚುನಾವಣೆ ಸಮಯದಲ್ಲಿ ಬರೀ ಪ್ರಚಾರಕ್ಕೆ ಮಹಿಳೆಯರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಚಾರಕ್ಕೆ ಬಂದ ಮಹಿಳೆಯರಿಗೆ ಹಣ ನೀಡಲು ಶಾಸಕರೊಬ್ಬರು ರಾತ್ರಿವರೆಗೂ ಕಾಯಿಸಿದ್ದರು. ಇದಲ್ಲದೇ ಕುಡಿದ ನಶೆಯಲ್ಲಿ ಮುಖಂಡರೊಬ್ಬರು ಕೆಟ್ಟದಾಗಿ ಮಾತನಾಡಿದ್ದು, ಇಂತಹ ಸಾಕಷ್ಟು ಕೆಟ್ಟ ಘಟನೆಗಳು ಆಗುತ್ತವೆ. ಇದಕ್ಕೆ ಪರಿಹಾರ ಕೊಡಿಸಿ ಪಕ್ಷದ ಗೌರವ ಕಾಪಾಡುವಂತೆ ಅನಿತಾ ಅವರು ಮೋಟಮ್ಮ ಅವರಲ್ಲಿ ಮನವಿ ಮಾಡಿದರು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಇನ್ನೋರ್ವ ಕಾಂಗ್ರೆಸ್ ಕಾರ್ಯಕರ್ತೆ, ಪಕ್ಷದಲ್ಲಿ ಕೆಲಸ ಮಾಡುವ ಮಹಿಳೆಯರ ವರ್ತನೆ ಚೆನ್ನಾಗಿದ್ದು, ಸಭ್ಯರಾಗಿದ್ದರೆ ಯಾರೂ ಹೆದರಬೇಕಿಲ್ಲ. ಈವರೆಗೂ ನನಗೆ ಅಂತಹ ಯಾವುದೇ ಪ್ರಸಂಗ ಎದುರಾಗಿಲ್ಲ ಎಂದು ಪರೋಕ್ಷವಾಗಿ ಅನಿತಾ ಅವರಿಗೆ ಟಾಂಗ್ ನೀಡಿದರು.
ಇದಕ್ಕೆ ಉತ್ತರಿಸಿ ಮೋಟಮ್ಮ, ಪಕ್ಷ ಯಾವುದೇ ಇರಲಿ. ಇಂತಹ ಸನ್ನಿವೇಶ ಬಂದಾಗ ಒಗ್ಗಟ್ಟಾಗಿ ಮಹಿಳೆಯರು ಹೋರಾಡಬೇಕು. ಹಕ್ಕಿಗಾಗಿ ಹೋರಾಡುವ ಮೂಲಕ ಅಂಥವರಿಗೆ ಸವಾಲಾಗಿ ಮಹಿಳೆಯರು ನಿಲ್ಲಬೇಕು. ಅವಕಾಶ ಸಿಗಲಿ, ಸಿಗದಿರಲಿ ನಮ್ಮತನ ಉಳಿಸಿಕೊಂಡು ಸಾಧಿಸಿ ತೋರಿಸಬೇಕು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.