ಐಐಟಿ ಕಾಯಂ ಕ್ಯಾಂಪಸ್‌ ನಿರ್ಮಾಣಕ್ಕೆ ಜಾಗತಿಕ ಟೆಂಡರ್‌


Team Udayavani, Jul 28, 2017, 7:35 AM IST

27hub-dwd1.jpg

ಧಾರವಾಡ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಆಗಸ್ಟ್‌ 1ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿರಿಸಲಿದೆ. ಇದರ ಕಾಯಂ ಕ್ಯಾಂಪಸ್‌ ನಿರ್ಮಾಣಕ್ಕೆ ವಿಶ್ವಮಟ್ಟದಲ್ಲಿ ಟೆಂಡರ್‌ (ಗ್ಲೋಬಲ್‌ ಟೆಂಡರ್‌) ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸದ್ಯಕ್ಕೆವಾಲಿ¾ ಕಟ್ಟಡದಲ್ಲಿಐಐಟಿ ನಡೆಯುತ್ತಿ ದ್ದರೂ, ಕಾಯಂ ಕ್ಯಾಂಪಸ್‌ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಚಿಕ್ಕಮಲ್ಲಿಗವಾಡ ಬಳಿ 470 ಎಕರೆ ಜಾಗ ನೀಡಿದೆ.

ಕೇಂದ್ರ ಸರ್ಕಾರ ಕಳೆದ ವರ್ಷದ ಬಜೆಟ್‌ನಲ್ಲಿ 1,440 ಕೋಟಿ ರೂ.ಗಳನ್ನು ಧಾರವಾಡ ಐಐಟಿ ಕ್ಯಾಂಪಸ್‌ ನಿರ್ಮಾಣಕ್ಕೆ ಕಾಯ್ದಿರಿಸಿದೆ. ಸದ್ಯಕ್ಕೆ ಭೂ ಸರ್ವೇ ಮುಗಿದಿದ್ದು, ಕಾಂಪೌಂಡ್‌ ಗೋಡೆ ನಿರ್ಮಾಣಸಾಗಿದ್ದು, ಕ್ರಿಯಾ ಯೋಜನೆ ಮತ್ತು ಅದರ ವೆಚ್ಚ ಕುರಿತು ಧಾರವಾಡ ಜಿಲ್ಲಾಡಳಿತ ಮೂಲಕ ಮುಂಬೈ ಐಐಟಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಕಾಂಪೌಂಡ್‌ ನಿರ್ಮಿಸುವುದಕ್ಕೆ ಸೀಮಿತ.

ವಿಶ್ವದರ್ಜೆ ಕಟ್ಟಡ: ಕಾಯಂ ಕ್ಯಾಂಪಸ್‌ನಲ್ಲಿ ತಲೆ ಎತ್ತಲಿರುವ ಬಹುಮಹಡಿ ಕಟ್ಟಡಗಳು, ಕ್ರೀಡಾಂಗಣ, ವಿದ್ಯಾರ್ಥಿ ನಿಲಯಗಳು, ಪ್ರಾಧ್ಯಾಪಕರ ಕೊಠಡಿಗಳು, ತೋಟ ನಿರ್ಮಾಣ ಸೇರಿ ಪ್ರತಿಯೊಂದನ್ನೂ ವಿಶ್ವದರ್ಜೆಯ ಹೈಟೆಕ್‌ ಮಟ್ಟದಲ್ಲಿ ನಿರ್ಮಿಸಬೇಕಿದೆ. ಆದ್ದರಿಂದ ವಿಶ್ವಮಟ್ಟದ ಕಟ್ಟಡ ನಿರ್ಮಾಣ ಸಂಸ್ಥೆಗೆ ಟೆಂಡರ್‌ ನೀಡಲು ಮುಂಬೈ ಐಐಟಿ ಮತ್ತು ಕೇಂದ್ರ ಸರ್ಕಾರ ನಿರ್ಧರಿಸಿವೆ.

ಐಐಟಿಗೆ 2017-18ನೇ ಸಾಲಿಗೆ 120 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಮೆಕ್ಯಾನಿಕಲ್‌, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ವಿಜ್ಞಾನ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈ ಐಐಟಿಯ ಹಿರಿಯ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಬೋಧಿಸಲಿದ್ದಾರೆ. ಈ ವರ್ಷವೂ ತಾತ್ಕಾಲಿಕ ಕಟ್ಟಡದಲ್ಲೇ ಐಐಟಿ ಕಾರ್ಯ ನಿರ್ವಹಿಸಲಿದೆ.

ಇಲ್ಲಿನ ಹೈಕೋರ್ಟ್‌ ಪಕ್ಕದಲ್ಲಿರುವ ನೆಲ ಜಲ ಸಂರಕ್ಷಣಾ ಸಂಸ್ಥೆ ವಾಲಿ¾ ಕಟ್ಟಡದಲ್ಲೇ 2ನೇ ವರ್ಷದ ಐಐಟಿ ತರಗತಿಗಳು ಆರಂಭಗೊಳ್ಳಲಿವೆ. ರಾಜ್ಯ ಸರ್ಕಾರ ಕಳೆದ ವರ್ಷದ ಐಐಟಿ ತಾತ್ಕಾಲಿಕ ಕ್ಯಾಂಪಸ್‌ಗೆ 14 ಕೋಟಿ ರೂ.ಗಳಿಗೂ ಅಧಿಕ ಹಣ ವ್ಯಯಿಸಿತ್ತು. ಈ ವರ್ಷ ಮತ್ತೆ ಹೆಚ್ಚುವರಿಯಾಗಿ 9.23 ಕೋಟಿ ರೂ. ನೀಡಿದೆ. ಜಿಲ್ಲಾಡಳಿತ ಈ ಹಣದಲ್ಲಿ ಬೋಧನಾ ಕೊಠಡಿ, ಪ್ರಯೋಗಾಲಯ, ವಿದ್ಯಾರ್ಥಿಗಳ ಹಾಸ್ಟೆಲ್‌ ಸೇರಿ ಮೂಲಸೌಕರ್ಯ ಕಲ್ಪಿಸಿದೆ. ಆಗಸ್ಟ್‌ 1ರಿಂದಲೇ 2ನೇ ವರ್ಷದ ಐಐಟಿ ಕ್ಲಾಸ್‌ಗಳು ಮತ್ತೆ ಆರಂಭಗೊಳ್ಳಲಿವೆ.

ಕನ್ನಡಿಗರಿಗೆ ಶೇ.25 ಮೀಸಲಾತಿ ಇಲ್ಲ
ಐಐಟಿಗಾಗಿ ಕೇಂದ್ರ ಸರ್ಕಾರಿ ಸ್ವಾಮ್ಯದ ಶಿಕ್ಷಣ ಸಂಸ್ಥೆಗಳಿಗೆ ಅಗತ್ಯ ಭೂಮಿ, ನೀರು, ವಿದ್ಯುತ್‌ ಮತ್ತು ಮೂಲ ಸೌಕರ್ಯಗಳನ್ನು ರಾಜ್ಯ ಸರ್ಕಾರ ನೀಡುತ್ತದೆ. ಹೀಗಾಗಿ ಈ ಮಣ್ಣಿನ ಮಕ್ಕಳಿಗೂ ಇಲ್ಲಿ ಶೇ.25 ಸೀಟುಗಳನ್ನು ಮೀಸಲಿಡಬೇಕೆಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಕಳೆದ ವರ್ಷವೇ ಕೇಂದ್ರ ಸರ್ಕಾರಕ್ಕೆ ಮತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್‌ ಅವರಿಗೆ ಮನವಿ ಸಲ್ಲಿಸಿದ್ದರು. ಆದರೆ ಕೇಂದ್ರ ಸರ್ಕಾರ ಮನವಿಯನ್ನು ತಿರಸ್ಕರಿಸಿತ್ತು. ಈ ಸಂಬಂಧ ರಾಜ್ಯ ಮತ್ತು ಕೇಂದ್ರಗಳು ಮತ್ತೆ ಯಾವುದೇ ಚರ್ಚೆ ಮಾಡಿಲ್ಲ. ಹೀಗಾಗಿ ಕನ್ನಡ ಮಕ್ಕಳಿಗೆ ಶೇ.25 ಮೀಸಲಾತಿ ಸದ್ಯಕ್ಕಿಲ್ಲ.

ಜಿಲ್ಲಾಡಳಿತ ವಾಲಿ¾ಕಟ್ಟಡದಲ್ಲೇ ಐಐಟಿ 2ನೇ ವರ್ಷದ ತರಗತಿ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯ ವ್ಯವಸ್ಥೆ ಮಾಡಿಕೊಟ್ಟಿದೆ. ಕಾಯಂ ಕ್ಯಾಂಪಸ್‌ ನಿರ್ಮಾಣಕ್ಕೆ ವಿಶ್ವಮಟ್ಟದಲ್ಲಿ ಟೆಂಡರ್‌ ಕರೆಯಲು ಮುಂಬೈ ಐಐಟಿ ನಿರ್ಧರಿಸಿದೆ ಎಂದು ಗೊತ್ತಾಗಿದೆ. ಇನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.25 ಸೀಟುಗಳ ಮೀಸಲು ಬಗ್ಗೆ ಏನಾಗಿದೆ ಗೊತ್ತಿಲ್ಲ.
– ಡಾ.ಎಸ್‌.ಬಿ.ಬೊಮ್ಮನಹಳ್ಳಿ,
ಧಾರವಾಡ ಜಿಲ್ಲಾಧಿಕಾರಿ

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.