ನಾಲ್ವರು ಹಿರಿಯ ಸಾಹಿತಿಗಳಿಗೆ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ
Team Udayavani, May 18, 2023, 10:10 PM IST
ಧಾರವಾಡ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾಲ್ವರು ಹಿರಿಯ ಸಾಹಿತಿಗಳಿಗೆ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ತುಮಕೂರಿನ ಡಾ. ಬಿ. ನಂಜುಂಡಸ್ವಾಮಿ ಅವರಿಗೆ ಶರಣ ಪ್ರಶಸ್ತಿ, ಬೆಂಗಳೂರಿನ ಡಾ. ವಿಜಯಶ್ರೀ ಸಬರದ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ, ಮೈಸೂರಿನ ಡಾ. ಪಿ.ಕೆ. ರಾಜಶೇಖರ ಜಾನಪದ ಪ್ರಶಸ್ತಿ ಹಾಗೂ ಉತ್ತರ ಕನ್ನಡದ ಶಾಂತಿ ನಾಯಕ ಅವರಿಗೆ ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ ನೀಡಿ, ಗೌರವಿಸಲಾಯಿತು.
ಸಾನಿಧ್ಯ ವಹಿಸಿದ್ದ ಡಂಬಳ ಗದಗದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಗೊರುಚ ಅವರ ತಮ್ಮ ಹಿರಿಯ ವಯಸ್ಸಿನಲ್ಲೂ ಉತ್ಸಾಹದಿಂದ ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ದತ್ತಿ ನಿಧಿ ಪ್ರಶಸ್ತಿ ಪಡೆದ ನಾಲ್ವರು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಾಗಿದ್ದು, ಅವರಿಗೆ ಪ್ರಶಸ್ತಿ ನೀಡಿದ್ದು ಉತ್ತಮವಾಗಿದೆ ಎಂದರು.
ಡಾ. ವೀರಣ್ಣ ರಾಜೂರ ಮಾತನಾಡಿ, ಡಾ. ಗೊ.ರು. ಚನ್ನಬಸಪ್ಪ ಅವರು ಜಾನಪ ಹಾಗೂ ವಚನ ಸಾಹಿತ್ಯದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಶ್ರಮಿಸಿದ್ದಾರೆ. ವಿಶಿಷ್ಟವಾದ ಸಾಹಿತ್ಯ ಕೃಷಿಯನ್ನು ಮಾಡುವ ಮೂಲಕ ಶರಣ ಸಾಹಿತ್ಯ ಬೆಳವಣಿಗೆಗೆ ಕಾರಣರಾಗಿದ್ದಾರೆ ಎಂದರು.
ವಚನ ಸಾಹಿತ್ಯವನ್ನು ನಿರಂತರವಾಗಿ ಅಧ್ಯಯನ ಮಾಡುವುದರಿಂದ ಹೊಸ ವಿಚಾರಗಳು ಮುನ್ನಲೆಗೆ ಬರುತ್ತವೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಸಾಹಿತಿ, ಸಂಶೋಧಕರು ಅಧ್ಯಯನ ನಡೆಸಬೇಕು ಎಂದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಮಾತನಾಡಿದರು. ಅ.ಭಾ.ಶ.ಸಾ. ಪರಿಷತ್ತಿನ ಗೌರವ ಸಲಹೆಗಾರ ಡಾ. ಗೊ.ರು. ಚನ್ನಬಸಪ್ಪ, ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಬೆಂಗಳೂರಿನ ಹಿರಿಯ ಸಾಹಿತಿ ಡಾ. ಸಿ. ವೀರಣ್ಣ, ಅ.ಭಾ.ಶ.ಸಾ. ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣೆ, ವಿಜಯಶ್ರೀ ಸಬರದ, ಶ್ರೀಶೈಲ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ: CLP leader: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…