ದಲಿತರ ರಕ್ಷಣೆಗೆ ಸರಕಾರ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Dec 29, 2021, 11:30 PM IST
ಹುಬ್ಬಳ್ಳಿ: ಕೊರಗ ಸಮುದಾಯದ ಮನೆ ಸಮಾರಂಭದ ಮೇಲೆ ದಾಳಿ ನಡೆಸಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿನ ಪಿಎಸ್ಐ ಅಮಾನತು ಹಾಗೂ ಐವರನ್ನು ವರ್ಗಾವಣೆ ಮಾಡಿ ಇಲಾಖೆ ತನಿಖೆಗೆ ಸೂಚಿಸಲಾಗಿದ್ದು, ರಾಜ್ಯ ಸರಕಾರ ದಲಿತರ ರಕ್ಷಣೆಗೆ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗ್ರಾಮದ ದಲಿತ ಕೇರಿ ಅದರಲ್ಲೂ ಕೊರಗ ಸಮುದಾಯದವರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪಿಎಸ್ಐ ಹಾಗೂ ಸಿಬ್ಬಂದಿ ಲಾಠಿ ಪ್ರಹಾರ ಮಾಡಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಅಲ್ಲಿನ ಜನರೊಂದಿಗೆ ಮಾತನಾಡಿದ್ದೇನೆ. ಇದಕ್ಕೆ ಕಾರಣರಾದ ಪಿಎಸ್ಐ ಅವರನ್ನು ಕೂಡಲೇ ಅಮಾನತು ಮಾಡಲಾಗಿದೆ. ಇವರೊಂದಿಗಿದ್ದ ಐವರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ತನಿಖೆ ಇಲಾಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ:ಅನಂತನಾಗ್: ಉಗ್ರರೊಂದಿಗೆ ಗುಂಡಿನ ಕಾಳಗ; ಪೊಲೀಸ್ ಗೆ ಗಾಯ
ಸಮಾಜದ ಕಟ್ಟಕಡೆಯ ವ್ಯಕ್ತಿಯಾಗಿ ಸಮಾಜದೊಂದಿಗೆ ಬದುಕುತ್ತಿರುವ ಕೊರಗ ಜನಾಂಗದ ಮೇಲಿನ ಹಲ್ಲೆ ಸರಿಯಲ್ಲ. ದಲಿತರ ರಕ್ಷಣೆಗೆ ನಮ್ಮ ಇಲಾಖೆ, ಸರಕಾರ ಬದ್ಧವಾಗಿದೆ. ಯಾವುದೇ ಆತಂಕ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ