ಸುವರ್ಣ ಸೌಧದಲ್ಲಿ ಸರ್ಕಾರ: ಕುಮಾರಸ್ವಾಮಿ


Team Udayavani, Nov 15, 2017, 12:36 PM IST

15-21.jpg

ಧಾರವಾಡ/ಬೆಳಗಾವಿ: “ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಾರದಲ್ಲಿ ಎರಡು ದಿನ ಸರ್ಕಾರ ಕಾರ್ಯ ನಿರ್ವಹಿಸುವಂತೆ ಮಾಡಲಾಗುವುದು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಬೆಳಗಾವಿಯಲ್ಲಿ ಮಂಗಳವಾರ ನಡೆದ ಕುಮಾರಪರ್ವ ರೈತರ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತರ ಕರ್ನಾಟಕದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸುವರ್ಣ ವಿಧಾನಸೌಧ ಕಟ್ಟಲಾಗಿದೆ. ಹೀಗಾಗಿ ಅಧಿಕಾರಕ್ಕೆ ಬಂದ ಬಳಿಕ ಸೌಧ ಕೇವಲ ಬೆಳಗಾವಿಗೆ ಸೀಮಿತವಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಇದಕ್ಕೂ ಮೊದಲು ಧಾರವಾಡದಲ್ಲಿ ನಡೆದ “ವಿಕಾಸ ಯಾತ್ರೆ’ಯಲ್ಲಿ ಪಾಲ್ಗೊಂಡು ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನ ಸೂಸೂತ್ರವಾಗಿ ನಡೆಯಲು ಎಲ್ಲ ಪಕ್ಷಗಳ ಶಾಸಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. 

ಸಚಿವ ಜಾರ್ಜ್‌ ವಿಷಯದಲ್ಲಿ ಸದನ ಬಲಿಯಾಗದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ. ಅಧಿವೇಶನದ ಮೊದಲನೇ ದಿನವಾದ ಸೋಮವಾರ ಸರಿಯಾಗಿ ಚರ್ಚೆ ನಡೆದಿಲ್ಲ. ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಮಂಗಳವಾರವೂ ಪ್ರತಿಭಟನೆ ನಡೆಸಿದ ಕಾರಣ ಕಲಾಪಗಳು ಸರಿಯಾಗಿ ನಡೆಯಲಿಲ್ಲ. ಎಲ್ಲ ಪಕ್ಷಗಳ ನಾಯಕರು ಸದನ ಸುಸೂತ್ರವಾಗಿ ನಡೆಯಲು ಸಹಕರಿಸಬೇಕು. ವಿರೋಧ ಪಕ್ಷದ ಮುಖಂಡರು ಕಲಾಪಗಳಿಗೆ ಅಡ್ಡಿಪಡಿಸುವುದರಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ನಿವಾರಣೆಗೆ ತೊಂದರೆಯಾಗಲಿದೆ ಎಂದು ವಿಷಾದಿಸಿದರು.

“ಅಡಿಗಲ್ಲು ಹಾಕಿದ ಕುಮಾರಣ್ಣನ ಹೆಸರೇ ಮಾಯ’
ಬೆಳಗಾವಿ: ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಎಚ್‌.ಡಿ. ಕುಮಾರಸ್ವಾಮಿಯವರ ಹೆಸರನ್ನು ಕಲ್ಲಿನಲ್ಲಿ ಕೆತ್ತಲಾಗಿತ್ತು. ಅದನ್ನು ತೆಗೆದು ಹಾಕಿ ತಮ್ಮ ಹೆಸರು ಬಳಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಟೀಕಿಸಿದರು. ನಗರದ ಸಿಪಿಎಡ್‌ ಮೈದಾನದಲ್ಲಿ ಮಂಗಳವಾರ ನಡೆದ ರೈತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಿರ್ಮಾಣವಾದ ಸುವರ್ಣಸೌಧದಲ್ಲಿ ಕಲ್ಲಿನಲ್ಲಿ ಹಾಕಿದ್ದ ಕುಮಾರಣ್ಣನ ಹೆಸರನ್ನು ತೆಗೆದು ಹಾಕಲಾಗಿದೆ. ಆದರೆ, ಜನರ ಹೃದಯದಿಂದ ಕುಮಾರಣ್ಣನನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸುವರ್ಣ ವಿಧಾನಸೌಧ ನಿರ್ಮಿಸಿದ ಶ್ರೇಯಸ್ಸು ಕುಮಾರಸ್ವಾಮಿಗೆ ಸಲ್ಲುತ್ತದೆ ಎಂದರು.

ಶಾಸಕ ನಡಹಳ್ಳಿ ಜೆಡಿಎಸ್‌ಗೆ ಸೇರ್ಪಡೆ
ಬೆಳಗಾವಿ: ಕಾಂಗ್ರೆಸ್‌ದಿಂದ ಉಚ್ಚಾಟನೆಗೊಂಡ ದೇವರ ಹಿಪ್ಪರಗಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ದಂಪತಿಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ನಂತರ ಕಾಂಗ್ರೆಸ್‌ ವಿರುದ್ಧ
ಹರಿಹಾಯ್ದ ನಡಹಳ್ಳಿ, 40 ವರ್ಷಗಳಿಂದ ಕಾಂಗ್ರೆಸ್‌ ಕರ್ನಾಟಕವನ್ನು ಹಾಳು ಮಾಡಿದೆ. ಮಾತು ಎತ್ತಿದರೆ ಜಾತಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನಿಂದ ಅಹಿಂದಕ್ಕೆ ಕೊಡುಗೆ ಶೂನ್ಯ ಎಂದು ದೂರಿದರು.

ಜೆಡಿಎಸ್‌ಗೆ ಹೊಸ ಮನ್ವಂತರ ಶುರು
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಅಸ್ತಿತ್ವವೇ ಇಲ್ಲದ ಜೆಡಿಎಸ್‌, ಬೆಳಗಾವಿಯಲ್ಲಿ ಮಂಗಳವಾರ ನಡೆದ ಕುಮಾರಪರ್ವ ಸಮಾವೇಶ ಮೂಲಕ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ರ್ಯಾಲಿ ಹಾಗೂ ಸಮಾವೇಶಕ್ಕೆ ಹೆಚ್ಚಿನ ಜನ ಸೇರಿದ್ದರಿಂದ ಎಚ್‌.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಮುಖದಲ್ಲಿ ಸಂತಸ ಕಾಣುತ್ತಿತ್ತು. ಶಾಸಕ ನಡಹಳ್ಳಿ ಸೇರ್ಪಡೆಯಿಂದ ಈ ಭಾಗದಲ್ಲಿ ಜೆಡಿಎಸ್‌ಗೆ ಬಲ ಬಂದಂತಾಗಿದೆ. ಕುಮಾರಸ್ವಾಮಿ ಹೆಸರು ಹೇಳಿದಾಗಲೊಮ್ಮೆ ಜನ ಸಿಳ್ಳೆ, ಚಪ್ಪಾಳೆ ಮೂಲಕ ಘೋಷಣೆ ಕೂಗುತ್ತಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.