ಅಳ್ನಾವರದಲ್ಲಿ “ಸರಕಾರಿ ಶಾಲೆ ಉಳಿಸಿ’ ಅಭಿಯಾನ

ಸರ್ಕಾರಿ ಶಾಲೆಗಳು ಕೂಡಾ ಖಾಸಗಿ ಶಾಲೆಗಳಂತೆ ಕಂಗೊಳಿಸುವ ವಾತಾವರಣ ನಿರ್ಮಿಸಲಾಗುವದು.

Team Udayavani, Jan 6, 2022, 4:32 PM IST

ಅಳ್ನಾವರದಲ್ಲಿ “ಸರಕಾರಿ ಶಾಲೆ ಉಳಿಸಿ’ ಅಭಿಯಾನ

ಅಳ್ನಾವರ: ಪಟ್ಟಣ ಹಾಗೂ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳು ಉಳಿಯಬೇಕು. ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಬೇಕೆಂಬ ಉದ್ದೇಶ ಹೊತ್ತು ಮೋದಿಜಿ ಅಭಿಮಾನಿ ಬಳಗ ಆರಂಭಿಸಿದ “ಸರ್ಕಾರಿ ಶಾಲೆ ಉಳಿಸಿ’ ಅಭಿಯಾನಕ್ಕೆ ಶಾಲಾ ಗೋಡೆಗೆ ಬಣ್ಣ ಹಚ್ಚುವ ಮೂಲಕ ಪಪಂ ಅಧ್ಯಕ್ಷೆ ಮಂಗಳಾ ರವಳಪ್ಪನವರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಎಲ್ಲರೂ ಮುಂದಾಗಬೇಕು. ಶಾಲೆಗಳ ಅಭಿವೃದ್ಧಿಗೆ ಸ್ಥಳಿಯ ಆಡಳಿತ ಎಲ್ಲ ಸಹಕಾರ ನೀಡುವ ಭರವಸೆ ನೀಡಿದರು.

ಮೋದಿಜಿ ಅಭಿಮಾನಿ ಬಳಗದ ಅಧ್ಯಕ್ಷ ಬೆಣಚಿ ಗ್ರಾ ಪಂ ಅಧ್ಯಕ್ಷ ಸಂದೀಪ ಪಾಟೀಲ ಮಾತನಾಡಿ, ಸರ್ಕಾರಿ ಶಾಲೆ ಹಾಗೂ ಹಳೆಯ ದೇವಸ್ಥಾನ ಉಳಿಸಿ ಎಂಬ ಅಭಿಯಾನ ಆರಂಭಿಸಲಾಗಿದೆ. ಅಳ್ನಾವರ ಹಾಗೂ ಹಳ್ಳಿಯ ಯುವಕರ ಪಡೆ ಸೇರಿ ಮೋದಿಜಿ ಅಭಿಮಾನಿ ಬಳಗ ಕಟ್ಟಲಾಯಿತು. ಈ ಕುರಿತು ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಭಿತ್ತಿರಿಸಿ “ಭಿಕ್ಷಾಂದೇಹಿ ಅಭಿಯಾನ’ ಆರಂಭಿಸಲಾಯಿತು. ಜನರಿಂದ ಅಭೂತಪೂರ್ವ ಸಹಕಾರ ಹಾಗೂ ಪ್ರತಿಕ್ರಿಯೆ ವ್ಯಕ್ತವಾಗಿ 65 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಯಿತು.

ಹಲವಾರು ದಾನಿಗಳು ಮುಕ್ತ ಮನಸ್ಸಿನಿಂದ ದೇಣಿಗೆ ನೀಡಿದರು. ಹಲವರು ಖರೀದಿ ದರದಲ್ಲಿ ಪೇಂಟ್‌ ನೀಡಿದರು. ಕಾರ್ಮಿಕರು ಲಾಭ ಲೆಕ್ಕಿಸದೆ ಕೇವಲ ಕೂಲಿ ಲೆಕ್ಕದಲ್ಲಿ ಬಂದರು. ಇದರಿಂದ ಉತ್ತೇಜಿತರಾದ ನಮ್ಮ ಬಳಗ ಈ ಭಾಗದ ಹಳೆಯ ಶಾಲೆ, ದೇವಸ್ಥಾನ ಅಭಿವೃದ್ಧಿಗೆ ಮುಂದೆ ಬಂದಿದೆ ಎಂದರು.

ಸರ್ಕಾರಿ ಶಾಲೆಗಳು ಸ್ವಚ್ಛ-ಸುಂದರವಾಗಿರಬೇಕು. ಇಲ್ಲಿನ ಪರಿಸರ ಉತ್ತಮವಾಗಿರಬೇಕೆಂಬ ಅಭಿಲಾಷೆ ನಮ್ಮದು. ಸರ್ಕಾರಿ ಶಾಲೆಗಳು ಕೂಡಾ ಖಾಸಗಿ ಶಾಲೆಗಳಂತೆ ಕಂಗೊಳಿಸುವ ವಾತಾವರಣ ನಿರ್ಮಿಸಲಾಗುವದು. ಇಂತಹ ಮಹತ್ವಪೂರ್ಣ ಕಾರ್ಯ ಕೇವಲ ಸರ್ಕಾರದಿಂದ ಮಾತ್ರ ನಡೆಯಬೇಕೆಂಬ ಮಾತು ಬಿಟ್ಟು, ಸಾರ್ವಜನಿಕರು ಕೈಜೋಡಿಸಿದಾಗ ಸುಂದರ ಶಾಲೆ, ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದರು.

ಶಾಲೆ ಅಭಿವೃದ್ಧಿಗೆ ಹಲವು ಬೇಡಿಕೆಗಳಿವೆ.ಈ ಕುರಿತು ಶಾಸಕರಿಗೆ, ಪಟ್ಟಣ ಪಂಚಾಯತ್‌ಗೆ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗುವುದು. ಈ ಶಾಲೆಗೆ ಗ್ರೀಲ್‌ ಅಳವಡಿಸಲು ಬೇಡಿಕೆ ಇದೆ ಎಂದರು. ಪಪಂ ಸದಸ್ಯ ರಮೇಶ ಕುನ್ನೂರಕರ, ಪರಶುರಾಮ ಬೇಕನೇಕರ, ಪರಮೇಶ್ವರ ತೇಗೂರ, ಎಸ್‌ಡಿಎಂಸಿ ಅಧ್ಯಕ್ಷ ಖಲೀಲಅಹ್ಮದ್‌ ಸನದಿ, ಉಪಾಧ್ಯಕ್ಷೆ ಗೌರಮ್ಮ ಅಂಚಿ, ಮುಖ್ಯಾಧ್ಯಾಪಕಿ ಆಶಾಬಿ ಹವಾಲ್ದಾರ್‌, ಮೋಹನ ಪಟೇಲ, ಪರಶುರಾಮ ಪಾಲಕರ, ವೆಂಕಟೇಶ ಪವಾರ, ಯಲ್ಲಾರಿ ಹುಬ್ಳೀಕರ, ಸತೀಶ ಹಿರೇಮಠ, ಅನಂತ ರವಳಪ್ಪವನರ, ಸುರೇಶ ಜಾಧವ, ಮಂಜುಳಾ ಅರ್ಕಾಚಾರಿ, ಪುಷ್ಪಾ ಸಾಗರೇಕರ, ರೇಖಾ ಸಾವಂತ, ಎಸ್‌ಡಿಎಂಸಿ ಸಮಿತಿ ಸದಸ್ಯರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.