ಧಾರವಾಡ-ಅಂಕೋಲಾ ಸರ್ಕಾರಿ ಶಾಲೆಗೆ ಗೋವಿಂದೇಗೌಡ ಪ್ರಶಸ್ತಿ
ಧಾರವಾಡ: ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಿಲ್ಲೂರು ಸರ್ಕಾರಿ ಪ್ರೌಢಶಾಲೆ.
Team Udayavani, Sep 4, 2019, 9:25 AM IST
ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಅಪರ ಆಯುಕ್ತರ ಕಚೇರಿ ವ್ಯಾಪ್ತಿಯ ಧಾರವಾಡ, ಉತ್ತರ ಕನ್ನಡ ಜಿಲ್ಲೆಯ ಎರಡು ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳಿಗೆ ಪ್ರಸಕ್ತ ಸಾಲಿನ ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೆಗೌಡ ರಾಜ್ಯ ಪ್ರಶಸ್ತಿ ಲಭಿಸಿದೆ.
ಮಲೆನಾಡ ಗಾಂಧಿ ಎಂದೇ ಪರಿಚಿತರಾಗಿದ್ದ ಗಾಂಧಿವಾದಿ, ಮಾಜಿ ಶಿಕ್ಷಣ ಸಚಿವ ದಿ|ಎಚ್. ಜಿ. ಗೋವಿಂದೇಗೌಡ ಅವರ ಹೆಸರಿನಲ್ಲಿ ವಿಭಿನ್ನ ನೆಲೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಶಾಲೆಗಳಿಗೆ ನೀಡಲಾಗುವ ಈ ರಾಜ್ಯ ಪ್ರಶಸ್ತಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬು.ಕೊಪ್ಪ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಿಲ್ಲೂರು ಸರ್ಕಾರಿ ಪ್ರೌಢಶಾಲೆಗೆ ಲಭಿಸಿದೆ.
ಪ್ರಶಸ್ತಿ ನಗದು ಬಹುಮಾನ ಒಳಗೊಂಡಿದ್ದು, ಪ್ರಶಸ್ತಿ ಮೊತ್ತವನ್ನು ಶಾಲೆಯ ಮೂಲಭೂತ ಸೌಕರ್ಯಗಳಾದ ಗ್ರಂಥಾಲಯ, ಕಂಪ್ಯೂಟರ್, ಪ್ರಯೋಗಾಲಯ ಮತ್ತು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ರೂಪಿಸುವ ವಿಧಾಯಕ ಚಟುವಟಿಕೆಗಳಿಗೆ ಬಳಸಲು ಸೂಚಿಸಲಾಗಿದೆ. ಬೆಂಗಳೂರು ವಸಂತನಗರ ಮಿಲ್ಲರ್ ರಸ್ತೆಯಲ್ಲಿರುವ ಡಾ|ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೆ.5ರಂದು ಜರುಗಲಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯ ಪ್ರಶಸ್ತಿಗೆ ಭಾಜನವಾದ ಎರಡೂ ಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಅಲ್ಲಿಯ ಸಹ ಶಿಕ್ಷಕ-ಶಿಕ್ಷಕಿಯರನ್ನು, ಜತೆಗೆ ಮಾರ್ಗದರ್ಶನ ಮಾಡಿದ ತಾಲೂಕುಗಳ ಬಿಇಒ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ