ಎಪಿಎಂಸಿ ಅಭಿವೃದ್ಧಿಗೆ ಸರಕಾರ ಬದ್ಧ: ಶೆಟ್ಟರ
Team Udayavani, Dec 27, 2020, 1:38 PM IST
ಹುಬ್ಬಳ್ಳಿ: ಎಪಿಎಂಸಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಹು-ಧಾ ಮಹಾನಗರ ಪಾಲಿಕೆಯಿಂದ ಎಪಿಎಂಸಿ ವರ್ತಕರಿಗೆ ವಿಧಿಸಲಾಗಿರುವ ಆಸ್ತಿಕರ ಮನ್ನಾ ಮಾಡುವ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಎಪಿಎಂಸಿ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದಅವರು, ಬಹಳ ವರ್ಷಗಳಿಂದ ಎಪಿಎಂಸಿ ಆಸ್ತಿ ಕರ ಬಾಕಿಉಳಿದಿದೆ. ನೀರು, ವಿದ್ಯುತ್, ಒಳಚರಂಡಿ ಸೇರಿದಂತೆಯಾವುದೇ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲಎಂದು ಆರೋಪಿಸಿ ವರ್ತಕರು ಕರ ಪಾವತಿ ಮಾಡಿಲ್ಲ.ಈಗ ಬಡ್ಡಿ ಸಹಿತ ಆಸ್ತಿ ಕರ ಮನ್ನಾ ಮಾಡಲು ಸಚಿವಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಿದೆ.ಪಾಲಿಕೆ ಆಯುಕ್ತರು ಈ ಕುರಿತು ಸರಕಾರಕ್ಕೆ ವರದಿಸಲ್ಲಿಸಬೇಕು ಎಂದರು.
ಎಪಿಎಸಿ ಅಂಗಳ ವಿನ್ಯಾಸ ರಚನೆ ಕುರಿತು ಹುಡಾ, ಪಾಲಿಕೆ ಹಾಗೂ ಎಪಿಎಂಸಿ ವರ್ತಕ ಸಂಘದವರು ಒಂದು ಸಾಮಾನ್ಯ ಒಪ್ಪಂದಕ್ಕೆ ಬರಬೇಕು. ಸರಕಾರದ ನಿಯಮಾವಳಿಗಳ ಪಾಲನೆಯಾಗಬೇಕು. ವರ್ತಕರಿಗೆಸೇಲ್ಡೀಡ್ ಮಾತ್ರ ನೀಡಲಾಗಿದೆ. ಪೂರ್ಣ ಪ್ರಮಾಣದಲ್ಲಿ ಆಸ್ತಿ ಪರಭಾರೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಎಪಿಎಂಸಿ ಅಧ್ಯಕ್ಷ ಸಹದೇವ ಸುಡಕೇನವರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ತಹಶೀಲ್ದಾರ್ ರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ ಸೇರಿದಂತೆ ಎಪಿಎಂಸಿ ಸದಸ್ಯರಾದ ಚನ್ನು ಹೊಸಮನಿ, ಬಸವರಾಜ ಯಕಲಾಸಪೂರ, ಪ್ರಭುದೇವ ಅಂಕಲಕೋಟೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು