ಗ್ರಾಮಸ್ಥರ ಹಠದಿಂದ ಗ್ರಾಮಸಭೆ ಮುಂದಕ್ಕೆ
Team Udayavani, Aug 9, 2018, 5:30 PM IST
ಲಕ್ಷ್ಮೇಶ್ವರ: ಸಮೀಪದ ಸೂರಣಗಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಸಭೆಗೆ ಕೆಲ ಇಲಾಖೆ ಹಿರಿಯ ಅಧಿಕಾರಿಗಳ ಗೈರು ಹಾಜರಿ ಮತ್ತು ಅಸಮರ್ಪಕ ಮಾಹಿತಿಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಸಭೆ ಕಾಟಾಚಾರಕ್ಕೆ ಮಾಡುವುದು ಬೇಡವೆಂದು ಹಠ ಹಿಡಿದು ಮುಂದೂಡಿದ ಘಟನೆ ನಡೆದಿದೆ.
ನಿಗದಿಯಂತೆ ಬೆಳಗ್ಗೆ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಸಭೆ ಆರಂಭವಾಗುತ್ತಿದ್ದಂತೆಯೇ ಗ್ರಾಮದ ಯುವ ಮುಖಂಡರಾದ ಕುಮಾರ ಬೆಟಗೇರಿ, ಮಂಜುನಾಥ ಮೂಲಿಮನಿ, ಬಸವರಾಜ ಮೇಲ್ಮುರಿ ಇನ್ನೂ ಅನೇಕರು, ಸತತ ಬರಗಾಲದ ನಡುವೆಯೂ ಸಾಲಶೂಲ ಮಾಡಿ ಪಾವತಿಸಿದ್ದ ಬೆಳೆ ವಿಮೆ ಹಣ ಇನ್ನೂವರೆಗೂ ಬಂದಿಲ್ಲ. ಇದರಲ್ಲಿ ತಾರತಮ್ಯ ಮತ್ತು ಅನ್ಯಾಯವಾಗಿದೆ. ಕಾರಣವೇನು ಸ್ಪಷ್ಟ ಉತ್ತರ ನೀಡಬೇಕು. ಹೆಸರು ಕೇಂದ್ರ ಪ್ರಾರಂಭವಾಗಿಲ್ಲ ಏಕೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಲು ಕೃಷಿ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳೇ ಇರಲಿಲ್ಲ. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡರು.
ಬಳಿಕ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಉಂಟಾಗಿರುವ ಸಮಸ್ಯೆ ಬಗ್ಗೆ ಕೇಳಲಾದ ಪ್ರಶ್ನೆಗೆ ಬಡ್ನಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಮಜಾಯಿಸಿ ಉತ್ತರ ನೀಡಲು ಯತ್ನಿಸುತ್ತಿದ್ದಂತೇ ಸೂರಣಗಿ ಗ್ರಾಪಂ ವ್ಯಾಪ್ತಿಗೆ ಸೇರಿದ ಗ್ರಾಮ ಲೆಕ್ಕಾಧಿಕಾರಿಯಿಂದ ಇಲ್ಲಿನ ಜನರಿಗೆ ಯಾವುದೇ ರೀತಿಯ ಕಾರ್ಯಗಳಾಗುತ್ತಿಲ್ಲ. ಕೂಡಲೇ ಅವರನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು.
ಮುಖ್ಯವಾಗಿ ಕೃಷಿ ಮತ್ತು ಕಂದಾಯ ಇಲಾಖೆಗೆ ಸೇರಿರುವ ಸಮಸ್ಯೆಗಳೇ ಸಾಕಷ್ಟಿದ್ದು, ಸಮರ್ಪಕ ಉತ್ತರ ಕೊಡಬೇಕಾದ ತಾಲೂಕು ಮಟ್ಟದ ಅಧಿಕಾರಿಗಳನ್ನು ಸೇರಿಸಿ ಮತ್ತೊಮ್ಮೆ ಸಭೆ ಮಾಡಬೇಕು. ಇಲ್ಲಿಗೆ ಸಭೆ ಮೊಟಕುಗೊಳಿಸಬೇಕು ಎಂದು ಗ್ರಾಮಸ್ಥರು ಹಠ ಹಿಡಿದರು. ಅಧಿಕಾರಿಗಳು ಸಮಾಧಾನ ಮಾಡಲು ಪ್ರಯತ್ನಿಸಿದರೂ ಗ್ರಾಮಸ್ಥರು ಸಭೆಯಿಂದ ಹೊರ ಹೋದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನೋಡಲ್ ಅಧಿಕಾರಿ ಸಭೆಯನ್ನು ಮುಂದೂಡಿದರು. ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒ, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು