ಮಿಡತೆ-ಬಸವನಹುಳು ಕಾಟ

ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚಟುವಟಿಕೆ ಜೋರು

Team Udayavani, Jun 10, 2021, 5:09 PM IST

9hub-dwd3

ಧಾರವಾಡ: ಮುಂಗಾರು ಹಂಗಾಮು ಚಟುವಟಿಕೆ ಜೋರಾಗಿದ್ದು, ಇದೀಗ ಮುಂಗಾರಿನ ಬೆಳೆಗಳಲ್ಲಿ ಮಿಡತೆ ಹಾಗೂ ಬಸವನ ಹುಳುಗಳ ಹಾವಳಿ ಕಂಡು ಬಂದಿದೆ.

ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ತಜ್ಞರು, ಧಾರವಾಡ ತಾಲೂಕಿನ ಅಮ್ಮಿನಬಾವಿ ಹಾಗೂ ಮರೇವಾಡ ಗ್ರಾಮಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು ಮತ್ತು ಸೋಯಾ, ಅವರೆ ಕ್ಷೇತ್ರ ವೀಕ್ಷಣೆ ಮಾಡಿದಾಗ ಪತ್ತೆಯಾಗಿದೆ.

ಬಿತ್ತನೆಯಾದ 10 ದಿನಗಳ ನಂತರ ಬೆಳೆಗಳು ಎರಡೆಲೆ ಬೆಳೆದಿದ್ದು, ಆರಂಭದಲ್ಲಿ ಮಿಡತೆ ಕಾಟ ಕಾಣಿಸಿಕೊಂಡಿದೆ. ಸದ್ಯಕ್ಕೆ ಮಿಡತೆ ಬಾಧೆ ಕಡಿಮೆ ಇದೆ. ಜೂ. 5 ರಂದು ಸುರಿದ ಭಾರೀ ಮಳೆಯಿಂದ ಮೇ ತಿಂಗಳ ಕೊನೆಯ ವಾರದಲ್ಲಿ ಬಿತ್ತಿದ ಬೆಳೆಗಳ ತಾಕಿನಲ್ಲಿ ಮಳೆಯ ರಭಸಕ್ಕೆ ಮೇಲ್ಮಣ್ಣು ಗಟ್ಟಿಯಾಗಿ ಹೆಪ್ಪುಗಟ್ಟಿದಂತಾಗಿದೆ. ಬೆಳೆಗಳು ಲವಲವಿಕೆಗೊಂಡಿಲ್ಲ. ನಂತರ ಸಣ್ಣ ಮಳೆಯಾದಾಗ ಮತ್ತೆ ಚೇತರಿಕೆ ಕಾಣಲಿವೆ. ಮುಂಗಾರು ಬೆಳೆಗಳಲ್ಲಿ ಅಲ್ಲಲ್ಲಿ ಸ್ವಲ್ಪ ಮಟ್ಟಿಗೆ ಬಸವನ ಹುಳುವಿನ ಬಾಧೆ ಕಾಣಿಸಿಕೊಂಡಿದೆ.

ಮಿಡತೆಯ ನಿರ್ವಹಣೆ: ಬೀಜ ಬಿತ್ತಿದ ಬಳಿಕ ಒಣ ಹವೆ ಮುಂದುವರಿದಾಗ ಮಿಡತೆಗಳ ಹಾವಳಿ ಕಂಡು ಬರುತ್ತದೆ. ಮೇಲಿಂದ ಮೇಲೆ ಮಳೆಯಾಗುತ್ತಿದ್ದರೆ ಮಿಡತೆಗಳ ಬಾಧೆ ಇರಲ್ಲ. ಇದರ ನಿರ್ವಹಣೆಗಾಗಿ ಬದುಗಳಲ್ಲಿನ ಕಸ ಕಳೆ ತೆಗೆದು ಸ್ವತ್ಛವಾಗಿಡಬೇಕು. ಬೀಜ ಬಿತ್ತುವ ಮುಂಚೆ ಹೊಲದ ಸುತ್ತಲೂ ಒಂದು ಅಡಿ ಕಾಲುವೆ ಮಾಡುವುದರಿಂದ ಪೀಡೆಗಳು ಹೊಲದೊಳಗೆ ಬರುವುದನ್ನು ತಡೆಗಟ್ಟಬಹುದು. ಬದುಗಳ ಮೇಲೆ ಶೇ. 2ರ ಮೆಲಾಥಿಯನ್‌ ಅಥವಾ ಶೇ. 4 ರ ಫೆನ್ವಾಲರೇಟ್‌ ಅಥವಾ ಶೇ 1.5ರ ಕ್ವಿನಾಲಫಾಸ್‌ ಹುಡಿ ರೂಪದ ಕೀಟನಾಶಕಗಳನ್ನು ಧೂಳಿಕರಿಸಬೇಕು. ಹೊಲದ ಸುತ್ತಲೂ ಕಾಲುವೆಯಲ್ಲಿ ಮೇಲೆ ತಿಳಿಸಿದ ಕೀಟನಾಶಕಗಳ ಪುಡಿಧೂಳೀಕರಿಸಬೇಕೆಂದು ತಜ್ಞರು ಸಲಹೆ ನೀಡಿದ್ದಾರೆ.

ಬಸವನಹುಳು: ಈ ಜೀವಿಯು ನಿಶಾಚರಿಯಾಗಿದ್ದು, ರಾತ್ರಿ ಹೊತ್ತಿನಲ್ಲಿ ಬೆಳೆಯನ್ನು ಬಾಧಿಸುತ್ತದೆ. ಹಗಲು ಹೊತ್ತಿನಲ್ಲಿ ಬದುಗಳಲ್ಲಿ, ಕಸದ ಗುಂಪುಗಳ ಕೆಳಗಡೆ ಆಶ್ರಯಿಸುತ್ತದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ,ತುಂತುರು ಮಳೆಯಿದ್ದಾಗ ದಿನವಿಡೀ ಬೆಳೆ ತಿನ್ನುತ್ತದೆ. ಇದರ ಬಾಧೆ ಬೆಳೆಯ ಆರಂಭಿಕ ಹಂತದಲ್ಲಿ (ಬೆಳೆಯ 10-15 ದಿನಗಳವರೆಗೆ) ಹೆಚ್ಚು ಕಂಡು ಬರುತ್ತದೆ. (ಬೆಳೆಯ 10-15 ದಿನಗಳವರೆಗೆ) ತದನಂತರ ಕಾಂಡವು ಗಡುಸಾದಾಗ ಈ ಕೀಟದ ಬಾಧೆ ಇರಲ್ಲ. ಇದರ ನಿರ್ವಹಣೆಗೆ ಹೊಲದ ಸುತ್ತಲೂ ಇರುವ ಬದುಗಳನ್ನು ಸ್ವತ್ಛಗೊಳಿಸಬೇಕು. ಬದುವಿನ ಸುತ್ತಲೂ ಅಲ್ಲಲ್ಲಿ ಕಸದ ಗುಂಪೆ ಹಾಕಿ ಅದರಲ್ಲಿ ಶೇ 2.5 ರ ಮೆಟಾಲ್ಡಿಹೆಲ್ಡ್‌ -ಶಂಕುಹುಳು ನಾಶಕದ ಬಿಲ್ಲೆಗಳನ್ನು ಹಾಕುವುದರಿಂದ ಹುಳುಗಳು ಆಕರ್ಷಿಸಿ ಸಾಯುತ್ತವೆ.

ಬದುವಿನ ಸುತ್ತಲೂ ಅರ್ಧ ಅಡಿ ಅಂಗಲ ಪುಡಿರೂಪದ ಕೀಟನಾಶಕಗಳಾದ ಮೆಲಾಥಿಯನ್‌/ ಕ್ವಿನಾಲಫಾಸ್‌/ ಫೆನ್ವಲರೇಟ್‌ ಧೂಳೀಕರಿಸಬೇಕು ಎಂದು ತಜ್ಞರ ತಂಡವು ರೈತರಿಗೆ ಸಲಹೆ ನೀಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.