ರಾಜಭವನದಲ್ಲಿ ಗುಜರಾತಿಗಳ ದರ್ಬಾರ್
Team Udayavani, May 22, 2017, 4:27 PM IST
ಧಾರವಾಡ: ಕರ್ನಾಟಕ ರಾಜಭವನದಲ್ಲಿ ರಾಜ್ಯಪಾಲರು ಮತ್ತು ಅಲ್ಲಿಯ ಎಲ್ಲಾ ನೌಕರರೂ ಗುಜರಾತಿಗಳೇ ತುಂಬಿಕೊಂಡಿದ್ದು ಅಲ್ಲಿ ಸದ್ಯಕ್ಕೆ ಬರೀ ಗುಜರಾತಿಗಳ ದರ್ಬಾರ್ ನಡೆಯುತ್ತಿದೆ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ರಾಜ್ಯಪಾಲ ಮತ್ತು ರಾಜಭವನದ ಬಗ್ಗೆ ನೇರವಾಗಿ ಆರೋಪಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನ ಅರ್ಹರಿಗೆ ಹಾಗೂ ಪ್ರಾಮಾಣಿಕರಿಗೆ ಸಿಗುತ್ತಿಲ್ಲ. ಇದರಿಂದ ವಿವಿಯಲ್ಲಿನ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ. ಇನ್ನು ತಜ್ಞರ ಸಮಿತಿಯ ಶಿಫಾರಸ್ಸಿಗೆ ಬೆಲೆ ನೀಡದ ರಾಜಭವನದಿಂದ ಕುಲಪತಿಗಳ ನೇಮಕ ವಿಚಾರದಲ್ಲಿ ಹಸ್ತಕ್ಷೇಪ ಆಗುತ್ತಿದೆ.
ಅದರಲ್ಲೂ ಈಗ ರಾಜಭವನ ಗುಜರಾತಿಗಳ ದರ್ಬಾರ್ಗೆ ವೇದಿಕೆಯಾಗಿದೆ. ರಾಜ್ಯಪಾಲರು ಸೇರಿದಂತೆ ಅಲ್ಲಿನ ಉನ್ನತ ಮಟ್ಟದ ಅಧಿಕಾರಿಗಳೆಲ್ಲರೂ ಈಗ ಗುಜರಾತ್ ಮೂಲದವರಾಗಿದ್ದು, ಅವರು ಆಡಿದ್ದೇ ಆಟ ಎನ್ನುವಂತಾಗಿದೆ ಎಂದು ಆರೋಪಿಸಿದರು.
ವಿಶ್ವವಿದ್ಯಾಲಯಗಳ ಏಳ್ಗೆಗಾಗಿ ಕುಲಪತಿಗಳನ್ನು ನೇಮಕ ಮಾಡುವ ವಿಷಯದಲ್ಲಿ ರಾಜಭವನ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡಬಾರದು. ತಜ್ಞರ ಸಮಿತಿ ಮೂಲಕವೇ ಕುಲಪತಿಗಳ ನೇಮಕ ಆಗಬೇಕು. ವಿವಿಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಗಮನ ಹರಿಸದೇ, ಕೇವಲ ಕಟ್ಟಡ ಕಟ್ಟೋದು ಅದರಿಂದ ಕಮೀಷನ್ ಪಡೆಯುವುದು ಹೇಗೆ ಎಂಬುದನ್ನೇ ಲೆಕ್ಕಾಚಾರ ಹಾಕುತ್ತಿವೆ.
ಇವುಗಳನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಈ ವಿಷಯಗಳ ಕುರಿತು ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ. ಅಲ್ಲದೇ ಕುಲಪತಿ ನೇಮಕಾತಿಯಲ್ಲಿ ರಾಜಭವನ ಹಸ್ತಕ್ಷೇಪ ತಡೆಯುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ