ಅಜ್ಞಾನ ಅಳಿದು ಜ್ಞಾನದ ಸಂಪತ್ತು ನೆಲೆಸಲಿ


Team Udayavani, Jul 28, 2018, 5:37 PM IST

28-july-27.jpg

ಹಿರೇಕೆರೂರ: ಪ್ರತಿಯೊಬ್ಬರು ಭಕ್ತಿ, ಶ್ರದ್ಧೆ, ಶಾಂತಿ, ತಾಳ್ಮೆಯಿಂದ ಸನ್ಮಾರ್ಗದಲ್ಲಿ ಜೀವನ ಸಾಗಿಸಬೇಕು. ಮನಸ್ಸಿನಲ್ಲಿ ಅಜ್ಞಾನ ತೊರೆದು ಜ್ಞಾನದ ಸಂಪತ್ತು ನೆಲೆಸಿದಾಗ ಯಶಸ್ಸು ಸುಲಭವಾಗಿ ಲಭಿಸುತ್ತದೆ ಎಂದು ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಪಟ್ಟಣದ ವಿಠ್ಠಲ ನಗರದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಜರುಗಿದ 10ನೇ ವರ್ಷದ ಗುರು ಪೌರ್ಣಿಮೆ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು. ಸಾಯಿಬಾಬಾರವರು ಮನುಕುಲಕ್ಕೆ ಧರ್ಮದ ಹಾದಿಯಲ್ಲಿ ನಡೆಯುವ ಸನ್ಮಾರ್ಗವನ್ನು ತೋರಿಸಿದ್ದಾರೆ. ಗಳಿಸಿದ ಸಂಪತ್ತು ಧರ್ಮದ ಕಾರ್ಯಗಳಿಗೆ ಸದ್ವಿನಿಯೋಗವಾಗಬೇಕು. ಗುರುಕುಲ ಪದ್ಧತಿಯ ಗುರು ಪರಂಪರೆ ದಿನ ಆಚರಿಸುವ ಭಾಗವಾಗಿ ಗುರು ಪೌರ್ಣಿಮೆಯನ್ನು ನಾಡಿನ ಎಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ಪರಂಪರೆಯಿಂದ ಪ್ರತಿಯೊಬ್ಬರು ಧರ್ಮದ ನೆಲೆಗಟ್ಟಿನಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಗುರುವಿನ ಗುಲಾಮನಾಗುವ ತನಕ ಸಿಗದು ನಿನಗೆ ಮೋಕ್ಷ ಎಂಬ ಗಾದೆಯಂತೆ ಗುರುಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣಬೇಕು, ಅಂದಾಗ ಇಂತಹ ಉತ್ಸವಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದರು. ವನಜಾ ಪಾಟೀಲ ಮಾತನಾಡಿ, ತಾಯಿಯೇ ಮೊದಲು ಗುರುವಾಗಿದ್ದು, ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯನ್ನು ಕಲಿಸಬೇಕು. ಶಾಲೆಗಳಲ್ಲಿ ಕೂಡಾ ಶಿಕ್ಷಕರು ಉತ್ತಮ ಸಂಸ್ಕೃತಿ ಕಲಿಸಬೇಕು ಎಂದರು. ನೂತನವಾಗಿ ನಿರ್ಮಾಣಗೊಂಡ ಸಾಯಿ ಬಾಬಾರವರ ಬೆಳ್ಳಿ ಪಾಲಕಿಯನ್ನು ಶಾಸಕ ಬಿ.ಸಿ.ಪಾಟೀಲ ಉದ್ಘಾಟಿಸಿದರು.

ಶಿವಾಜಿರಾವ್‌ ಮಧೂರಕರ ಅಧ್ಯಕ್ಷತೆ ವಹಿಸಿದ್ದರು. ಮಂದಿರದ ಸೇವಾಭಿವೃದ್ಧಿ ಸಮೀತಿ ಅಧ್ಯಕ್ಷ ಮಾರುತಿ ಮಧೂರಕರ, ದುರ್ಗಾದೇವಿ ದೇವಸ್ಥಾನದ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಜಗದೀಶ ತಂಬಾಕದ, ಪಪಂ ಅಧ್ಯಕ್ಷೆ ರಜಿಯಾ ಅಸದಿ, ಉಪಾಧ್ಯಕ್ಷೆ ಶಿವಲೀಲಾ ರಂಗಕ್ಕನವರ, ಸದಸ್ಯರಾದ ಕುಸುಮಾ ಬಣಕಾರ, ಶಿವಕುಮಾರ ತಿಪ್ಪಶೆಟ್ಟಿ,  ಖಂಡರಾದ ಲಕ್ಷ್ಮಣ  ಕುಂಕುಮಗಾರ, ಮಂಜುಳಾ ಹಳೇಮನಿ, ರುದ್ರಪ್ಪ ಶೆಟ್ಟರ, ಸುರೇಶ ಮಡಿವಾಳರ, ಶಿವಯೋಗೆಪ್ಪ ಶೆಟ್ಟರ, ಶಂಭಣ್ಣ ತಂಬಾಕದ, ಅಶೋಕ ಜಾಡಬಂಡಿ, ಬಸವರಾಜ ಪೂಜಾರ, ಚಂದ್ರು ಮಧೂರಕರ, ರಾಜು ಖಾಂಡ್ಕೆ , ಈರಣ್ಣ ಚಿಟ್ಟೂರ ಹಾಗೂ ಭಕ್ತಾಧಿಗಳು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.