ಗುರುನಾನಕ್‌ಮಿಷನ್‌ ಟ್ರಸ್ಟ್ನಿಂದ ಅನ್ನ ದಾಸೋಹ

ಕೋವಿಡ್‌ ಸಂಕಷ್ಟದಲ್ಲಿ ಹಸಿವು ನೀಗಿಸುವ ಕಾರ್ಯ, ­ಸ್ವಯಂಪ್ರೇರಣೆಯಿಂದ ಯುವಕರು ಭಾಗಿ

Team Udayavani, Jun 2, 2021, 5:25 PM IST

1hub-31

ವರದಿ : ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್‌ ಮೊದಲ ಅಲೆಯಲ್ಲಿ ಜಿಲ್ಲೆಯಲ್ಲಿ ಅನ್ನದಾಸೋಹ ಕೈಗೊಂಡಿದ್ದ ಗುರುನಾನಕ್‌ ಮಿಷನ್‌ ಟ್ರಸ್ಟ್‌ ಇದೀಗ ತನ್ನ ಕಾರ್ಯ ಪುನಾರಂಭಿಸಿದ್ದು, ಸೇವಾ ಭಾರತಿ ಮೂಲಕ ಮಹಾನಗರದ ವಿವಿಧ ಆಸ್ಪತ್ರೆಗಳಲ್ಲಿರುವ ರೋಗಿಗಳ ಸಂಬಂಧಿಕರಿಗೆ ಆಹಾರ ಪೂರೈಸಲು ಮುಂದೆ ಬಂದಿದೆ.

ಕೋವಿಡ್‌ ಮೊದಲ ಅಲೆ ಸಂದರ್ಭದಲ್ಲಿ ಎರಡು ಹೊತ್ತು ಆಹಾರ ಪೂರೈಸುವ ಮೂಲಕ ಜಿಲ್ಲಾಡಳಿತಕ್ಕೆ ದೊಡ್ಡ ಆಸರೆಯಾಗಿತ್ತು. ಲಾಕ್‌ಡೌನ್‌ ಸಂದರ್ಭದಲ್ಲಿ ಜಿಲ್ಲೆಗೆ ಬರುವ, ಇಲ್ಲಿಂದ ಹೋಗುವ ಕಾರ್ಮಿಕರು, ನಿರ್ಗತಿಕರು, ವಲಸಿಗರಿಗೆ ಆಹಾರ ಪೊಟ್ಟಣ ನೀಡಿ ಹಸಿವು ನೀಗಿಸಿದ್ದರು. ಲಾಕ್‌ಡೌನ್‌ ಪೂರ್ಣಗೊಂಡು ಸಹಜ ಸ್ಥಿತಿಗೆ ಮರಳುವ ವೇಳೆಗೆ ನಿತ್ಯ 2000-4000ದಂತೆ ಸುಮಾರು 1.87 ಲಕ್ಷ ಆಹಾರ ಪೊಟ್ಟಣ ವಿತರಿಸಿದ್ದರು. ಇದೀಗ ಪುನಃ ಆಹಾರ ಪೂರೈಕೆಗೆ ಮುಂದೆ ಬಂದಿದ್ದು, 800 ಜನರಿಗೆ ಬೇಕಾಗುವ ಆಹಾರ ತಯಾರಿಸುತ್ತಿದ್ದಾರೆ.

ರೋಗಿಗಳ ಸಂಬಂಧಿಕರಿಗೆ ಆಹಾರ: ಪ್ರಸಕ್ತ ಕರ್ಫ್ಯೂ ಆರಂಭದಿಂದ ಈ ಕಾರ್ಯಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಅಷ್ಟೊಂದು ಬೇಡಿಕೆಯಿಲ್ಲದ ಪರಿಣಾಮ ಮುಂದುವರಿದಿರಲಿಲ್ಲ. ಆದರೆ ಮಹಾನಗರದ ವಿವಿಧ ಆಸ್ಪತ್ರೆಗಳ ರೋಗಿಗಳ ಸಂಬಂಧಿಕರಿಗೆ ಆಹಾರದ ಸಮಸ್ಯೆ ಉಂಟಾಗಿತ್ತು. ಇದನ್ನು ಗಮನಿಸಿದ ಸೇವಾ ಭಾರತಿ ಟ್ರಸ್ಟ್‌ ಗುರುನಾನಕ್‌ ಮಿಷನ್‌ ಟ್ರಸ್ಟ್‌ ಪ್ರಮುಖರನ್ನು ಭೇಟಿಯಾಗಿ ಆಹಾರದ ಬೇಡಿಕೆ ಸಲ್ಲಿಸಿತ್ತು. ಹೀಗಾಗಿ ಕಳೆದ ಎರಡು ದಿನಗಳಿಂದ ಮಧ್ಯಾಹ್ನ ಮತ್ತು ರಾತ್ರಿ ಎರಡು ಸಮಯದಲ್ಲಿ ಸುಮಾರು 400 ಜನರಿಗೆ ಬೇಕಾಗುವ ಆಹಾರ ಪೂರೈಸುತ್ತಿದ್ದಾರೆ.

ಸೇವಾ ಭಾರತಿ ಟ್ರಸ್ಟ್‌ ಹಾಗೂ ರಾಷ್ಟ್ರೋತ್ಥಾನದ ಕಾರ್ಯಕರ್ತರು ಮಹಾನಗರದ ವಿವಿಧ ಆಸ್ಪತ್ರೆಗಳಿಗೆ ತೆರಳಿ ಅಗತ್ಯವುಳ್ಳವರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಸ್ವತ್ಛ-ರುಚಿ ರುಚಿ ಅಡುಗೆ: ಸಿಖ್‌ ಹಾಗೂ ಸಿಂಧಿ ಪಂಚಾಯತ್‌ ಸಮುದಾಯದ ಜನರು ತಮ್ಮ ಗಳಿಕೆಯ ಒಂದಿಷ್ಟು ಭಾಗವನ್ನು ಈ ಕಾರ್ಯಕ್ಕೆ ವಿನಿಯೋಗಿಸುತ್ತಿದ್ದಾರೆ.

ಸುಮಾರು 25ಕ್ಕೂ ಹೆಚ್ಚು ಜನರು ನಿರಂತರವಾಗಿ ಕೆಲಸಕ್ಕೆ ಮುಂದಾಗಿದ್ದಾರೆ. ದಿನಸಿ ವಸ್ತು, ತರಕಾರಿ ತರುವುದರಿಂದ ಹಿಡಿದು ಪ್ರತಿಯೊಂದು ಕೆಲವನ್ನು ಇವರೇ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಅಡುಗೆ ಮನೆ ಇದೆ. ಬಹುತೇಕ ಅಡುಗೆ ಸ್ಪರ್ಶ ರಹಿತವಾಗಿ ತಯಾರಾಗುತ್ತಿದ್ದು, ಶುಚಿತ್ವ, ರುಚಿ, ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದೆ.

ಪರವಾನಗಿಗೆ ಅಲೆದಾಟ: ಕಳೆದ ವರ್ಷ ಇವರ ನಿಸ್ವಾರ್ಥ ಸೇವೆ ಅರಿತು ಜಿಲ್ಲಾಡಳಿತ ಪಾಸ್‌ ವಿತರಣೆ ಮಾಡಿತ್ತು. ಈ ಬಾರಿಯೂ ಜನರಿಗೆ ತಮ್ಮಿಂದ ಸಹಾಯವಾಗಲಿ ಎನ್ನುವ ಕಾರಣಕ್ಕೆ ಕರ್ಫ್ಯೂ ಆರಂಭದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆಯಲು ಅಲೆದಾಡಿದರು. ಆದರೆ ಈ ಬಾರಿ ಯಾವುದೇ ಪಾಸ್‌ ನೀಡುತ್ತಿಲ್ಲ. ಅಗತ್ಯವಿದ್ದರೆ ಶುರು ಮಾಡಿ ಎನ್ನುವ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನೂ ಸೆಮಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಷ್ಟೊಂದು ಬೇಡಿಕೆಯಿಲ್ಲ ಎನ್ನುವ ಕಾರಣಕ್ಕೆ ಹಿಂದೇಟು ಹಾಕಿದ್ದರು.

ಸೇವಾ ಭಾರತಿ ಟ್ರಸ್ಟ್‌ , ರಾಷ್ಟ್ರೋತ್ಥಾನ, ಗುರುನಾನಕ್‌ ಮಿಷನ್‌ ಟ್ರಸ್ಟ್‌,

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.