ರೈತರ ಬದುಕಿಗೆ ಬರೆ ಎಳೆದ ಆಲಿಕಲ್ಲು ಮಳೆ


Team Udayavani, Apr 20, 2018, 5:10 PM IST

20-April-20.jpg

ಹುಬ್ಬಳ್ಳಿ: ಬರದ ಛಾಯೆ ನಡುವೆಯೇ ಅಷ್ಟು ಇಷ್ಟು ನೀರಾವರಿ ವ್ಯವಸ್ಥೆಯಿಂದ ಬೆಳೆದಿದ್ದ ಭತ್ತ, ದ್ರಾಕ್ಷಿ ಇನ್ನಿತರ ಬೆಳೆ ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ಹಾನಿಗೀಡಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ಅನ್ನದಾತನ ಬದುಕಿಗೆ ಆಲಿಕಲ್ಲು ಮಳೆ ಬರೆ ಎಳೆದಿದೆ.

ಇತ್ತೀಚೆಗೆ ಬಿದ್ದ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಇನ್ನಿತರ ಜಿಲ್ಲೆಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ, ದ್ರಾಕ್ಷಿ ಇನ್ನಿತರ ಬೆಳೆಗಳು ಹಾನಿಗೀಡಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾದ ಸ್ಥಿತಿ ರೈತರದ್ದಾಗಿದೆ.

ಒಂದು ವಾರ ಆಲಿಕಲ್ಲು ಮಳೆ ವಿಳಂಬವಾಗಿದ್ದರೂ ಸಾಕಾಗಿತ್ತು. ಭತ್ತದ ಕೊಯ್ಲು ಆಗಿ ರೈತರ ಕೈಗೆ ಬೆಳೆ ದಕ್ಕುತ್ತಿತ್ತು. ಇನ್ನೊಂದು ಕಡೆ ಉತ್ತಮ ಫ‌ಸಲು ಕಂಡಿದ್ದ ದ್ರಾಕ್ಷಿ ಕೂಡ ಕೈಗೆ ದಕ್ಕದಾಗಿದೆ. ಅಕಾಲಿಕ ಮಳೆಯ ಹೊಡೆತಕ್ಕೆ ರೈತರು ಕಂಗಾಲಾಗಿದ್ದಾರೆ.

2-3 ಸಾವಿರ ಎಕರೆ ಭತ್ತ ಹಾನಿ?: ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭತ್ತ ಪ್ರಮುಖ ಬೆಳೆಯಾಗಿ ಗುರುತಿಸಿಕೊಂಡಿದೆ. ಕೇವಲ ರಾಯಚೂರು-ಕೊಪ್ಪಳ ಜಿಲ್ಲೆಗಳಲ್ಲಿಯೇ ಸುಮಾರು 5-6 ಲಕ್ಷ ಎಕರೆಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಕೆಲವು ವರ್ಷಗಳಿಂದ ನೀರಾವರಿ ಸೌಲಭ್ಯ ಪಡೆದ ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ ತಾಲೂಕುಗಳಲ್ಲಿಯೂ ಭತ್ತದ ಬೆಳೆ ವಿಸ್ತರಣೆ ಕಂಡಿದೆ.

ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ತುಂಗಭದ್ರಾ ಜಲಾಶಯ ನಂಬಿಕೊಂಡು ಭತ್ತ ಕೃಷಿ ಕೈಗೊಳ್ಳಲಾಗುತ್ತಿದೆ. ಈ ಬಾರಿ ನೀರಿನ ಕೊರತೆಯಿಂದ ಹಿಂಗಾರು ಹಂಗಾಮಿಗೆ ಭತ್ತ ನಾಟಿ ಬೇಡ ಎಂಬ ಸೂಚನೆ ನಡುವೆಯೂ ಅನೇಕ ರೈತರು ತಮ್ಮ ಹೊಲಗಳಲ್ಲಿ ಕೆರೆಗಳನ್ನು ಮಾಡಿಕೊಂಡು ಬಿಟ್ಟ ನೀರು ಸಂಗ್ರಹಿಸಿ ಭತ್ತ ಬೆಳೆದಿದ್ದರು.

ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಂಚಿನಾಳ, ಹಂಚಿನಾಳ ಕ್ಯಾಂಪ್‌, ಬಸವಣ್ಣ ಕ್ಯಾಂಪ್‌, ಗೊರೆಬಾಳ, ಅಂಬಾಮಠ ವ್ಯಾಪ್ತಿಯಲ್ಲಿ ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ಹಾಗೂ ಕೊಯ್ಲು ಮಾಡಿದ್ದ ಭತ್ತ ಹಾನಿಗೀಡಾಗಿದೆ.

ಕೆಲ ರೈತರ ಪ್ರಕಾರ ಸುಮಾರು 2,000 ರಿಂದ 2,500ಎಕರೆಯಷ್ಟು ಭತ್ತದ ಬೆಳೆ ಹಾನಿಗೀಡಾಗಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನ ಹಲವು
ಹಳ್ಳಿಗಳಲ್ಲಿ ಬೆಳೆದು ನಿಂತ ಭತ್ತದ ಬೆಳೆ ಹಾನಿಗೀಡಾಗಿದೆ.

ಐವತ್ತರಿಂದ ಹತ್ತಿಪ್ಪತ್ತು ಚೀಲಕ್ಕೆ: ಸಿಂಧನೂರು ತಾಲೂಕಿನಲ್ಲಿ ಆಲಿಕಲ್ಲು ಮಳೆ ಬಾರದಿದ್ದರೆ ಎಕರೆಗೆ ಸುಮಾರು 45-50 ಚೀಲ ಭತ್ತ ಬರುತ್ತಿತ್ತು. ಆದರೆ ಆಲಿಕಲ್ಲು ಮಳೆ ಹಾಗೂ ಗಾಳಿಯಿಂದ ಕೊಯ್ಲಿಗೆ ಬಂದ ಭತ್ತ ನೆಲಕ್ಕೆ ಮಲಗಿದೆ. ಇದರಿಂದಾಗಿ ಇದೀಗ ಎಕರೆಗೆ 10-20 ಚೀಲ ಬರುವುದು ಕಷ್ಟವಾಗಿದೆ.

ಒಂದು ಎಕರೆಗೆ ಸುಮಾರು 30-35 ಸಾವಿರ ರೂ.ವೆಚ್ಚ ಬಂದಿದ್ದು, ಎಕರೆಗೆ 45-50 ಚೀಲ ಬಂದಿದ್ದರೆ ವೆಚ್ಚ ಕಳೆದು ಒಂದಿಷ್ಟು ಆದಾಯ ಬರುತ್ತಿತ್ತು. ಇದೀಗ ವೆಚ್ಚ ಮಾಡಿದ ಹಣವೂ ಕೈಗೆ ದಕ್ಕದ ಸ್ಥಿತಿ ಇದೆ. ಅದೇ ರೀತಿ ಭತ್ತದ ಹುಲ್ಲು ನೀರಿಗೆ ಬಿದ್ದಿದ್ದರಿಂದ ಜಾನುವಾರುಗಳಿಗೆ ಮೇವು ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂಬುದು ರೈತರ ಅಳಲು.

ದ್ರಾಕ್ಷಿ ಹಾನಿ: ವಿಜಯಪುರ ಜಿಲ್ಲೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಆಲಿಕಲ್ಲು ಮಳೆಗೆ ಹಾನಿಗೀಡಾಗಿದೆ. ತಿಕೋಟಾ, ಬಬಲೇಶ್ವರ, ವಿಜಯಪುರ, ಚಡಚಣ ಪ್ರದೇಶದಲ್ಲಿ ದ್ರಾಕ್ಷಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೀಡಾಗಿದ್ದರೆ, ನಿಡಗುಂದಿ ಹಾಗೂ ಕೊರ್ತಿ-ಕೊಲ್ಹಾರ ಪ್ರದೇಶದ ಕೆಲವು ಭಾಗಗಳಲ್ಲಿ ದ್ರಾಕ್ಷಿ ಬೆಳೆ ಸ್ವಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿದೆ.

ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ಭತ್ತ ಹಾಗೂ ದ್ರಾಕ್ಷಿ ಬೆಳೆಗಾರರು ಇದೀಗ ಪರಿತಪಿಸುವಂತಾಗಿದ್ದು, ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಇನ್ನೊಂದು ವಾರ ತಡವಾಗಿದ್ದರೂ ಭತ್ತದ ಕೊಯ್ಲು ಆಗಿ ಭತ್ತ ಮನೆ ಸೇರುತ್ತಿತ್ತು. ದಿಢೀರ್‌ನೆ ಸುರಿದ ಆಲಿಕಲ್ಲು
ಮಳೆ ಬೆಳೆ ಹಾನಿ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ 75ಕೆ.ಜಿ. ತೂಕದ ಚೀಲದ ಭತ್ತಕ್ಕೆ ಸುಮಾರು 1,400-1,500ರೂ. ನಷ್ಟು ಇದ್ದ ಬೆಲೆ ಇದೀಗ 1,000-1,150ರೂ.ಗೆ ಇಳಿದಿದೆ. ರೈತರಿಗೆ ಒಂದು ಕಡೆ ಬೆಳೆ ನಷ್ಟ,
ಇನ್ನೊಂದು ಕಡೆ ಬೆಲೆ ಕುಸಿತದ ಸಂಕಷ್ಟ ಎದುರಾಗಿದೆ.
ಸಂತೋಷ ಪಾಟೀಲ, ಹಂಚಿನಾಳ ರೈತ.

ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.