ಮಹದಾಯಿ ಅಧಿಸೂಚನೆಗೆ ಸಂತಸ
Team Udayavani, Jul 13, 2019, 1:17 PM IST
ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಹಮ್ಮಿಕೊಂಡ ನಿರಂತರ ಸತ್ಯಾಗ್ರಹದಲ್ಲಿ ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಮಾತನಾಡಿದರು.
ನರಗುಂದ: ಕಳೆದ ನಾಲ್ಕು ವರ್ಷಗಳಿಂದ ಜೀವ ಜಲಕ್ಕಾಗಿ ನಿರಂತರ ರೈತರು ಹೋರಾಟ ಮಾಡುತ್ತಲೇ ಬಂದಿದ್ದರೂ ಸರ್ಕಾರಗಳ ಅಸಡ್ಡೆ ಧೋರಣೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಈ ಮಧ್ಯೆ ಮಹದಾಯಿ ಯೋಜನೆ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವ ಚಿಂತನೆ ನಡೆದಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಹೇಳಿದರು.
ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ 1457ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ಈಗಲಾದರೂ ಅಧಿಸೂಚನೆ ಹೊರಡಿಸುವ ಚಿಂತನೆ ನಡೆಸಿದ್ದು, ಹೋರಾಟದ ಹಾದಿಯಲ್ಲಿ ರೈತರು ತುಸು ನೆಮ್ಮದಿ ಪಡುವಂತಾಗಿದೆ ಎಂದರು.
ದುರ್ದೈವದ ಸಂಗತಿಯೆಂದರೆ ಮಹದಾಯಿ ನ್ಯಾಯಾಧೀಕರಣ ನದಿ ನೀರು ಹಂಚಿಕೆ ಮಾಡಿ ವರ್ಷ ಗತಿಸುತ್ತ ಬಂದರೂ ಇದುವರೆಗೆ ಮಹದಾಯಿ ನೀರು ಮಲಪ್ರಭೆಯ ಒಡಲು ಸೇರುತ್ತಿಲ್ಲ. ಆದರೆ ಮಹದಾಯಿ ಮತ್ತು ಕಳಸಾ-ಬಂಡೂರಿ ನೀರು ಮಲಪ್ರಭೆ ಸೇರುವವರೆಗೂ ಈ ಹೋರಾಟ ಅಚಲ ಎಂದು ರಾಘವೇಂದ್ರ ಗುಜಮಾಗಡಿ ಸ್ಪಷ್ಟಪಡಿಸಿದರು.
ನರಗುಂದ ಬಂದ್: ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ ಮಾತನಾಡಿ, ಜು.16ಕ್ಕೆ ಈ ಹೋರಾಟ ಸುದೀರ್ಘ 4 ವರ್ಷಗಳನ್ನು ಪೂರೈಸಿ ಐದನೇ ವರ್ಷಕ್ಕೆ ಕಾಲಿಡಲಿದೆ. ಅಂದು ನರಗುಂದ ಬಂದ್ ಕರೆ ನೀಡಲಾಗಿದ್ದು, ಅಂದು ಬೆಳಗ್ಗೆ ಪುರಸಭೆ ಆವರಣದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ ಬೃಹತ್ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಿ ಹೋರಾಟ ಮುನ್ನಡೆಸಲಾಗುವುದು ಎಂದು ತಿಳಿಸಿದರು.
ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ, ಯಲ್ಲಪ್ಪ ಗುಡದರಿ, ಲಕ್ಷ್ಮಣ ಮನೇನಕೊಪ್ಪ, ವೆಂಕಪ್ಪ ಹುಜರತ್ತಿ, ಮಲ್ಲಪ್ಪ ಐನಾಪುರ, ವಾಸು ಚವ್ಹಾಣ, ವೆಂಕಟೇಶ ಸಾಬಳೆ, ಈರಣ್ಣ ಗಡಗಿ, ಮಲ್ಲೇಶಪ್ಪ ಬಾಳಿಕಾಯಿ, ಹನುಮಂತ ಸರನಾಯ್ಕರ, ಹನುಮಂತ ಕೋರಿ, ಅನಸಮ್ಮ ಶಿಂಧೆ, ನಾಗರತ್ನ ಸವಳಭಾಯಿ, ದೇವಕ್ಕ ತಾಳಿ, ಮಾಬೂಬಿ ಕೆರೂರ, ಚನ್ನವ್ವ ಕರ್ಜಗಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ