ಬೆಳಗಾವಿಯಲ್ಲಿ ಮುಂದಿನ ಅಧಿವೇಶನ ನಡೆಸಿ: ಸಭಾಪತಿ ಬಸವರಾಜ ಹೊರಟ್ಟಿ
Team Udayavani, Jun 29, 2021, 2:33 PM IST
ಹುಬ್ಬಳ್ಳಿ: ಮುಂದಿನ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿದ್ದೇನೆ. ವಿಧಾನಸಭಾಧ್ಯಕ್ಷರ ಅಭಿಪ್ರಾಯ ಕೂಡ ಇದಾಗಿದ್ದು, ಸರಕಾರ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018 ರಲ್ಲಿ ಬೆಳಗಾವಿಯಲ್ಲಿ ಅಧವೇಶನ ಮಾಡಲಾಗಿತ್ತು. ನಂತರದಲ್ಲಿ ಯಾವುದೇ ಅಧಿವೇಶನ ನಡೆದಿಲ್ಲ. ಹೀಗಾಗಿ ಮುಂದಿನ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವುದು ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಇದೇ ಅಭಿಪ್ರಾಯವನ್ನು ವಿಧಾನಸಭೆ ಅಧ್ಯಕ್ಷರು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.
ಇದನ್ನೂ ಓದಿ:ಸಾಲ ತಂದಾದರೂ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸುತ್ತೇವೆ: ಸಿಎಂ ಯಡಿಯೂರಪ್ಪ
ಖಾಸಗಿ ಶಿಕ್ಷಣ ಸಂಸ್ಥೆಗಳು ಪೂರ್ಣ ಶುಲ್ಕ ವಸೂಲಿ ಸರಿಯಲ್ಲ. ಈ ವಿಚಾರದಲ್ಲಿ ಕೆಲವು ಗೊಂದಲಗಳು ಇವೆ. ಮಾನವೀಯತೆ ದೃಷ್ಟಿಯಿಂದ ವಿದ್ಯಾರ್ಥಿಗಳ ಕೌಟುಂಬಿಕ ಪರಿಸ್ಥಿತಿ ಅರಿತು ಶುಲ್ಕ ಪಡೆಯಬೇಕು. ಕಾನೂನು, ನಿಯಮದ ಜೊತೆಗೆ ಮಾನವೀಯತೆ ಕೂಡ ಇರಬೇಕು. ಶಾಲೆ ಆಡಳಿತ ಮಂಡಳಿಗಳ ಆರ್ಥಿಕ ಸ್ಥಿತಿ ನೋಡಿಕೊಂಡು ಸರಕಾರ ಶುಲ್ಕ ನಿರ್ಧರಿಸಬೇಕು. ಶುಲ್ಕ ಪಾವತಿ ಮಾಡುವ ಸಾಮರ್ಥ್ಯವುಳ್ಳ ಪಾಲಕರು ಕೂಡ ಕೋವಿಡ್ ನೆಪ ಹೇಳಿ ಶುಲ್ಕ ಪಾವತಿಗೆ ಹಿಂದೇಟು ಹಾಕುವುದು ಸರಿಯಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ