ಶೀಲ ಶಂಕಿಸಿ ಕೊಲೆ ಮಾಡಿದ್ದಾತನಿಗೆ ಜೀವಾವಧಿ ಶಿಕ್ಷೆ
Team Udayavani, May 10, 2018, 4:26 PM IST
ಹುಬ್ಬಳ್ಳಿ: ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಇಲ್ಲಿನ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ಕೊಟ್ಟಿದೆ. ಇಲ್ಲಿನ ಹಳೇಹುಬ್ಬಳ್ಳಿ ಕಾರವಾರ ರಸ್ತೆ ಕೆಂಪಗೇರಿ ಗಣೇಶ ಗುಡಿ ಹಿಂಬದಿ ನಿವಾಸಿ, 37 ವರ್ಷದ ಹನಮಂತ ವಾಲ್ಮೀಕಿ ಎಂಬಾತನೇ ಶಿಕ್ಷೆಗೊಳಗಾದವ.
ಗೌಂಡಿ ಕೆಲಸ ಮಾಡಿಕೊಂಡಿದ್ದ ಹನಮಂತ ಪತ್ನಿ ಸರೋಜಾ ಊರ್ಫ್ ರೇಖಾ ನಡತೆಯ ಬಗ್ಗೆ ಸಂಶಯ ಪಡುತ್ತಿದ್ದ. ಅಲ್ಲದೆ ಈ ವಿಷಯವಾಗಿ ಪದೇ ಪದೇ ಜಗಳ ಮಾಡುವುದು, ಹಲ್ಲೆ ಮಾಡುವುದು ಮಾಡುತ್ತಿದ್ದ. 2015 ಮಾರ್ಚ್ 11ರಂದು ಕುಡಿದು ಬಂದು ಪತ್ನಿ ಸರೋಜಾರೊಂದಿಗೆ ಜಗಳ ಮಾಡಿ, ನಂತರ ತಲೆಗೆ ಬಡಿಗೆಯಿಂದ ಹೊಡೆದು ಸೀರೆಯಿಂದ ಕುತ್ತಿಗೆಗೆ ಬಿಗಿದು ಕೊಲೆಗೈದು ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಇವರ ಕೊನೆಯ ಮಗಳು ರೂಪಾ ಸ್ಥಳದಲ್ಲೇ ಇದ್ದಳು. ಈ ಕುರಿತು ಮೃತಳ ಸಹೋದರ ಹಳೇಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಹಳೇಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ಡಾ| ಶಿವಾನಂದ ಚಲವಾದಿ, ಹನಮಂತನನ್ನು ಬಂಧಿಸಿ,
ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ಅಲ್ಲದೆ ಹನುಮಂತನ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 5ನೇ ಅಪರ ಜಿಲ್ಲಾ, ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಎಸ್. ಗಂಗಣ್ಣವರ ಅವರು, ಹನಮಂತ ಪತ್ನಿ ಸರೋಜಾಳನ್ನು ಕೊಲೆ ಮಾಡಿರುವುದು ಸಾಬೀತಾಗಿದೆ, ಈ ಪ್ರಕರಣದಲ್ಲಿ ಆತ ತಪ್ಪಿತಸ್ಥನಾಗಿದ್ದಾನೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ಕೊಟ್ಟಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಡಿ.ಎ.
ಭಾಂಡೇಕರ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು