ದೈಹಿಕ-ಮಾನಸಿಕ ಸದೃಢತೆಗೆ ಆರೋಗ್ಯ ಮುಖ್ಯ; ಡಾ|ಶರಣಪ್ಪ
ಮುಂಬರುವ ದಿನದಲ್ಲಿ ಮತ್ತಷ್ಟು ಬಡಾವಣೆಗಳಲ್ಲಿ ಶಿಬಿರ ಆಯೋಜಿಸಿ ಜನರಿಗೆ ಉಚಿತ ಔಷಧಿ ವಿತರಿಸಲಿದೆ
Team Udayavani, Dec 12, 2022, 6:39 PM IST
ಧಾರವಾಡ: ಮನುಷ್ಯನ ದೈಹಿಕ-ಮಾನಸಿಕ ಸದೃಢತೆಗೆ ಆರೋಗ್ಯ ಪ್ರಮುಖವಾಗಿದ್ದು, ಅದನ್ನು ನಿರಂತರ ಕಾಪಾಡಿಕೊಳ್ಳಲು ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಡಾ|ಶರಣಪ್ಪ ಕೊಟಗಿ ಹೇಳಿದರು.
ನಗರದ ಮಣಕಿಲ್ಲಾ ಸರ್ಕಾರಿ ಶಾಲೆ ಆವರಣದಲ್ಲಿ ಶರಣಪ್ಪ ಕೊಟಗಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಬೃಹತ್ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಮಾನದಲ್ಲಿ ಜನರು ತಮ್ಮ ಕಾರ್ಯದೊತ್ತಡದಲ್ಲಿ ಆರೋಗ್ಯ ಕಡೆಗೆ ಗಮನ ನೀಡುತ್ತಿಲ್ಲ. ಹೀಗಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿವೆ. ಕಾಲಕಾಲಕ್ಕೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರಗಳು ಪ್ರಯೋಜನಕಾರಿಯಾಗಿವೆ ಎಂದರು.
ಈ ಹಿನ್ನೆಲೆಯಲ್ಲಿ ಟ್ರಸ್ಟ್ ವತಿಯಿಂದ ವರ್ಷದುದ್ದಕ್ಕೂ ಆರೋಗ್ಯ ಶಿಬಿರ ಏರ್ಪಡಿಸಿ ಜನರ ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಿದೆ. ಈಗಾಗಲೇ ನವನಗರ, ನವಲೂರು, ಸತ್ತೂರು ಸೇರಿದಂತೆ ವಿವಿಧೆಡೆ ಉಚಿತ ಆರೋಗ್ಯ ತಪಾಸಣೆ ಮಾಡಿದ್ದು, ಮುಂಬರುವ ದಿನದಲ್ಲಿ ಮತ್ತಷ್ಟು ಬಡಾವಣೆಗಳಲ್ಲಿ ಶಿಬಿರ ಆಯೋಜಿಸಿ ಜನರಿಗೆ ಉಚಿತ ಔಷಧಿ ವಿತರಿಸಲಿದೆ ಎಂದರು.
ಶಿಬಿರಕ್ಕೆ ಚಾಲನೆ ನೀಡಿದ ನ್ಯಾಯವಾದಿ ಬಿ.ವಿ.ಪಾಟೀಲ ಮಾತನಾಡಿ, ಇಂದಿನ ಆಧುನಿಕ ಜೀವನದಲ್ಲಿ ಮನುಷ್ಯನ ಜೀವನ ಅನಾರೋಗ್ಯಕ್ಕೀಡಾಗುತ್ತಿದ್ದು, ಇದಕ್ಕೆ ಹಲವಾರು ಕಾರಣವಿದೆ. ನಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಂಡು ಅತ್ಯಂತ ಉತ್ತಮ ಆಹಾರ, ತರಕಾರಿ ಹಣ್ಣು ಸೇವಿಸಿ ಆರೋಗ್ಯ ಚೆನ್ನಾಗಿಟ್ಟುಕೊಳ್ಳಬೇಕು ಎಂದರು. ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶೇಖರ ಕವಳಿ, ಡಿ.ಆರ್.ಸಾನುಬಾಯಿ, ಡಾ|ಕಿರಣ ಸಾಣಿಕೊಪ್ಪ, ಡಾ|ಎಂ.ಬಿ.ಕುಲಕರ್ಣಿ, ಡಾ|ಮಹಾಂತೇಶ ಕುಬಸದ, ಡಾ|ಮಾಧುರಿ ಕಬಾಡೆ, ಡಾ|ಪುಟ್ಟರಾಜಗೌಡ ಪಾಟೀಲ, ಡಾ|ಪ್ರಸನ್ನ ದೇಶಪಾಂಡೆ, ಡಾ|ಮಂಜುನಾಥ ಶಿಗ್ಗಾವಿ, ಡಾ|ಶ್ರೀಮಂತ ಉಪ್ಪಾರ, ಯಲ್ಲಪ್ಪ ಸವಣೂರ, ಪ್ರಶಾಂತ ಯಾವಗಲ್,ಡಾ|ಅನಿಕೇತ ಸೇರಿದಂತೆ ತಜ್ಞ ವೈದ್ಯರು ಇದ್ದರು. 500ಕ್ಕೂ ಹೆಚ್ಚು ಜನ ಶಿಬಿರದಲ್ಲಿ ಭಾಗವಹಿಸಿ, ತಪಾಸಣೆ-ಔಷಧಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
MUST WATCH
ಹೊಸ ಸೇರ್ಪಡೆ
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ