ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು: ಚರಂತಿಮಠ
Team Udayavani, Jun 27, 2018, 4:42 PM IST
ಬಾಗಲಕೋಟೆ: ಬಿವಿವಿ ಸಂಘದ ಹೈಸ್ಕೂಲ್ ಆಡಳಿತ ಮಂಡಳಿ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಕುಮಾರೇಶ್ವರ ಆಸ್ಪತ್ರೆಯ ಆಶ್ರಯದಲ್ಲಿ ಬಿವಿವಿ ಸಂಘದ 111ನೇ ವಾರ್ಷಿಕೋತ್ಸವದ ಪ್ರಯುಕ್ತವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 3000 ವಿದ್ಯಾರ್ಥಿ-ವಿದ್ಯಾರ್ಥಿನಿಯರ ಉಚಿತ-ರಕ್ತ ತಪಾಸಣಾ ಶಿಬಿರ ನಗರದ ದಂತ ವೈದ್ಯಕೀಯ ಕಾಲೇಜಿನ ನಗರ ಆರೋಗ್ಯ ತರಬೇತಿ ಕೇಂದ್ರದಲ್ಲಿ ಮಂಗಳವಾರ ಜರುಗಿತು.
ಬಿವಿವಿ ಸಂಘದ ಕಾರ್ಯಾಧ್ಯಕ್ಷ ಹಾಗೂ ಶಾಸಕ ಡಾ| ವೀರಣ್ಣ ಸಿ. ಚರಂತಿಮಠ ಅವರು ಶಿಬಿರ ಉದ್ಘಾಟಿಸಿ, ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಇಂದಿನ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಈ ದಿಸೆಯಲ್ಲಿ ಮಕ್ಕಳ ರಕ್ತದ ಗುಂಪಿನ ಪರೀಕ್ಷೆ ಇಂದು ಅನಿವಾರ್ಯವಾಗಿದೆ. ಇದು ತುರ್ತು ಸಂದರ್ಭದಲ್ಲಿ ಮಕ್ಕಳಿಗೆ ನೆರವಾಗಲಿದೆ ಎಂದರು. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಅಂತಹ ಸದೃಢ, ಆರೋಗ್ಯವಂತ ಮಕ್ಕಳು ದೇಶಕ್ಕೆ ಬೇಕಾಗಿದ್ದಾರೆ ಎಂದು ಹೇಳಿದರು.
ಶಿಬಿರದಲ್ಲಿ ಮೊದಲ ದಿನ 25 ವಿದ್ಯಾರ್ಥಿ-ವಿದ್ಯಾರ್ಥಿನಿಯರ ರಕ್ತದ ಗುಂಪು ಪರೀಕ್ಷಿಸಲಾಯಿತು. ಪ್ರತಿ ದಿನ 50 ರಿಂದ 75 ವಿದ್ಯಾರ್ಥಿಗಳ ರಕ್ತದ ಗುಂಪು ಪರೀಕ್ಷೆ ನಡೆಯಲಿದೆ ಎಂದು ಹೇಳಿದರು. ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸಿದ್ದಣ್ಣ ಶೆಟ್ಟರ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್. ಸಜ್ಜನ (ಬೇವೂರ), ಸದಸ್ಯರಾದ ಎನ್.ಎಸ್. ದೇವನಗಾವಿ, ಆರ್.ಎಂ. ಪಾಟೀಲ, ಬಿ.ಎಸ್. ಹಿರೇಗೌಡರ, ಎಸ್.ವಿ. ಬೆಂಬಳಗಿ, ಎಂ.ಎಸ್. ಶೆಟ್ಟರ, ಎಸ್.ಬಿ. ಪಲ್ಲೇದ, ಎಸ್.ಎ. ನಾವಲಗಿ, ಆಡಳಿತಾಧಿಕಾರಿ ಪ್ರೊ | ಎನ್.ಜಿ. ಕರೂರ, ಬಿ.ಎಚ್.ಆರ್.ಡಿ. ನಿರ್ದೇಶಕ ಎಸ್.ಆರ್. ಮನಹಳ್ಳಿ, ಶಿಕ್ಷಣ ವಿಸ್ತರಣಾಧಿಕಾರಿ ಬಿ.ಆರ್. ಬೋಳಿಶೆಟ್ಟಿ, ಹಾನಗಲ್ಲ ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಅಶೋಕ ಮಲ್ಲಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ