ಮಳೆರಾಯಾ, ಇನ್ನೆಷ್ಟು ಸುರಿಯುವೆ ಮಾರಾಯಾ


Team Udayavani, Oct 21, 2019, 10:39 AM IST

huballi-tdy-2

ಅಳ್ನಾವರ: ಸತತ ಮಳೆಗೆ ಸಮೀಪದ ಹುಲಿಕೇರಿ ಗ್ರಾಮದ ಇಂದಿರಮ್ಮನ ಕೆರೆ ಮತ್ತೆ ಉಕ್ಕಿ ಹರಿಯುತ್ತಿದ್ದು, ಅಪಾಯದ ಮುನ್ಸೂಚನೆ ಎದುರಾಗಿದೆ. ಕಳೆದೆರಡು ತಿಂಗಳ ಹಿಂದೆ ಜನತೆಯಲ್ಲಿ ಉಂಟಾಗಿದ್ದ ಆತಂಕ ಮತ್ತು ಅಪಾಯದ ಕಹಿ ಅನುಭವವನ್ನು ಮರೆಯುವ ಮೊದಲೇ ಮತ್ತೂಮ್ಮೆ ವರುಣ ತನ್ನ ಆರ್ಭಟ ಶುರು ಮಾಡಿದ್ದು, ಒಂದೆರಡು ದಿವಸಗಳಿಂದ ಸುರಿಯುತ್ತಿರುವ ಹಿಂಗಾರು ಮಳೆ ಭಯ ಹುಟ್ಟಿಸಿದೆ. ಆಗಸ್ಟ್‌ನಲ್ಲಿ ಹುಲಿಕೇರಿ ಕೆರೆ ತುಂಬಿ ಒಡೆಯುವ ಭೀತಿಯಲ್ಲಿಯೇ ಜನ ಹಗಲಿರುಳು ಕಾಲ ಕಳೆಯುವಂತಾಯಿತು.

ಅಳ್ನಾವರ ಪಟ್ಟಣದ ಕೆಲವೊಂದು ಬಡಾವಣೆಯ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಅಂದಿನ ಭಯದ ವಾತಾವರಣ ಮತ್ತೂಮ್ಮೆ ಎದುರಾಗುವ ಸ್ಥಿತಿ ನಿರ್ಮಾಣವಾಗಿದ್ದು, ಕೆರೆಯತ್ತ ಎಲ್ಲರ ದೃಷ್ಟಿ ನೆಟ್ಟಿದೆ. ಕೆರೆಯ ಕೋಡಿ ತುಂಬಿ ಹರಿದು ಗೋಡೆ ಸಂಪೂರ್ಣ ಕುಸಿಯುವ ಹಂತಕ್ಕೆ ಬಂದಾಗ ಮಳೆ ನಿಂತಿದ್ದರಿಂದ ಜನರು ಆತಂಕದಿಂದ ಹೊರಗೆ ಬಂದಿದ್ದರು. ಈಗ ಪುನಃ ಕೋಡಿ ತುಂಬಿ ಹರಿಯುತ್ತಿರುವುದರಿಂದ ಒಡೆಯುವ ಕೊನೆಯ ಹಂತದಲ್ಲಿರುವ ಗೋಡೆ ಕುಸಿಯುವ ಸಂಭವ ಹೆಚ್ಚಾಗಿದೆ. ನೀರಿನ ರಭಸವನ್ನು ತಡೆಯಲು ಗೋಡೆಯ ಹಿಂಬದಿಯಲ್ಲಿ ಮಣ್ಣು ತುಂಬಿದ ಚೀಲಗಳನ್ನು ಇಡಲಾಗಿದೆ.

ಆದರೂ ಅದನ್ನು ಮೀರಿ ನೀರು ಎತ್ತರಕ್ಕೆ ಬಂದಿರುವುದರಿಂದ ಮತ್ತೇನೋ ಅಪಾಯ ಕಾದಿದೆ ಎನ್ನುವ ವಾತಾವರಣ ಜನರಲ್ಲಿ ಮೂಡಿದೆ. ಗೋಡೆಯ ಕೆಳ ಭಾಗದಲ್ಲಿ ಭೂಮಿ ಸಡಿಲಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿಯಬಹುದಾಗಿದೆ. ಈಡೇರದ ಭರವಸೆ: ಆಗಸ್ಟ್‌ ತಿಂಗಳಲ್ಲಿ ಪ್ರವಾಹ ಉಂಟಾಗಿದ್ದ ಸಂದರ್ಭದಲ್ಲಿ ಹುಲಿಕೇರಿಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವರಾದ

ಜಗದೀಶ ಶೆಟ್ಟರ, ಶಾಸಕ ಸಿ.ಎಂ. ನಿಂಬಣ್ಣವರ ಜಿಲ್ಲಾಧಿಕಾರಿ ದೀಪಾ ಚೋಳನ್‌ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಸನ್ನದ್ಧವಾಗಿದೆ. ಮಳೆ ನಿಂತ ಮೇಲೆ ಕೆರೆಯ ಸಂಪೂರ್ಣ ಸುಧಾರಣೆಗೆ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಇನ್ನುವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎನ್ನುವ ಮಾಹಿತಿ ದೊರೆತಿದೆ.

ಮುನ್ನೆಚ್ಚರಿಕೆ: ಮಳೆ ಮೂನ್ಸೂಚನೆ ಅರಿತ ನೀರಾವರಿ ಇಲಾಖೆ ಅಧಿಕಾರಿಗಳು ಇಂದಿರಮ್ಮನ ಕೆರೆಯ ಗೇಟ್‌ ಗಳನ್ನು ತೆರೆದಿದ್ದು, ನೀರು ಹೊರಗೆ ಬಿಡಲಾಗುತ್ತಿದೆ. ಆದರೂ ಕೆರೆಯಲ್ಲಿ ಹಿನ್ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಭಾಗದ ಸುತ್ತಲಿನ ಪ್ರದೇಶಗಳಲ್ಲಿ ಸತತವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳೆಲ್ಲ ತುಂಬಿಕೊಂಡು ಅಪಾಯದ ಮಟ್ಟ ತಲುಪಿವೆ.

ಎಲ್ಲೆಡೆ ಮಳೆ ಮತ್ತೆ ಪ್ರಾರಂಭವಾಗಿದ್ದು ನಾಗರಿಕರು ಅದರಲ್ಲೂ ಮುಖ್ಯವಾಗಿ ಹಳ್ಳ ಮತ್ತು ಕೆರೆಯ ಅಕ್ಕಪಕ್ಕದಲ್ಲಿ ವಾಸಿಸುವವರು ಜಾಗರೂಕರಾಗಿರಬೇಕು. ಅ ಧಿಕಾರಿಗಳು ಪರಿಸ್ಥಿತಿ ಮೇಲೆ ನಿಗಾ ಇಟ್ಟು ಯಾವುದೇ ತುರ್ತು ಸಂದರ್ಭದಲ್ಲಿಯೂ ಕಾರ್ಯ ಪ್ರವೃತ್ತರಾಗಲಿದ್ದು, ಜನರು ಭಯ ಪಡುವ ಅಗತ್ಯವಿಲ್ಲ. ಹಿಂದಿನ

ಮಳೆಯಿಂದ ಹಾನಿಗೊಳಗಾದ ರಸ್ತೆಗಳು, ಸೇತುವೆಗಳ ದುರಸ್ತಿಗೆ ಅನುದಾನ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಹಾನಿಗೊಳಗಾದರೈತರಿಗೂ ಹೆಚ್ಚಿನ ಪರಿಹಾರ ಕೊಡಿಸಲು ಒತ್ತಾಯಿಸುತ್ತೇನೆ. ಸಿ.ಎಂ. ನಿಂಬಣ್ಣವರ, ಶಾಸಕ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.