ನರಗುಂದದಲ್ಲಿ ಗಾಳಿ-ಮಳೆ: ಜನಜೀವನ ಅಸ್ತವ್ಯಸ್ತ
Team Udayavani, May 14, 2018, 4:39 PM IST
ನರಗುಂದ: ತಾಲೂಕಿನಲ್ಲಿ ರವಿವಾರ ಸಂಜೆ ಗಾಳಿ ಮಳೆಯಾಗಿದ್ದು, ಪಟ್ಟಣದ ಕೆಲವೆಡೆ ಮರಗಳು ಧರೆಗುರುಳಿವೆ. ಪರಿಣಾಮ ಕೆಲವೆಡೆ ಮನೆಗಳಿಗೆ ಧಕ್ಕೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಸಂಜೆ 5ರ ಬಳಿಕ ಜೋರಾದ ಗಾಳಿ ಬೀಸುತ್ತಿದ್ದಂತೆ ಧೋ ಎಂದು ಮಳೆ ಸುರಿದಿದೆ. ಮಳೆಯೊಂದಿಗೆ ರಭಸದ ಗಾಳಿಗೆ ಪಟ್ಟಣದ ವಿನಾಯಕ ನಗರದಲ್ಲಿ ವಿದ್ಯುತ್ ಕಂಬವೊಂದು ಧರೆಗುರುಳಿದೆ. ಮೇಲಾಗಿ ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ಶಿವಕೃಪಾ ಖಾನಾವಳಿ ಮುಂಭಾಗ ಹೆದ್ದಾರಿಗೆ ಹೊಂದಿಕೊಂಡ ಅರಳಿ ಮರವೊಂದರ ದೊಡ್ಡ ಟೊಂಗೆಯೊಂದು ಮುರಿದು ಧರೆಗುರುಳಿದೆ. ಇದರಿಂದ ಸಂಚಾರ ಮೊಟಕುಗೊಂಡ ಪರಿಣಾಮ ಪಟ್ಟಣದ ಸ್ವಯಂ ಸೇವಕರು ಮತ್ತು ಸಾರ್ವಜನಿಕರು ಸೇರಿ ಮರದ ಟೊಂಗೆ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಮೇಲಾಗಿ ಪಟ್ಟಣದ ಕೆಲವೆಡೆ ಮಳೆಯಿಂದ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ಹರಿದಿವೆ. ಕೆಲವೆಡೆ ಮನೆಗಳಿಗೆ ಚರಂಡಿ ನೀರು ಹೊಕ್ಕಿದ್ದು, ಸಾರ್ವಜನಿಕರು ಪರದಾಡಿದ್ದಾರೆ. ಗಾಳಿ ಸಹಿತ ಮಳೆಯಾಗುತ್ತಿದ್ದಂತೆ ವಿದ್ಯುತ್ ಕಡಿತಗೊಳಿಸಲಾಗಿದೆ. ಸಾಯಂಕಾಲದಿಂದ ಸಂಜೆ 9ರ ವರೆಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಇದರಿಂದ ಜನರು ಪರದಾಡುವಂತಾಯಿತು.
ಪಟ್ಟಣದ ಅರ್ಬನ್ ಓಣಿಯ ಕೇಸರಿಪ್ರಸಾದ ಸುಬೇದಾರ ಎಂಬುವರ ಮನೆ ಮುಂದಿದ್ದ ಮರವೊಂದು ಬೇರು ಸಮೇತ ಉರುಳಿ ಮನೆ ಮೇಲೆ ಬಿದ್ದಿದ್ದು, ಕುಂಚಿ ಕೊರವರ ಬಡಾವಣೆಯಲ್ಲಿ ಟ್ರ್ಯಾಕ್ಟರ್ ಮೇಲೆ ಮರ ಉರುಳಿ ಬಿದ್ದಿದೆ. ಒಟ್ಟಾರೆ ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ