ಅನ್ನದಾತರ ನೋವಿಗೆ ಸಹಾಯವಾಣಿ
Team Udayavani, Jan 3, 2018, 10:16 AM IST
ಧಾರವಾಡ: ದೇಶದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಅನ್ನದಾತರ ನೋವಿಗೆ ಸ್ಪಂದಿಸುವುದಕ್ಕಾಗಿ ಸಹಾಯವಾಣಿ
(ಮೊ: 8879069688 ) ಆರಂಭಿಸಿದ್ದು, ಇದಕ್ಕೆ ಮಿಸ್ಡ್ ಕಾಲ್ ನೀಡಿದರೆ ಸಾಕು ಸಮಸ್ಯೆಗೆ ಸ್ಪಂದಿಸಲಾಗುವುದು ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದರು.
ಇಲ್ಲಿನ ಕೃಷಿ ವಿವಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಯ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಇಂದು ಸಂಕಷ್ಟದಲ್ಲಿದ್ದು ಅವರ ಸಮಸ್ಯೆಗಳಿಗೆ ನನ್ನ ಕೈಲಾದ ಸಹಾಯ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಅದಕ್ಕಾಗಿ ಒಂದು ತಂಡ ನಿರಂತರ ಕೆಲಸ ಮಾಡುತ್ತಿದೆ ಎಂದರು. ಸ್ವಾಮಿನಾಥನ್ ಆಯೋಗದ ವರದಿ ಅನುಷ್ಠಾನ, ರೈತರ ಬೆಳೆಗಳಿಗೆ ದೇಶಾದ್ಯಂತ ಬೆಂಬಲ ಬೆಲೆ ನಿಗದಿಗೊಳಿಸುವುದು ಮತ್ತು ಸಾಲಮನ್ನಾ ಸೇರಿದಂತೆ ರೈತರ ಹಿತ ಕಾಯುವಂತೆ ಆಗ್ರಹಿಸಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಮಾ.23ರೊಳಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದೆ ಇದ್ದರೆ ಸ್ವಾತಂತ್ರ್ಯ ಸಂಗ್ರಾಮದ ರೂಪದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನನ್ನ ಹಾಗೆ ನೀವು ಬ್ರಹ್ಮಚಾರಿ ಆಗಬೇಡಿ, ಮದುವೆಯಾಗಿ ಚಿಕ್ಕದೊಂದು ಸಂಸಾರ ಮಾಡಿಕೊಳ್ಳಿ. ಆದರೆ, ಸಮಾಜ ಮತ್ತು ದೇಶವನ್ನು ದೊಡ್ಡ ಪರಿವಾರದಂತೆ ಪರಿಗಣಿಸಿ ಜೀವಿಸಿ. ಬೇರೆಯವರಿಗೆ ಒಳ್ಳೆಯದನ್ನು ಮಾಡುವುದರಲ್ಲಿ ನೆಮ್ಮದಿ ಕಂಡುಕೊಳ್ಳಿ. ಮಾಡುವ ಕೆಲಸದಲ್ಲಿ ದೇವರಿದ್ದಾನೆ ಎಂದು ನಂಬಿಕೊಳ್ಳಿ. ನಾನು ನನ್ನ ಉಸಿರು ಇರುವವರೆಗೂ ಸಮಾಜಕ್ಕಾಗಿ ಹೋರಾಟ ನಡೆಸುತ್ತೇನೆ.
ಅಣ್ಣಾ ಹಜಾರೆ, ಸಾಮಾಜಿಕ ಹೋರಾಟಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ