ತಲೆ ಎತ್ತಿತು ಉನ್ನತ ಶಿಕ್ಷಣ ಅಕಾಡೆಮಿ ಭವ್ಯ ಕಟ್ಟಡ

ವರ್ಷಾಂತ್ಯಕ್ಕೆ 5 ಪಟ್ಟು ಕಾರ್ಯ ವಿಸ್ತರಣೆ

Team Udayavani, May 4, 2022, 9:22 AM IST

1

ಧಾರವಾಡ: ಶಿಕ್ಷಣ ಅಂದರೆ ಬರೀ ಕ್ಲಾಸ್‌ರೂಮ್‌ ಗಳಲ್ಲ, ಶಿಕ್ಷಣ ಅಂದರೆ ಗುಣಮಟ್ಟ. ತರಬೇತಿ ಅಂದರೆ ಬರೀ ಬೋಧನೆಯಲ್ಲ, ಅಂತಾರಾಷ್ಟ್ರೀಯ ಮಟ್ಟಕ್ಕೆ ಸರಿಸಮವಾಗಿರುವ ಪಟ್ಟುಗಳು. ವಿಶ್ವದ ಎಲ್ಲಾ ದೇಶಗಳಲ್ಲಿನ ಶಿಕ್ಷಣ ವ್ಯವಸ್ಥೆಯಷ್ಟೇ ಬಲಿಷ್ಠತೆ ಇಲ್ಲಿನ ಶಿಕ್ಷಣಕ್ಕೂ ಬರಬೇಕು. ಅದಕ್ಕಾಗಿಯೇ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ವಿದ್ಯಾರ್ಥಿಗಳು ರೂಪುಗೊಳ್ಳಲು ಬೋಧಕರಿಗೆ ಶಿಸ್ತುಬದ್ಧ ತರಬೇತಿ ನೀಡಬೇಕು.

ಹೌದು, ಇಂತಹ ಧ್ಯೇಯಗಳನ್ನಿಟ್ಟುಕೊಂಡು ಕಾರ್ಯಾರಂಭ ಮಾಡಿರುವ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ಕಳೆದ ನಾಲ್ಕು ವರ್ಷಗಳಿಂದ ಪ್ರಾಧ್ಯಾಪಕರಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಯಶಸ್ವಿಯಾಗಿ ಸಾಗಿದ್ದು, ಈ ವರೆಗೂ 3500ಕ್ಕೂ ಅಧಿಕ ಬೋಧಕರಿಗೆ ಇಂದಿನ ಹೈಟೆಕ್‌ ಯುಗದ ಶಿಕ್ಷಣ ವ್ಯವಸ್ಥೆಯ ಕುರಿತು ತರಬೇತಿ ನೀಡಿ ಮುಗಿಸಿದೆ.ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದ ರೂಪುರೇಷೆಗಳನ್ನು ಸಿದ್ಧಪಡಿಸಿ ಅದನ್ನು ಜಾರಿಗೊಳಿಸಿದ ಕೀರ್ತಿ ಧಾರವಾಡಕ್ಕೆ ಸಲ್ಲುತ್ತದೆ.

19ನೇ ಶತಮಾನದಲ್ಲಿಯೇ ಇಲ್ಲಿ ಡಯಟ್‌ ಕಾರ್ಯ ಆರಂಭಿಸಿ, ಪ್ರಾಥಮಿಕ ಶಿಕ್ಷಣ ನೀಡುವ ಶಿಕ್ಷಕರಿಗೆ ತರಬೇತಿ ನೀಡುವ ಮಹತ್‌ ಕಾರ್ಯ ಮಾಡಿದ್ದು, ಇದೀಗ ಉನ್ನತ ಶಿಕ್ಷಣ ಬಲವರ್ಧನೆಗೆ ಈ ಅಕಾಡೆಮಿ ಭರಪೂರ ಕ್ರಿಯಾಯೋಜನೆ ರೂಪಿಸಿಕೊಂಡಿದೆ. ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ ಹೈಟೆಕ್‌ ಸ್ವರೂಪದ ಕಟ್ಟಡ ಮತ್ತು ವ್ಯವಸ್ಥೆ 2022 ರ ನವೆಂಬರ್‌ ವೇಳೆಗೆ ಸಜ್ಜಾಗಲಿದ್ದು, ಉನ್ನತ ಶಿಕ್ಷಣ ಅಕಾಡೆಮಿಯ ಪೂರ್ಣ ಪ್ರಮಾಣದ ಕಾರ್ಯ ಆರಂಭಗೊಳ್ಳಲಿದೆ. ಕೆಲವೇ ದಿನಗಳಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ದೈತ್ಯ ಕ್ಯಾಂಪಸ್‌, ಸುಂದರ ಕಟ್ಟಡವೂ ಸಜ್ಜಾಗಲಿದೆ.

 ಶಿಕ್ಷಣ ಗುಚ್ಛಕ್ಕೆ ಒತ್ತು: ಸರ್‌ ಸಿದ್ದಪ್ಪ ಕಂಬಳಿ, ಅರಟಾಳ ರುದ್ರಗೌಡ, ಡೆಪ್ಯುಟಿ ಚೆನ್ನಬಸಪ್ಪ, ಡಾ| ಡಿ.ಸಿ. ಪಾವಟೆ, ಡಾ| ಮೆಣಸಿನಕಾಯಿ ಅವರಂತಹ ಮಹನೀಯರೆಲ್ಲರೂ ಒಂದಲ್ಲ ಒಂದು ಬಗೆಯ ಶಿಕ್ಷಣದ ತರಬೇತಿ ಭಾಗವನ್ನು ಇದೇ ಊರಿನಲ್ಲಿ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದರಿಂದಲೇ ಇಲ್ಲಿ ಶಿಕ್ಷಣ ಸಮುತ್ಛಯವೇ ತಲೆ ಎತ್ತಿದಂತಾಗಿದೆ.

ಕಾನೂನು ಓದುವವರಿಗೊಂದು ವಿಶ್ವವಿದ್ಯಾಲಯ, ಕಲೆ ಓದುವವರಿಗೊಂದು ವಿಶ್ವವಿದ್ಯಾಲಯ, ಕೃಷಿ ಕಲಿಕೆ ಮತ್ತು ಪ್ರಯೋಗಕ್ಕೊಂದು ದೈತ್ಯ ವಿಶ್ವವಿದ್ಯಾಲಯ, ತಾಂತ್ರಿಕ ಶಿಕ್ಷಣಕ್ಕೆ ಐಐಟಿ, ಮಾಹಿತಿ ತಂತ್ರಜ್ಞಾನಕ್ಕೆ ಐಐಐಟಿ, ಸಾಲದ್ದಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲ್ಲಿ ಹತ್ತಾರು ಖಾಸಗಿ ಕರಿಯರ್‌ ಅಕಾಡೆಮಿಗಳು. ಒಟ್ಟಲ್ಲಿ ಇದು ಶಿಕ್ಷಣ ಕಾಶಿ. ಇಂತಹ ಹತ್ತಾರು ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಶಿಕ್ಷಣ ವ್ಯವಸ್ಥೆಗಳನ್ನು ಒಟ್ಟೊಟ್ಟಿಗೆ ಸೇರಿಸಿಕೊಂಡು ಒಟ್ಟಾಗಿ ಕೆಲಸ ಮಾಡುವ ಕುರಿತು ಕೂಡ ಉನ್ನತ ಶಿಕ್ಷಣ ಅಕಾಡೆಮಿ ಚಿಂತನೆ ನಡೆಸಿದೆ. ಇದೆಲ್ಲವೂ ಅಕಾಡೆಮಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದ ಕೂಡಲೇ ಶುರುವಾಗಲಿದೆ.

ವಿದೇಶಿ ವಿವಿಗಳ ಜೊತೆಗೆ ಒಪ್ಪಂದ: ಇನ್ನು ಉನ್ನತ ಶಿಕ್ಷಣ ಅಕಾಡೆಮಿಯು ಕೇವಲ ದೇಶದೊಳಗಿನ ಶಿಕ್ಷಣ ವ್ಯವಸ್ಥೆ ಮಾತ್ರವಲ್ಲ ವಿದೇಶಿ ವಿಶ್ವವಿದ್ಯಾಲಯಗಳು, ಉನ್ನತ ಶಿಕ್ಷಣದ ಬಗ್ಗೆ ಒತ್ತು ಕೊಟ್ಟು ಕೆಲಸ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಜೊತೆಗೆ ಒಡಂಬಡಿಕೆಗೆ ಸಜ್ಜಾಗಿದೆ. ಈಗಾಗಲೇ ಪೆನ್ಸೆಲೇನಿಯಾ ವಿಶ್ವವಿದ್ಯಾಲಯದ ಜೊತೆಗೆ ಒಪ್ಪಂದ ಏರ್ಪಟ್ಟಿದ್ದು, ಸ್ಪೇನ್‌ ವಿಶ್ವವಿದ್ಯಾಲಯದ ಜೊತೆಗೂ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ವಿಧಾನಗಳ ಕುರಿತು ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ.

ಕಟ್ಟಡದ ಮೊದಲ ಭಾಗ ಕಳೆದ ವರ್ಷವೇ ಪೂರ್ಣ: 2018 ರಲ್ಲಿ ಅಂದಿನ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಧಾರವಾಡದಲ್ಲಿ ಉನ್ನತ ಶಿಕ್ಷಣ ಅಕಾಡೆಮಿಯ ಅಗತ್ಯವನ್ನು ಅರಿತು ಹಳಿಯಾಳ ರಸ್ತೆಗೆ ಹೊಂದಿಕೊಂಡಿರುವ ಕವಿವಿ ಕ್ಯಾಂಪಸ್‌ನಲ್ಲಿಯೇ 90 ಕೋಟಿ ರೂ. ವೆಚ್ಚದಲ್ಲಿ ಉನ್ನತ ಶಿಕ್ಷಣ ತರಬೇತಿ ನೀಡುವ ಅಕಾಡೆಮಿ ಕಟ್ಟಡ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುಮೋದನೆ ದೊರಕಿಸಿಕೊಟ್ಟರು. ಕಟ್ಟಡದ ಮೊದಲ ಭಾಗ ಕಳೆದ ವರ್ಷವೇ ಪೂರ್ಣಗೊಂಡಿದ್ದು, ಇಲ್ಲಿ ಹಾಸ್ಟೆಲ್‌ ಕಾರ್ಯಾರಂಭ ಮಾಡಿದೆ. ಕೊರೊನಾ ಅಡ್ಡಿಯಾತಂಕವೂ ದೂರವಾಗಿದ್ದು, ಸದ್ಯಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನು ಸರ್ಕಾರ ವ್ಯವಸ್ಥೆ ಮಾಡಿಕೊಟ್ಟಿದೆ. ಕಟ್ಟಡ ಸಜ್ಜಾದ ನಂತರ ಈಗಿರುವ ಐದು ಪಟ್ಟು ಕಾರ್ಯಕ್ಷೇತ್ರವನ್ನು ಅಕಾಡೆಮಿ ಹೆಚ್ಚಿಸಿಕೊಳ್ಳಲಿದೆ. ಅದಕ್ಕಾಗಿ ಅಗತ್ಯವಿರುವ ನೌಕರ ವ್ಯವಸ್ಥೆಯನ್ನು ಸರ್ಕಾರ ಒದಗಿಸುವ ಭರವಸೆ ನೀಡಿದೆ.

ಹೊಸ ಸಂಶೋಧನೆ, ಶಿಕ್ಷಣ ಗುಣಮಟ್ಟ ಹೆಚ್ಚಳ, ಡಿಜಿಟಲ್‌ ತಂತ್ರಜ್ಞಾನದೊಂದಿಗೆ ಶಿಕ್ಷಣ ಒದಗಿಸುವಂತೆ ಮಾಡುವುದು, ಅದಕ್ಕಾಗಿ ಪ್ರಾಧ್ಯಾಪಕರನ್ನು ಸಜ್ಜುಗೊಳಿಸುವ ಸವಾಲುಗಳು ಅಕಾಡೆಮಿಯ ಮುಂದಿವೆ. ಇವೆಲ್ಲದಕ್ಕೂ ಅಕಾಡೆಮಿ ಸಜ್ಜಾಗಿದೆ. ಪ್ರೊ| ಶಿವಪ್ರಸಾದ, ನಿರ್ದೇಶಕರು, ಉನ್ನತ ಶಿಕ್ಷಣ ಅಕಾಡೆಮಿ, ಕವಿವಿ, ಧಾರವಾಡ          

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.