ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಚಾಲನೆ
ಪೋಷಕರು ಮಕ್ಕಳ ಮೇಲೆ ಒತ್ತಡ ಹೇರದೆ ಸ್ವತಂತ್ರವಾಗಿ ಬಿಟ್ಟಾಗಲೇ ವ್ಯಕ್ತಿತ್ವ ವಿಕಸನ: ಗುಡಸಿ
Team Udayavani, Apr 12, 2022, 12:45 PM IST
ಧಾರವಾಡ: ಮಕ್ಕಳ ಮೇಲೆ ಪೋಷಕರು ಒತ್ತಡ ಹೇರದೆ ಸ್ವತಂತ್ರವಾಗಿ ಬಿಟ್ಟಾಗಲೇ ಸ್ವತಂತ್ರವಾಗಿ ಯೋಚಿಸಲು ಹಾಗೂ ವ್ಯಕ್ತಿತ್ವ ವಿಕಸನಗೊಳಿಸಲು ಸಹಕಾರಿಯಾಗುತ್ತದೆ ಎಂದು ಕವಿವಿ ಕುಲಪತಿ ಡಾ| ಕೆ.ಬಿ.ಗುಡಸಿ ಹೇಳಿದರು.
ರಂಗಾಯಣದಲ್ಲಿ ಚಿಣ್ಣರ ನಡೆ ಹಳ್ಳಿಕಡೆ ನುಡಿಗಟ್ಟಿನೊಂದಿಗೆ ಮೇ 2ರವರೆಗೆ ಆಯೋಜಿಸಿರುವ ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕತೆ ಭರಾಟೆಯಲ್ಲಿ ಮುಳುಗಿರುವ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಬರೀ ಪಠ್ಯದ ಜ್ಞಾನವನ್ನು ಮಾತ್ರ ನೀಡದೆ ಸಂಗೀತ, ನೃತ್ಯ, ನಾಟಕದಂತಹ ಕಲೆಗಳ ಅರಿವನ್ನು ಮೂಡಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ, ರಂಗ ತರಬೇತಿ ಶಿಬಿರಗಳ ಅಗತ್ಯವಿದೆ. ಇದರಿಂದ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳಲು ಸಹಕಾರಿ ಎಂದರು.
ಸಾನ್ನಿಧ್ಯ ವಹಿಸಿದ್ದ ದೇವರಹುಬ್ಬಳ್ಳಿಯ ಸಿದ್ಧಾಶ್ರಮದ ಸಿದ್ಧಶಿವಯೋಗಿಗಳು ಮಾತನಾಡಿ, ನಾಟಕವು ಒಂದು ದೇವದತ್ತ ಕಲೆಯಾಗಿದೆ. ನಾಟಕಗಳು ಸಾಮಾಜಿಕ, ಐತಿಹಾಸಿಕ ಹಾಗೂ ಪ್ರಚಲಿತ ವಿಚಾರಗಳ ಕುರಿತು ಜನರಲ್ಲಿ ಅರಿವನ್ನು ಮೂಡಿಸುತ್ತವೆ. ನಗರದ ಮಕ್ಕಳಿಗೆ ಹಳ್ಳಿಯ ವಾತಾವರಣವನ್ನು ತಿಳಿಸುವ ಕಾರ್ಯವನ್ನು ರಂಗಾಯಣ ಮಾಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಅಶೋಕ ತೇಲಿ ಮಾತನಾಡಿ, ಮಕ್ಕಳು ಓದಿನ ಜತೆಗೆ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.
ಕೃಷಿ ವಿವಿ ಕುಲಸಚಿವ ಶಿವಾನಂದ ಕರಾಳೆ ಮಾತನಾಡಿ, ರಂಗಾಯಣವು ಏರ್ಪಡಿಸಿರುವ ಬೇಸಿಗೆ ಶಿಬಿರದ ಉದ್ದೇಶ ಮಕ್ಕಳಿಗೆ ಹಳ್ಳಿಯ ವಾತಾವರಣದ ಪರಿಚಯವನ್ನು ನೀಡುವುದಾಗಿದೆ ಎಂದರು.
ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಅಧ್ಯಕ್ಷತೆ ವಹಿಸಿದ್ದರು. ಎಸ್ಪಿ ಕೃಷ್ಣಕಾಂತ, ನ್ಯಾಯವಾದಿ ಅರುಣ ಜೋಶಿ, ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಮಕ್ಕಳ ಸಾಹಿತಿಗಳಾದ ಮುಕುಂದ ಮೈಗೂರ, ಎಂ.ಎಂ. ಚಿಕ್ಕಮಠ, ರಂಗಸಮಾಜ ಸದಸ್ಯರಾದ ಹಿಪ್ಪರಗಿ ಸಿದ್ಧರಾಮ, ರಂಗಕರ್ಮಿಗಳು ವಿಠ್ಠಲ ಕೊಪ್ಪದ ಇನ್ನಿತರರಿದ್ದರು. ಕೆ.ಎಚ್. ನಾಯಕ ಪ್ರಾಸ್ತಾವಿಕ ಮಾತನಾಡಿದರು. ಫಕ್ಕೀರಪ್ಪ ಮಾದನಭಾವಿ ನಿರೂಪಿಸಿ, ವಂದಿಸಿದರು.
ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಿ
ಧಾರವಾಡ: ಮಕ್ಕಳು ಸಮಯ ವ್ಯರ್ಥ ಮಾಡದೇ ಶಿಬಿರದಲ್ಲಿ ಹೇಳಿಕೊಡುವ ಸಂಗೀತ, ನಾಟಕ ಹಾಗೂ ವಿವಿಧ ಬಗೆಯ ವಿಭಿನ್ನ ಚಟುವಟಿಕೆಗಳನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಅವುಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ರಂಗಭೂಮಿ ನಿರ್ದೇಶಕ ಪ್ರಕಾಶ ಬೆಳವಾಡಿ ಹೇಳಿದರು.
ರಂಗಾಯಣದಲ್ಲಿ ಹಮ್ಮಿಕೊಂಡಿ ರುವ ಚಿಣ್ಣರ ಮೇಳದ ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳು ಓದಿನ ಜತೆಗೆ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿಕೊಳ್ಳಬೇಕು. ಪಠ್ಯದ ಜ್ಞಾನದ ಜತೆಗೆ ಸಂಗೀತ, ನೃತ್ಯ, ಕಥೆಗಳನ್ನು ಹೇಳುವ ಕಲೆ, ನಾಟಕದಲ್ಲಿ ಅಭಿನಯಿಸುವ ಹೀಗೆ ಹಲವಾರು ಕಲೆಗಳನ್ನು ರೂಢಿಸಿಕೊಳ್ಳಬೇಕು ಎಂದರು.
ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಮಾತನಾಡಿ, ಧಾರವಾಡ ರಂಗಾಯಣ ಮಕ್ಕಳಿಗಾಗಿ ವಿಭಿನ್ನವಾಗಿ ಹಳ್ಳಿಯ ಸೊಗಡಿನ ಕುರಿತು ತಿಳಿಸುವ ಯೋಜನೆ ರೂಪಿಸಿದೆ. ಇದರಿಂದ ಮಕ್ಕಳಲ್ಲಿರುವ ಕಲೆ ಗುರುತಿಸಲು ಸಹಕಾರಿಯಾಗುತ್ತದೆ. ಮಕ್ಕಳು ಶಿಬಿರದ ನಿರ್ದೇಶಕರು ಹೇಳಿಕೊಡುವ ಎಲ್ಲ ಚಟುವಟಿಕೆಗಳನ್ನು ಅತ್ಯಂತ ಶಿಸ್ತಿನಿಂದ ಕಲಿಯಬೇಕು. ಶಿಬಿರದಲ್ಲಿ ಕಲಿಯುವ ಚಟುವಟಿಕೆಗಳನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.
ಶಿಬಿರದ ಸಂಯೋಜಕ ಸಿಕಂದರ ದಂಡಿನ, ನಾಟಕ ನಿರ್ದೇಶಕರು, ರಂಗಾಯಣ ಕಲಾವಿದರು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ