ತಾಪಂ ಅಧ್ಯಕ್ಷ್ಯರಾಗಿ ಹಿರಗಪ್ಪನವರ ಆಯ್ಕೆ 


Team Udayavani, Aug 15, 2018, 4:45 PM IST

15-agust-20.jpg

ಹಾನಗಲ್ಲ: ಹಾನಗಲ್ಲ ತಾಲೂಕು ಪಂಚಾಯತ್‌ ನೂತನ ಅಧ್ಯಕ್ಷರಾಗಿ ತಾಲೂಕಿನ ಮಾಸನಕಟ್ಟಿ ತಾಪಂ ಕಾಂಗ್ರೆಸ್‌ ಸದಸ್ಯ ಸಿದ್ದಪ್ಪ ಹಿರಗಪ್ಪನವರ ಆಯ್ಕೆಯಾಗಿದ್ದಾರೆ. ಮಂಗಳವಾರ ತಾಪಂ ಸಭಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಸಿದ್ದಪ್ಪ ಹಿರಗಪ್ಪನವರ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧ ಆಯ್ಕೆ ಎಂದು ಸವಣೂರು ಉಪವಿಭಾಗಾಧಿಕಾರಿ ಲೋಕೇಶ ಘೋಷಿಸಿದರು. ಚುನಾವಣೆ ಪ್ರಕ್ರಿಯೆಗಳನ್ನು ತಹಶೀಲ್ದಾರ್‌ ಶಕುಂತಲಾ ಚೌಗಲಾ ಹಾಗೂ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಡಾ| ಎಂ.ಜಿ.ಶಶಿಧರ ನಿರ್ವಹಿಸಿದರು.

ಹಾನಗಲ್ಲ ತಾಲೂಕು ಪಂಚಾಯತ್‌ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಒಪ್ಪಂದದಂತೆ ಅಧ್ಯಕ್ಷ ಶಿವಬಸಪ್ಪ ಪೂಜಾರ ರಾಜೀನಾಮೆ ನೀಡಿದ್ದರು. ತೆರವುಗೊಂಡ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಹಾನಗಲ್ಲ ತಾಲೂಕು ಪಂಚಾಯತ್‌ 24 ಸದಸ್ಯರಿದ್ದು, ಇದರಲ್ಲಿ 20 ಸದಸ್ಯರು ಕಾಂಗ್ರೆಸ್‌, ನಾಲ್ವರು ಬಿಜೆಪಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್‌ ಸದಸ್ಯರಲ್ಲಿ ಹಲವು ಆಕಾಂಕ್ಷಿಗಳಿದ್ದಾಗಲೂ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಹಾಗೂ ಮಾಜಿ ಸಚಿವ ಮನೋಹರ ತಹಶೀಲ್ದಾರ ಹಾಗೂ ಮುಖಂಡರ ಸಮ್ಮುಖದಲ್ಲಿ ಆಕಾಂಕ್ಷಿಗಳನ್ನು ಸಮಾಧಾನಪಡಿಸಿ ಸಿದ್ದಪ್ಪ ಹಿರಗಪ್ಪನವರ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ಇತರ ಆಕಾಂಕ್ಷಿಗಳಿಗೆ ಅವಕಾಶ ನೀಡುವ ಭರವಸೆ ಪಕ್ಷದ ಮುಖಂಡರಿಂದ ವ್ಯಕ್ತವಾಗಿದೆ. 

ಆಯ್ಕೆ ನಂತರ ಮಾತನಾಡಿದ ಮಾಜಿ ಸಚಿವ ಮನೋಹರ ತಹಶೀಲ್ದಾರ, ತಾಪಂ ಅಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದರು. ಆದರೆ, ಪಕ್ಷದ ಎಲ್ಲರೂ ಸೇರಿ ಈಗ ಒಬ್ಬರಿಗೆ ಅವಕಾಶ ನೀಡಲಾಗಿದೆ. ಎಲ್ಲರೂ ಸಮರ್ಥರೆ. ಆದರೆ, ಎಲ್ಲ ಸದಸ್ಯರು ಅಧ್ಯಕ್ಷರೆಂದು ತಿಳಿದು ತಾಪಂ ಆಡಳಿತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಈಗ ಪಕ್ಷದ 20 ತಾಪಂ ಸದಸ್ಯರು ಒಗ್ಗಟ್ಟು ಪ್ರದರ್ಶಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ವಿಪ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಪಕ್ಷದ ಹಿತ ಹಾಗೂ ಸಾಮಾಜಿಕ ನ್ಯಾಯವನ್ನು ಮುಂದಿಟ್ಟುಕೊಂಡು ಎಲ್ಲ ಸದಸ್ಯರ ವಿಶ್ವಾಸದಿಂದ ಅವಿರೋಧ ಆಯ್ಕೆಗೆ ಅವಕಾಶವಾಗಿದೆ. ಶಿವಬಸಪ್ಪ ಪೂಜಾರ ಮಾತಿನಂತೆ ನಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲ ಸದಸ್ಯರು ಇಂತಹ ಒಗ್ಗಟ್ಟನ್ನು ಪ್ರದರ್ಸಿಸಬೇಕು ಎಂದರು. ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ಮುಂದಿನ ದಿನಗಳಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಎದುರಿಸಿದರೆ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ ಎಂದರು.

ಮಾಜಿ ಅಧ್ಯಕ್ಷ ಶಿವಬಸಪ್ಪ ಪೂಜಾರ, ಜಿಪಂ ಸದಸ್ಯ ಟಾಕನಗೌಡ ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಎ.ಎಂ.ಪಠಾಣ, ರಂಗನಗೌಡ ಪಾಟೀಲ, ಯಾಶೀರಖಾನ ಪಠಾಣ, ಸರಳಾ ಜಾಧವ, ಸಿದ್ದನಗೌಡ ಪಾಟೀಲ, ರಾಮಣ್ಣ ಪೂಜಾರ, ಬಿ.ಶಿವಪ್ಪ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.