ಜನರಿಗೆ ಮತ್ತೆ ಮೋಸ ಮಾಡುತ್ತಿದ್ದಾರೆ: ಕಳಸ ಬಂಡೂರಿ ಯೋಜನೆ ಸಂಬಂಧ ಎಚ್.ಕೆ. ಪಾಟೀಲ್ ಕಿಡಿ
Team Udayavani, Dec 30, 2022, 12:01 PM IST
ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿರುವ ದಾಖಲೆ ದಿನಾಂಕವಿಲ್ಲದ ನಿರ್ಗತಿಕ ದಾಖಲೆಯಾಗಿದೆ. ಕೆಲಸ ಆರಂಭ ಮಾಡಬೇಕಾದ ಸಂದರ್ಭದಲ್ಲಿ ಡಿಪಿಆರ್ ಅನುಮತಿ ಬಗ್ಗೆ ಮಾತನಾಡುತ್ತಿರುವುದು ಪುನಃ ಜನರನ್ನು ಮೋಸ ಮಾಡುವುದಾಗಿದೆ. ಯೋಜನೆ ಬಗ್ಗೆ ಕಾಳಜಿಯಿದ್ದರೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಾಗಿತ್ತು ಎಂದು ಜಲಸಂಪನ್ಮೂಲ ಮಾಜಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನೇವರಿ 2 ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮಹದಾಯಿ ಜಲ ಜನಾದೋಲನ ಸಮಾವೇಶದ ಮುಜುಗರದಿಂದ ತಪ್ಪಿಸಿಕೊಳ್ಳಲು ಮಾಡಿರುವ ಕುತಂತ್ರವಿದು. ಈಗಾಗಲೇ ಯೋಜನೆಗೆ ಅನುಮತಿ ಪಡೆದ ನಂತರವೂ ಪುನಃ ಡಿಪಿಆರ್ ಅನುಮತಿ ಮಾತನಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿದ್ದರೆ ಒಂದು ಹಂತ ಮುಂದೋಗಿದ್ದಾರೆ ಎನ್ನಬಹುದಿತ್ತು. ಅದುಬಿಟ್ಟು ಪರಿಷ್ಕೃತ ಡಿಪಿಆರ್ ಸಲ್ಲಿಸಿ ಅದಕ್ಕೆ ಅನುಮತಿ ನೀಡಿದೆ ಎಂದು ಜನರನ್ನು ವಂಚಿಸುವ ಕೆಲಸವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ದಿನಾಂಕವಿಲ್ಲ. ಇದು ಸರಕಾರಿ ದಾಖಲೆ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಈಗಾಗಲೇ 2002 ರಲ್ಲಿ ಕಳಸಾ ನಾಲಾ ಯೋಜನೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ನೀಡಿತ್ತು. ಅಲ್ಲಿ ಕಾಮಗಾರಿ ಕೂಡ ಆಗಿದೆ. ಈ ಎಲ್ಲಾ ಕಾರ್ಯಗಳು ಡಿಪಿಆರ್ ಇಲ್ಲದೆ ನಡೆದಿದೆಯೇ. ಕೆಲಸ ಮಾಡುವ ಹಂತದಲ್ಲಿ ಯೋಜನೆ ಇರುವಾಗ ಡಿಪಿಆರ್ ಎನ್ನುವ ಒಂದನೇ ತರಗತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಮಹದಾಯಿ ಯೋಜನೆಗೆ ಗೋವಾ ಮುಖ್ಯಮಂತ್ರಿ ಇನ್ನು ಮುಂದೆ ಯಾವುದೇ ತಕರಾರು ಸೇರಿದಂತೆ ಇನ್ನಿತರೆ ಸಮಸ್ಯೆ ಮಾಡುವುದಿಲ್ಲ ಎನ್ನುವ ಪತ್ರ ನೀಡಿರುವುದಾಗಿ ಇದೇ ನೆಹರು ಮೈದಾನದಲ್ಲಿ ಪ್ರದರ್ಶಿಸಿದ್ದರು. ಅದು ಬೋಗಸ್ ಪತ್ರ ಎಂಬುವುದು ಗೊತ್ತಾಯಿತು. ಇದೀಗ ಕೇಂದ್ರ ಸಚಿವರು ಬಿಡುಗಡೆ ಮಾಡಿರುವ ದಾಖಲೆಯಲ್ಲಿ ದಿನಾಂಕ ಇಲ್ಲದಿರುವುದನ್ನು ನೋಡಿದರೆ ಇದು ಕೂಡ ಜನರನ್ನು ವಂಚಿಸುವ ನಿರ್ಗತಿಕ ದಾಖಲೆ ಅನ್ನಿಸುತ್ತದೆ.
ಇದೇ ದಾಖಲೆಯನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದನದಲ್ಲಿ ಪ್ರಸ್ತಾಪ ಮಾಡಿದರು. ಒಂದು ವೇಳೆ ಈ ದಾಖಲೆ ನಿಜವಾಗಿದ್ದರೆ ಹಾಕಿರುವ ನಿಬಂದನೆಗಳು ರಾಜ್ಯದ ಪಾಲಿಗೆ ಸಮಸ್ಯೆ ತಂದೊಡ್ಡಲಿವೆ ಎನ್ನುವುದನ್ನು ಮರೆತಿದ್ದಾರೆ. ಇವರಿಗೆ ಯೋಜನೆ ಬಗ್ಗೆ ಕಾಳಜಿಯಿದ್ದರೆ ಈ ನಿಬಂದನೆಗಳ ಬಗ್ಗೆ ಸರ್ವ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಬಹುದಿತ್ತು. ಈ ಎಲ್ಲಾ ಬೆಳವಣಿಗೆ ನೋಡಿದರೆ ಜನರನ್ನು ಮತ್ತೊಮ್ಮೆ ಮೂರ್ಖರನ್ನಾಗಿಸುವ ಕುತಂತ್ರ ಎಂದರು.
ಜ.2 ರಂದು ಮಹದಾಯಿ ಜಲ ಹಾಗೂ ಜನಾಂದೋಲನ: ನ್ಯಾಯಾಧಿಕರಣ ಆದೇಶ ಬಂದು ನಾಲ್ಕು ವರ್ಷ ಕಳೆದಿದ್ದರೂ ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಕುರಿತಾದ ಸಣ್ಣ ಪ್ರಗತಿಯೂ ಇಲ್ಲ. ನಾಲ್ಕು ದಿನಗಳ ಹಿಂದೆ ದೆಹಲಿಯ ಅಧಿಕೃತವಾಗಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಇಲ್ಲಿಯವೆರೆಗೂ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿಗೆ ಪ್ರಸ್ತಾವನೆ ಬಂದಿಲ್ಲ ಎಂದಿದ್ದರು. ಜ.೨ ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಹದಾಯಿ ಜಲ ಹಾಗೂ ಜನಾಂದೋಲನ ನಡೆಯಲಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ ಸೇರಿದಂತೆ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!