ಪುಟ್ಟ ಯಜಮಾನನಿಗೆ ಹೊಂಬಳ ಪ್ರಶಸ್ತಿ ಪ್ರದಾನ


Team Udayavani, Nov 11, 2019, 11:50 AM IST

huballi-tdy-3

ಧಾರವಾಡ: ಜಿ.ಬಿ. ಹೊಂಬಳ ಅಭಿನಂದನಾ ಸಮಿತಿ ವತಿಯಿಂದ ಜಿ.ಬಿ. ಹೊಂಬಳ ಅಮೃತ ಮಹೋತ್ಸವ ಹಾಗೂ ಗಣೇಶ ನಾಡೋರ ಅವರ “ಪುಟ್ಟ ಯಜಮಾನ’ ಕೃತಿಗೆ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಕವಿಸಂನಲ್ಲಿ ರವಿವಾರ ಜರುಗಿತು.

15 ಸಾವಿರ ನಗದು, ಸ್ಮರಣಿಕೆ ಒಳಗೊಂಡ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಯನ್ನು ಗಣೇಶ ನಾಡೋರ ಅವರ “ಪುಟ್ಟ ಯಜಮಾನ’ ಕೃತಿಗೆ ಪ್ರದಾನ ಮಾಡಲಾಯಿತು.  ಅತಿಥಿಯಾಗಿದ್ದ ಹಿರಿಯ ವಿಮರ್ಶಕ ಡಾ| ನರಹಳ್ಳಿ ಬಾಲಸುಬ್ರಹ್ಮಣ್ಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಸಾಹಿತ್ಯ ಅಕಾಡೆಮಿಗಳು ಲೇಖಕರಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ ಹೊರತು ಲೇಖಕರನ್ನು, ಪುಸ್ತಕಗಳನ್ನು ಪೋಷಿಸುವಗ್ರಂಥಾಲಯ ಅಧಿಕಾರಿಗಳಿಗೆ ಪ್ರಾಮುಖ್ಯತೆ ನೀಡುತ್ತಿಲ್ಲ. ಹೀಗಾಗಿ ಲೇಖಕರೆಲ್ಲ ಸೇರಿ ಗ್ರಂಥಾಲಯ ಅಧಿಕಾರಿಗಳಿಗೆ ಪ್ರಶಸ್ತಿ ನೀಡುವ ಚಿಂತನೆ ನಡೆಸಬೇಕಿದೆ. ಇದರಿಂದ ಗ್ರಂಥಾಲಯಗಳ ಅಭಿವೃದ್ಧಿ ಹೆಚ್ಚಾಗಲು ಸಾಧ್ಯವಿದೆ ಎಂದರು.

ಸರ್ಕಾರಗಳೂ ಗ್ರಂಥಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. 2016ರಿಂದ ಈವರೆಗೆ ಸರ್ಕಾರಗಳು ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಖರೀದಿ ಮಾಡಿಲ್ಲ. ಹೀಗಾಗಿ ಗ್ರಂಥಾಲಯಗಳು ಅಧೋಗತಿಯತ್ತ ಸಾಗುತ್ತಿವೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿದೆ. ಪುಸ್ತಕ ಸಂಸ್ಕೃತಿ ಕಡೆಗಣನೆ ಹಾಗೂ ಸೃಜನಶೀಲತೆ ಇಲ್ಲದ ಕಾರಣಕ್ಕೆ ಸಮಾಜದಲ್ಲಿ ಕ್ರೌರ್ಯ, ಹಿಂಸೆ ಪ್ರಜ್ವಲಿಸುತ್ತಿವೆ. ಹೀಗಾಗಿ ಇಂದಿನ ಮಕ್ಕಳಿಗೆ ಗ್ರಂಥಾಲಯದ ಪರಿಚಯ ಮಾಡಿಕೊಡುವ ಮೂಲಕ ಅವರಲ್ಲಿ ಓದುವ ಆದರ್ಶ ಬೆಳೆಸುವ ಜವಾಬ್ದಾರಿ ಎಲ್ಲ ಪಾಲಕರ ಮೇಲಿದೆ ಎಂದು ಹೇಳಿದರು. ಕವಿ ಬಿ.ಆರ್‌. ಲಕ್ಷ್ಮಣರಾವ್‌ ಅಭಿನಂದನಾಗ್ರಂಥ ಬಿಡುಗಡೆಗೊಳಿಸಿದರು. ಪುಟ್ಟ ಯಜಮಾನ ಕೃತಿ ಕುರಿತು ಸಾಹಿತಿ ಡಾ| ಬಸು ಬೇವಿನಗಿಡದ ಮಾತನಾಡಿದರು.

ಗಣೇಶ ನಾಡೋರ, ಡಾ| ಆನಂದ ಪಾಟೀಲ, ಡಾ| ಕೆ.ಎನ್‌. ಪ್ರಸಾದ, ಜಿ.ಬಿ. ಹೊಂಬಳ ಮಾತನಾಡಿದರು. ಡಾ| ಎಸ್‌. ಆರ್‌. ಗುಂಜಾಳ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಮಾಲತಿ ಪಟ್ಟಣಶೆಟ್ಟಿ, ಬಿ.ಎಸ್‌. ಶಿರೋಳ, ನೀಲಾ ಹೊಂಬಳ, ಡಾ| ಚಂದ್ರಶೇಖರ ರೊಟ್ಟಿಗವಾಡ, ಬಿ.ಎಸ್‌. ಮಾಳವಾಡ, ಎಸ್‌.ಸಿ. ಪಾಟೀಲ, ಎಸ್‌. ಕೆ. ಸವಣೂರ, ತಮ್ಮಣ್ಣ ಬೀಗಾರ, ಶಂಕರ ಹಲಗತ್ತಿ, ಡಾ| ಮಹೇಶ ಹೊರಕೇರಿ ಇದ್ದರು. ನಿಂಗಣ್ಣ ಕುಂಟಿ ಸ್ವಾಗತಿಸಿದರು. ಮಾಯಾರಾಮನ್‌ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.