ಮಳೆಗಾಲ ಬಳಿಕ ಜೇನು ಮೇಳ

|ಅಕ್ಟೋಬರ್‌ನಲ್ಲಿ ಮೂರು ದಿನ ಕಾಲ ಆಯೋಜನೆಗೆ ಚಿಂತನೆ |ಜೇನು ಸಾಕಾಣಿಕೆ ವಿಧಾನ-ಲಾಭ ಮಾಹಿತಿ ಲಭ್ಯ |

Team Udayavani, May 31, 2019, 9:55 AM IST

hubali-tdy-2..

ಧಾರವಾಡ: ಬೇಸಿಗೆಯಲ್ಲಿ ಮಾವು ಮೇಳದ ಮೂಲಕ ಮಾವಿನ ಹಣ್ಣಿನ ರುಚಿ ಸವಿದಿರುವ ಧಾರವಾಡಿಗರಿಗೆ ಮಳೆಗಾಲ ಅಂತ್ಯದ ಬಳಿಕ ಜೇನು ಮೇಳವೂ ಲಭ್ಯವಾಗಲಿದೆ.

ಹೌದು. ಇಂತಹ ಮೇಳ ಆಯೋಜನೆಗೆ ಧಾರವಾಡದ ತೋಟಗಾರಿಕೆ ಇಲಾಖೆ ಮುಂದಾಗಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮಾವು ಮೇಳ ಹಾಗೂ ಅದರ ಜತೆ ಸಸ್ಯಸಂತೆ ಕೈಗೊಂಡು ಯಶಸ್ಸು ಪಡೆದ ತೋಟಗಾರಿಕೆ ಇಲಾಖೆ, ಈಗ ಇದೇ ಮೊದಲ ಬಾರಿಗೆ ಜೇನು ಮೇಳ ಆಯೋಜನೆಗೆ ಚಿಂತನೆ ಕೈಗೊಂಡಿದೆ. ಅದಕ್ಕಾಗಿ ಈಗಿನಿಂದಲೇ ಒಂದಿಷ್ಟು ತಯಾರಿ ಮಾಡಿಕೊಳ್ಳುತ್ತಲಿದೆ. ದೇಸಿಯ ಜೇನು ತಳಿಗಳಲ್ಲಿ ವೈವಿಧ್ಯತೆಯಿದ್ದು, ಹೆಜ್ಜೇನು, ಕೋಲು ಜೇನು, ತುಡುವಿ ಜೇನು, ಮುಜೆಂಟಿ ಜೇನು ತಳಿಗಳನ್ನು ಗುರುತಿಸಲಾಗಿದೆ. ಇದರೊಂದಿಗೆ ವಿದೇಶಿ ತಳಿ ಎಪಿಸ್‌ ಮೆಲ್ಲಿಪೆರಾವನ್ನು ವ್ಯಾಪಕವಾಗಿ ಜೇನು ಸಾಕಾಣಿಕೆಯಲ್ಲಿ ಬಳಲಾಗುತ್ತಿದೆ. ಜೇನು ಸಾಕಾಣಿಕೆ ವಿಧಾನ, ಅದರ ಲಾಭಗಳು ಸೇರಿದಂತೆ ವಿವಿಧ ಮಾಹಿತಿಗಳು ಮೇಳದಲ್ಲಿ ಲಭ್ಯವಾಗಲಿದೆ.

ಏನಿದು ಜೇನು ಮೇಳ: ಜಿಲ್ಲೆಯಲ್ಲಿ ಜೇನು ಕೃಷಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ರೈತರು-ಸಾರ್ವಜನಿಕರಿಗೆ ಜಾಗೃತಿ ಮಾಡಿಸಲು ಮೇಳದ ಅವಶ್ಯಕತೆ ಅರಿತ ತೋಟಗಾರಿಕೆ ಇಲಾಖೆ ಇಂತಹದೊಂದು ಮೇಳ ಆಯೋಜನೆಯತ್ತ ಹೆಜ್ಜೆ ಹಾಕಿದೆ. ಜೇನು ತುಪ್ಪದ ಉತ್ಪಾದನೆಯ ಹೆಚ್ಚಳ ಜತೆ ಅದರ ಉಪ ಉತ್ಪನ್ನಗಳ ಉತ್ಪಾದನೆ, ಮಾರಾಟ ಬಗ್ಗೆ ಜಾಗೃತಿ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಕಲ್ಪಿಸುವ ಉದ್ದೇಶ ಈ ಮೇಳ ಹೊಂದಿದೆ. ಅದಕ್ಕಾಗಿ ಮೂರು ದಿನಗಳ ಕಾಲ ಮೇಳ ಆಯೋಜಿಸಲು ಚಿಂತಿಸಲಾಗಿದ್ದು, ಮಾವು ಮೇಳದಂತೆ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲೇ ಮಳಿಗೆಗಳನ್ನು ನಿರ್ಮಿಸಿ ಆ ಮೂಲಕ ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿತೆ ನೀಡಲು ಯೋಚಿಸಲಾಗಿದೆ.

ಜೇನು ಉಪ ಉತ್ಪನ್ನಗಳ ಪ್ರದರ್ಶನ: ಜೇನು ಕೃಷಿ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಮೀಸಲಿರುವ ಐದು ಕೋಟಿ ಅನುದಾನದಲ್ಲಿ ಧಾರವಾಡ ಜಿಲ್ಲೆಗಾಗಿ 50 ಲಕ್ಷ ರೂ. ಅನುದಾನ ನೀಡಲಾಗಿದೆ. ಹೀಗಾಗಿ ಜೇನು ಕೃಷಿ ತರಬೇತಿ, ಜೇನು ಕುಟುಂಬ, ಪೆಟ್ಟಿಗೆ ಸಹಾಯಧನ ರೂಪದಲ್ಲಿ ಆಸಕ್ತ ರೈತರಿಗೆ ವಿತರಿಸುವ ಬಗ್ಗೆ ಜಾಗೃತಿ ಮೂಡಿಸಲು ಈ ಮೇಳವನ್ನು ಬಳಸಿಕೊಳ್ಳಲು ಮುಂದಾಗಿದೆ. ಇಷ್ಟೆ ಅಲ್ಲ ಜೇನಿನ ಉಪ ಉತ್ಪನ್ನಗಳಾದ ಪರಾಗ, ರಾಜಶಾಯಿ ರಸ, ಜೇನು ಮೇಣ ಸೇರಿದಂತೆ ಇತರೆ ಉತ್ಪನ್ನಗಳ ಬಗ್ಗೆ ಪ್ರದರ್ಶನ ಮಾಡಲು ತಯಾರಿ ಮಾಡಿಕೊಳ್ಳುತ್ತಿದ್ದು, ಅದಕ್ಕಾಗಿ ಜೇನು ಕೃಷಿ ರೈತರು ಹಾಗೂ ಜೇನು ತುಪ್ಪ ತಯಾರಿಕಾ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ. ಒಟ್ಟಿನಲ್ಲಿ ಜೇನು ಕೃಷಿ ಜತೆಗೆ ರುಚಿಗಟ್ಟಾದ ಜೇನು ತುಪ್ಪ ಸೇರಿದಂತೆ ಅದರ ಇನ್ನಿತರ ಉಪಉತ್ಪನ್ನಗಳು ಸಹ ಮೇಳದಲ್ಲಿ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲು ತಯಾರಿ ನಡೆದಿದೆ.

ಜಿಲ್ಲೆಯ ಅಳ್ನಾವರ, ನವಲೂರ, ಮಂಡಿಹಾಳ, ಕುಂದಗೋಳ ಸೇರಿದಂತೆ ಒಟ್ಟು 50 ಜನ ರೈತರು ಜೇನು ಕೃಷಿ ಮಾಡುತ್ತಿದ್ದಾರೆ. ಅವರಿಂದ ವರ್ಷಕ್ಕೆ 2 ರಿಂದ 4 ಕೆ.ಜಿ. ಜೇನು ತುಪ್ಪ ಉತ್ಪಾದನೆ ಆಗುತ್ತಿದೆ. ಆ ಪೈಕಿ ಅದು ಅವರವರ ಮನೆಗಾಗಿ ಬಳಕೆ ಆಗುತ್ತಿದ್ದರೆ ಕೆಲವೊಂದಿಷ್ಟು ಮಾರಾಟ ಆಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಜೇನು ಕೃಷಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಮೇಳ ಸಹಕಾರಿ ಆಗಲಿದ್ದು, ಈ ಮೇಳ ಯಶಸ್ಸು ಕಂಡರೆ ಪ್ರತಿ ವರ್ಷವೂ ಮಾಡುವ ಚಿಂತನೆ ತೋಟಗಾರಿಕೆ ಇಲಾಖೆಗೆ ಇದೆ.

• ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.