ಶೌರ್ಯ ಪದಕ ವಿಜೇತ ಸೈನಿಕರಿಗೆ ಸನ್ಮಾನ


Team Udayavani, Apr 16, 2018, 5:15 PM IST

16-April-26.jpg

ಧಾರವಾಡ: ಸಶ್ರೀ ಕುಮಾಂವು ಪ್ರತಿಷ್ಠಾನ ಮತ್ತು ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಸಹಯೋಗದಲ್ಲಿ ಕವಿಸಂನಲ್ಲಿ ರವಿವಾರ ಉತ್ತರ ಕರ್ನಾಟಕದ ಶೌರ್ಯ ಪದಕ ವಿಜೇತ ಸೈನಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರುಗಿತು.

ಶೌರ್ಯ ಪ್ರಶಸ್ತಿ ಪಡೆದ ವೀರಯೋಧರು ಹಾಗೂ ಮರಣ ಹೊಂದಿದ ಸೈನಿಕರ ಕುಟುಂಬಸ್ಥರನ್ನು ಸನ್ಮಾನಿಸುವುದರ ಜೊತೆಗೆ ಅವರ ತ್ಯಾಗ, ಬಲಿದಾನ, ಶೌರ್ಯ ಮೆರೆದ ಘಟನೆಗಳನ್ನು ಮೆಲುಕು ಹಾಕಲಾಯಿತು. ಗೌರವ ಸ್ವೀಕರಿಸಿದ ಸೈನಿಕರು ಯುದ್ಧದ ಸಮಯದ ಘಟನಾವಳಿಗಳನ್ನು ಸ್ಮರಿಸಿದರು.

ಮಂಗಳೂರು ವಿವಿ ವಿಶ್ರಾಂತ ಕುಲಪತಿ ಡಾ| ಎಂ.ಐ. ಸವದತ್ತಿ ಮಾತನಾಡಿ, ನಾವಿಂದು ಜಾತಿ, ಭಾಷೆಗೆ ಬಡಿದಾಡುತ್ತಿದ್ದೇವೆ. ಸೈನಿಕರು ಮಾತ್ರ ನಿಜವಾಗಲೂ ದೇಶಕ್ಕಾಗಿ ಬಡಿದಾಡುತ್ತಿದ್ದಾರೆ. ಅವರ ದೇಶಭಕ್ತಿ ಅಪಾರ. ಅವರ ಕಾರ್ಯ ಸದಾ ಸ್ಮರಣೀಯ. ಸೈನಿಕರನ್ನು ಗೌರವಿಸುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಉತ್ತಮ ಕಾರ್ಯಗಳಿಂದ ದೇಶದ ಉನ್ನತಿ ಆಗಲಿದೆ. ಆದರೆ ಈ ಸ್ಥರಗಳಲ್ಲಿ ಕೇವಲ ಶೇ 5-10ರಷ್ಟು ಮಾತ್ರ ಕಾರ್ಯ ನಿರ್ವಹಣೆಯಾಗುತ್ತಿದೆ. ಸೇನೆಯಿಂದ ಮಾತ್ರ ಸಂಪೂರ್ಣ ಪ್ರಮಾಣದ ಕಾರ್ಯ ನಡೆಯುತ್ತಿದೆ. ಶೌರ್ಯ ಪ್ರಶಸ್ತಿ ಪಡೆದ ಸೈನಿಕರನ್ನು ಹಾಗೂ ಅವರ ಕುಟುಂಬಸ್ಥರನ್ನು ಜನರಿಗೆ ಪರಿಚಯ ಮಾಡಿಕೊಟ್ಟಿರುವ ಕೆಲಸ ಶ್ಲಾಘನೀಯ ಎಂದರು.

ಸಶ್ರೀ ಕುಮಾಂವು ಪ್ರತಿಷ್ಠಾನದ ಕಾರ್ಯ ನಿರ್ವಾಹಕ ಲೆ.ಜನರಲ್ ಎಸ್‌.ಸಿ. ಸರದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮ್ಮಿನಗಡ, ಕೃಷ್ಣ ಜೋಶಿ, ಅರವಿಂದ ಶಿಗ್ಗಾಂವ, ಕರ್ನಲ್‌ ಮೋಹನ ಮಠ, ಬ್ರಿಗೇಡಿಯರ್‌ ಎಸ್‌.ಬಿ. ಭಾಗವತ್‌ ಮೊದಲಾದವರಿದ್ದರು. ಸಿ.ಎಸ್‌. ಹವಾಲ್ದಾರ್‌ ಸ್ವಾಗತಿಸಿದರು.

ಬೆಳಗಾವಿಯಿಂದ 28, ಧಾರವಾಡ, ಕಾರವಾರ, ಬಾಗಲಕೋಟೆಯಿಂದ ತಲಾ 3 ಮತ್ತು ಗದಗ, ಕೊಪ್ಪಳ, ಬಳ್ಳಾರಿ, ಬೀದರ, ಕಲಬುರ್ಗಿ, ವಿಜಯಪುರದಿಂದ ತಲಾ ಒಬ್ಬ ಶೌರ್ಯ ಪದಕ ವಿಜೇತರು ಸೇರಿ ಒಟ್ಟು 38 ಜನರು ಪಾಲ್ಗೊಂಡಿದ್ದರು. ನಂತರ ಡಿಸಿ ಕಚೇರಿ ಬಳಿ ಸ್ಥಾಪಿಸಿರುವ ಕಾರ್ಗಿಲ್‌ ಸ್ತೂಪಕ್ಕೆ ತೆರಳಿ ನಮನ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.