ಶೌರ್ಯ ಪದಕ ವಿಜೇತ ಸೈನಿಕರಿಗೆ ಸನ್ಮಾನ


Team Udayavani, Apr 16, 2018, 5:15 PM IST

16-April-26.jpg

ಧಾರವಾಡ: ಸಶ್ರೀ ಕುಮಾಂವು ಪ್ರತಿಷ್ಠಾನ ಮತ್ತು ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಸಹಯೋಗದಲ್ಲಿ ಕವಿಸಂನಲ್ಲಿ ರವಿವಾರ ಉತ್ತರ ಕರ್ನಾಟಕದ ಶೌರ್ಯ ಪದಕ ವಿಜೇತ ಸೈನಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರುಗಿತು.

ಶೌರ್ಯ ಪ್ರಶಸ್ತಿ ಪಡೆದ ವೀರಯೋಧರು ಹಾಗೂ ಮರಣ ಹೊಂದಿದ ಸೈನಿಕರ ಕುಟುಂಬಸ್ಥರನ್ನು ಸನ್ಮಾನಿಸುವುದರ ಜೊತೆಗೆ ಅವರ ತ್ಯಾಗ, ಬಲಿದಾನ, ಶೌರ್ಯ ಮೆರೆದ ಘಟನೆಗಳನ್ನು ಮೆಲುಕು ಹಾಕಲಾಯಿತು. ಗೌರವ ಸ್ವೀಕರಿಸಿದ ಸೈನಿಕರು ಯುದ್ಧದ ಸಮಯದ ಘಟನಾವಳಿಗಳನ್ನು ಸ್ಮರಿಸಿದರು.

ಮಂಗಳೂರು ವಿವಿ ವಿಶ್ರಾಂತ ಕುಲಪತಿ ಡಾ| ಎಂ.ಐ. ಸವದತ್ತಿ ಮಾತನಾಡಿ, ನಾವಿಂದು ಜಾತಿ, ಭಾಷೆಗೆ ಬಡಿದಾಡುತ್ತಿದ್ದೇವೆ. ಸೈನಿಕರು ಮಾತ್ರ ನಿಜವಾಗಲೂ ದೇಶಕ್ಕಾಗಿ ಬಡಿದಾಡುತ್ತಿದ್ದಾರೆ. ಅವರ ದೇಶಭಕ್ತಿ ಅಪಾರ. ಅವರ ಕಾರ್ಯ ಸದಾ ಸ್ಮರಣೀಯ. ಸೈನಿಕರನ್ನು ಗೌರವಿಸುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಉತ್ತಮ ಕಾರ್ಯಗಳಿಂದ ದೇಶದ ಉನ್ನತಿ ಆಗಲಿದೆ. ಆದರೆ ಈ ಸ್ಥರಗಳಲ್ಲಿ ಕೇವಲ ಶೇ 5-10ರಷ್ಟು ಮಾತ್ರ ಕಾರ್ಯ ನಿರ್ವಹಣೆಯಾಗುತ್ತಿದೆ. ಸೇನೆಯಿಂದ ಮಾತ್ರ ಸಂಪೂರ್ಣ ಪ್ರಮಾಣದ ಕಾರ್ಯ ನಡೆಯುತ್ತಿದೆ. ಶೌರ್ಯ ಪ್ರಶಸ್ತಿ ಪಡೆದ ಸೈನಿಕರನ್ನು ಹಾಗೂ ಅವರ ಕುಟುಂಬಸ್ಥರನ್ನು ಜನರಿಗೆ ಪರಿಚಯ ಮಾಡಿಕೊಟ್ಟಿರುವ ಕೆಲಸ ಶ್ಲಾಘನೀಯ ಎಂದರು.

ಸಶ್ರೀ ಕುಮಾಂವು ಪ್ರತಿಷ್ಠಾನದ ಕಾರ್ಯ ನಿರ್ವಾಹಕ ಲೆ.ಜನರಲ್ ಎಸ್‌.ಸಿ. ಸರದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮ್ಮಿನಗಡ, ಕೃಷ್ಣ ಜೋಶಿ, ಅರವಿಂದ ಶಿಗ್ಗಾಂವ, ಕರ್ನಲ್‌ ಮೋಹನ ಮಠ, ಬ್ರಿಗೇಡಿಯರ್‌ ಎಸ್‌.ಬಿ. ಭಾಗವತ್‌ ಮೊದಲಾದವರಿದ್ದರು. ಸಿ.ಎಸ್‌. ಹವಾಲ್ದಾರ್‌ ಸ್ವಾಗತಿಸಿದರು.

ಬೆಳಗಾವಿಯಿಂದ 28, ಧಾರವಾಡ, ಕಾರವಾರ, ಬಾಗಲಕೋಟೆಯಿಂದ ತಲಾ 3 ಮತ್ತು ಗದಗ, ಕೊಪ್ಪಳ, ಬಳ್ಳಾರಿ, ಬೀದರ, ಕಲಬುರ್ಗಿ, ವಿಜಯಪುರದಿಂದ ತಲಾ ಒಬ್ಬ ಶೌರ್ಯ ಪದಕ ವಿಜೇತರು ಸೇರಿ ಒಟ್ಟು 38 ಜನರು ಪಾಲ್ಗೊಂಡಿದ್ದರು. ನಂತರ ಡಿಸಿ ಕಚೇರಿ ಬಳಿ ಸ್ಥಾಪಿಸಿರುವ ಕಾರ್ಗಿಲ್‌ ಸ್ತೂಪಕ್ಕೆ ತೆರಳಿ ನಮನ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.