ಡಾ|ಮಹಾಂತ ಶಿವಯೋಗಿಗಳಿಗೆ ಗೌರವ ನಮನ


Team Udayavani, May 21, 2018, 5:26 PM IST

21-may-24.jpg

ಇಳಕಲ್ಲ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ, ಮಹಾಂತ ಜೋಳಿಗೆಯ ಮೂಲಕ ಕ್ರಾಂತಿಕಾರಿ ಹೋರಾಟ ನಡೆಸಿದ್ದ ಇಳಕಲ್ಲ-ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಡಾ|ಮಹಾಂತ ಶಿವಯೋಗಿಗಳ ಅಂತ್ಯಕ್ರಿಯೆ ಸೋಮವಾರ ಬೆಳಗ್ಗೆ ಇಳಕಲ್ಲದ
ಗದ್ದುಗೆಯಲ್ಲಿ ನೆರವೇರಲಿದೆ.

ಇದಕ್ಕೂ ಮುಂಚೆ ಆರ್‌.ವೀರಮಣಿ ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ನಾಡಿನ ಮಠಾಧೀಶರು, ಶರಣರು ಹಾಗೂ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.

ಸವದಿ-ಹಿಪ್ಪರಗಿಯಲ್ಲಿ ದರ್ಶನ: ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಲಿಂಗೈಕ್ಯರಾದ ಮಹಾಂತ ಶ್ರೀಗಳ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಗುರುಗಳು ಈ ಹಿಂದೆ ಪಟ್ಟಾಧಿಕಾರಿಯಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸವದಿ ಮಠಕ್ಕೆ ತರಲಾಯಿತು. ಅಲ್ಲಿ ಸಾವಿರಾರು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. ಭಕ್ತರ ಅಪೇಕ್ಷೆ ಮೇರೆಗೆ ಪೂಜ್ಯರ ಪೂರ್ವಾಶ್ರಮದ ಹುಟ್ಟೂರು ಜಮಖಂಡಿ ತಾಲೂಕಿನ ಹಿಪ್ಪರಗಿಗೆ ತರಲಾಯಿತು. ಅಲ್ಲಿ ನೂರಾರು ಭಕ್ತರು, ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.

ಹಿಪ್ಪರಗಿಯಿಂದ ನೇರವಾಗಿ ಬಾಗಲಕೋಟೆ ನಗರದ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾರ್ವಧಕ ಸಂಘದ ಆವರಣದಲ್ಲಿರುವ ಲಿಂ| ಬೀಳೂರು ಗುರುಬಸವ ಅಜ್ಜನವರ ಗುಡಿ ಎದುರು ಪೂಜ್ಯರ ಪಾರ್ಥಿವ ಶರೀರ ಇರಿಸಲಾಯಿತು. ಬಿವಿವಿ ಸಂಘದಿಂದ ಅಂತಿಮ ನಮನ ಸಲ್ಲಿಸಲಾಯಿತು. 44 ವರ್ಷಗಳ ಬಿವಿವಿ ಸಂಘದ ಅಧ್ಯಕ್ಷರಾಗಿದ್ದ ಶ್ರೀಗಳ ಸೇವೆಯನ್ನು, ಸಂಘದ ಆಡಳಿತ ಮಂಡಳಿಯ ಪ್ರಮುಖರು ಸ್ಮರಿಸಿದರು. ಗಣ್ಯರು-ಮಠಾಧೀಶರ ದರ್ಶನ: ರಾತ್ರಿ ಬಿವಿವಿ ಸಂಘದ ಆವರಣದಿಂದ ನೇರವಾಗಿ ಇಳಕಲ್ಲದ ವಿಜಯ ಮಹಾಂತೇಶ್ವರ ಮಠಕ್ಕೆ ಕರೆ ತರಲಾಯಿತು. ಸಾವಿರಾರು ಭಕ್ತರು, ಸಾರ್ವಜನಿಕರು ಶ್ರೀಗಳ ಅಂತಿಮ ದರ್ಶನ ಪಡೆಯಲು ಕಾದು ಕುಳಿತಿದ್ದರು.

ರವಿವಾರ ಬೆಳಗ್ಗೆ ಶ್ರೀಗಳ ಪಾರ್ಥಿವ ಶರೀರವನ್ನು ನಗರದ ಆರ್‌. ವೀರಮಣಿ ಕ್ರೀಡಾಂಗಣಕ್ಕೆ ಕೊಂಡೊಯ್ಯಲಾಯಿತು. ಬೃಹತ್‌ ಆವರಣದಲ್ಲಿ ಭಕ್ತರ ದರ್ಶನಕ್ಕೆ ಇರಿಸಲಾಗಿದ್ದು, ನಾಡಿನ ವಿವಿಧ ಗಣ್ಯರು, ಮಠಾಧೀಶರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಉತ್ತರಾಧಿಕಾರಿ ಶ್ರೀ ಗುರುಮಹಾಂತ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ದಾವಣಗೆರೆಯ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಸ್ತುವಾರಿ ವಹಿಸಿದ್ದರು.

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ, ಕೋಡಿಮಠ ಶ್ರೀಗಳು ಡಾ| ಮಹಾಂತ ಶಿವಯೋಗಿಗಳ ಅಂತಿಮ ದರ್ಶನ ಪಡೆದರು. ಮಾಜಿ ಸಚಿವ, ಬಬಲೇಶ್ವರದ ಶಾಸಕ ಎಂ.ಬಿ. ಪಾಟೀಲ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಉದ್ಯಮಿ ಎಸ್‌.ಆರ್‌. ನವಲಿ ಹಿರೇಮಠ, ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ|ಆರ್‌. ಮಾರುತೇಶ ಮುಂತಾದವರು ಶ್ರೀಗಳ ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.