ರೈತರ ಸಮಗ್ರ ಅಭಿವೃದ್ಧಿಗೆ ತೋಟಗಾರಿಕೆ ಇಲಾಖೆ ಅಣಿ


Team Udayavani, Feb 9, 2023, 8:30 AM IST

add-thumb-3

– 1845 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಬೆಳೆದ 2800ಕ್ಕೂ ಹೆಚ್ಚು ರೈತರು
– ತೋಟಗಾರಿಕಾ ಬೆಳೆ ಅಭಿವೃದ್ಧಿ ಪಡಿಸಲು ಸೌಲಭ್ಯ ಒದಗಿಸಲು ಮುಂದಾದ ಇಲಾಖೆ
– ಹತ್ತು ಹಲವಾರು ರೈತೋಪಯೋಗಿ ಯೋಜನೆಗಳಿಗೆ ಆರ್ಥಿಕ ಸಹಾಯಧನ-ಸೌಕರ್ಯ

ಕಲಘಟಗಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಾ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಯೋಜನೆಗಳ ಮೂಲಕ ತೋಟಗಾರಿಕಾ ಇಲಾಖೆ ರೈತರ ಸಮಗ್ರ ಅಭಿವೃದ್ಧಿಗೆ ಅಣಿಯಾಗಲು ಕಾರ್ಯೋನ್ಮುಖವಾಗಿದೆ.

ಕಲಘಟಗಿ ತಾಲೂಕಿನ 1845 ಹೆಕ್ಟೇರ್‌ ಪ್ರದೇಶದಲ್ಲಿ ಸುಮಾರು 2800ಕ್ಕೂ ಹೆಚ್ಚು ರೈತರು ತೋಟಗಾರಿಕಾ ಬೆಳೆ ಬೆಳೆಯುತ್ತಿದ್ದಾರೆ. ತೋಟಗಾರಿಕಾ ಬೆಳೆ ಅಭಿವೃದ್ಧಿ ಪಡಿಸಲು ಇಲಾಖೆ ಮುಖೇನ ರಾಜ್ಯ-ಕೇಂದ್ರ ಸರಕಾರಗಳು ಹತ್ತು ಹಲವಾರು ಯೋಜನೆಗಳ ಮೂಲಕ ಸೌಲಭ್ಯ ಒದಗಿಸಲು ಮುಂದಾಗಿವೆ. ರೈತ ಸಮೂಹ ತೋಟಗಾರಿಕಾ ಬೆಳೆ ಬೆಳೆಯುವ ಮೂಲಕ ಆರ್ಥಿಕ ಸಬಲತೆ ಸಾ ಧಿಸಲು ನೀರು-ಕಳೆ ನಿರ್ವಹಣೆಗೆ ಹನಿ ನೀರಾವರಿ, ಅವಶ್ಯಕ ಯಂತ್ರೋಪಕರಣ, ಬೆಳೆ ಕೊಯ್ಲೋತ್ತರ ನಿರ್ವಹಣೆ ಹೀಗೆ ಹತ್ತು ಹಲವಾರು ರೈತೋಪಯೋಗಿ ಯೋಜನೆಗಳಿಗೆ ಆರ್ಥಿಕ ಸಹಾಯಧನದೊಂದಿಗೆ ಅವಶ್ಯವಿರುವ ಸೌಕರ್ಯ ಒದಗಿಸಲಾಗುತ್ತಿದೆ.

ತಾಲೂಕಿನಾದ್ಯಂತ ರೈತರ ಬೇಡಿಕೆಗಳಿಗೆ ಅನುಗುಣವಾಗಿ ದೊಡ್ಡ ಪ್ರಮಾಣದ ಹಸಿರುಮನೆ, ನೆರಳು ಪರದೆ, ಶೀಥಲ ಗೃಹಗಳನ್ನು ನೀಡಲಾಗುತ್ತಿದೆ. ಇಳುವರಿಯಲ್ಲಿ ಕುಂಠಿತಗೊಂಡ ಮಾವು-ಚಿಕ್ಕು ಬೆಳೆಗಳನ್ನು ರೈತರು ತಮ್ಮ ಜಮೀನುಗಳಿಂದ ತೆಗೆಯುತ್ತಿದ್ದು, ಅದರ ಬದಲಾಗಿ ರೈತ ವರ್ಗದ ಆರ್ಥಿಕ ಸಬಲತೆ ಹೆಚ್ಚಿಸಲು ಇಲಾಖೆ ಇಲ್ಲಿನ ಹವಾಮಾನಕ್ಕೆ ಅನುಗುಣವಾಗಿ ಹೆಚ್ಚು ಇಳುವರಿ ನೀಡುವ ಗೋಡಂಬಿ, ಅಡಿಕೆ, ಬಾಳೆ, ನುಗ್ಗೆ, ಹೊಸದಾಗಿ ಡ್ರ್ಯಾಗನ್ ಫ್ರೂಟ್ ಬೆಳೆಯುವಂತೆ ರೈತರಿಗೆ ಅರಿವು ಮೂಡಿಸಿ ಅವಶ್ಯಕ ಮಾಹಿತಿ ನೀಡಲಾಗುತ್ತಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಮಾವು, ಬಾಳೆ, ಬಿಡಿ ಹೂ, ಕತ್ತರಿಸಿದ ಹೂ, ಗೆಡ್ಡೆಜಾತಿ ಹೂ, ಹೈಬ್ರಿàಡ್‌ ತರಕಾರಿ ಮುಂತಾದವುಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುತ್ತದೆ. ಅದಲ್ಲದೇ ಹೊಸ ಪ್ರದೇಶ ವಿಸ್ತರಣೆಯಲ್ಲಿ ಮಾವು, ಬಾಳೆ ಬೆಳೆಗಳಿಗೆ ಸಹಾಯಧನ ಪಡೆದ ರೈತರಿಗೆ ನಂತರದ ವರ್ಷದಲ್ಲಿ ಅವುಗಳ ನಿರ್ವಹಣೆಗೆ ಸಹಾಯಧನ ನೀಡಲಾಗುತ್ತದೆ. ಉದಾಹರಣೆಗೆ ಬಾಳೆ ಬೆಳೆಯ ಹೊಸ ಪ್ರದೇಶ ವಿಸ್ತರಣೆಯ ಪ್ರತಿ ಹೆಕ್ಟೇರ್‌ಗೆ 30,600 ರೂ. ಹಾಗೂ ಮೊದಲ ವರ್ಷದ ನಿರ್ವಹಣೆಗೆ 10,400 ರೂ. ಸಹಾಯಧನ ನೀಡಲಾಗುತ್ತಿದೆ.

ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿರುವ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರತಿ ವರ್ಷ ಸಾರ್ವಜನಿಕರಿಂದ ಬೇಡಿಕೆಯುಳ್ಳ ಹಾಗೂ ಇಲಾಖೆ ನೀಡಿದ ಗುರಿಯನ್ವಯ ಗಿಡ ಬೆಳೆಸಿ ವಿತರಿಸಲಾಗುತ್ತಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.