ಆಸ್ಪತ್ರೆ ದಾರಿ ಏಕಾಏಕಿ ಬಂದ್!
•ತಹಶೀಲ್ದಾರ್ ನೇತೃತ್ವದ ತಂಡದಿಂದ ದಡ್ಡಿಕಮಲಾಪುರದಲ್ಲಿ ಕಾರ್ಯಾಚರಣೆ
Team Udayavani, Jul 16, 2019, 2:10 PM IST
ಧಾರವಾಡ: ದಡ್ಡಿಕಮಲಾಪುರದಲ್ಲಿರುವ ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರದ ಎದುರು ರಸ್ತೆ ಅಗೆದು ಹಾಕಲಾಗಿದೆ.
ಧಾರವಾಡ: ದಡ್ಡಿ ಕಮಲಾಪುರ ಬಳಿ ಇರುವ ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರಕ್ಕೆ ಇರುವ ಏಕೈಕ ದಾರಿಯನ್ನು ಅಧಿಕಾರಿಗಳು ಸೋಮವಾರ ದಿಢೀರ್ ಬಂದ್ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರಗಳನ್ನು ಬಳಸಿದ ತಹಶೀಲ್ದಾರ್ ನೇತೃತ್ವದ ತಂಡ ಈ ಆಸ್ಪತ್ರೆಗೆ ಇರುವ ಮಾರ್ಗದ ಮೂರು ಕಡೆಗಳಲ್ಲಿ ತೆಗ್ಗು ತೋಡಿ ಹಾಕಿದ್ದು, ಆಸ್ಪತ್ರೆಗೆ ಬರುವವರು ಮತ್ತು ಹೋಗುವವರು ಪರದಾಡುವಂತಾಗಿದೆ. ಯಾವುದೇ ಮುನ್ನೆಚ್ಚರಿಕೆ ನೋಟಿಸ್ ನೀಡದೇ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂದು ಯೋಗ ಚಿಕಿತ್ಸಾ ಕೇಂದ್ರದ ಹಿರಿಯ ವೈದ್ಯರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಅಗತ್ಯ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಏನಿದರ ಹಿನ್ನೆಲೆ?: ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಧಾರವಾಡ-ಅಳ್ನಾವರ ಹೆದ್ದಾರಿಯಿಂದ ದಾರಿ ಇರಲಿಲ್ಲ. 2003ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಇಲ್ಲಿನ ಸರ್ಕಾರಿ ಜಾಗೆಯಲ್ಲಿ ದಾಟಿಕೊಂಡು ಹೋಗುವುದಕ್ಕೆ ಅನುಮತಿ ನೀಡಿದ್ದರು. ಇದನ್ನು ಕಾಯಂ ಆಗಿ ಬಳಸಿಕೊಳ್ಳುವಂತೆ ಅಧಿಕೃತವಾಗಿ ಪತ್ರವೊಂದನ್ನು ಯೋಗ ಚಿಕಿತ್ಸಾ ಕೇಂದ್ರಕ್ಕೆ ನೀಡಿದ್ದರು. ಈವರೆಗೂ ಅದೇ ರೀತಿಯಾಗಿ ಮಾರ್ಗವಿತ್ತು. ಆದರೆ, ಇದ್ದಕ್ಕಿದ್ದಂತೆ ಇದೀಗ ಇದು ಸರ್ಕಾರದ ಜಾಗೆ. ಇಲ್ಲಿ ನಿಮ್ಮ ಹಕ್ಕಿನ ಯಾವ ಪತ್ರವೂ ನಮ್ಮ ಬಳಿ ಇಲ್ಲ. ಕೂಡಲೇ ಇದನ್ನು ತೆರವುಗೊಳಿಸಿ ಎಂದು ಸ್ಥಳದಲ್ಲಿಯೇ ಎಚ್ಚರಿಕೆ ನೀಡಿದ್ದಾರೆ. ಆದರೆ ಯಾವುದೇ ಸಮಯವನ್ನು ನೀಡದೆ, ನೋಟಿಸ್ ಕೂಡ ಕೊಡದೆ ಸೋಮವಾರ ಬೆಳಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ರಸ್ತೆಯನ್ನು ಅಗೆದು ಹಾಕಿದ್ದಾರೆ. ಇದರಿಂದ ಆಸ್ಪತ್ರೆ ವೈದ್ಯರು ಮತ್ತು ರೋಗಿಗಳು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ