ವಿದ್ಯಾರ್ಥಿಗಳಿಗೆ ಕಾಯುತ್ತಿರುವ ಹಾಸ್ಟೆಲ್ಗಳು
Team Udayavani, Nov 27, 2020, 3:20 PM IST
ಹುಬ್ಬಳ್ಳಿ: ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಹಾಸ್ಟೆಲ್ಗಳನ್ನು ಮದುವಣಗಿತ್ತಿಯಂತೆ ಸಿದ್ಧಪಡಿಸಿ ದಾಖಲಾತಿಗೆ ಮುಂದಾಗಿದ್ದರೂ ವಿದ್ಯಾರ್ಥಿಗಳು ಹಾಸ್ಟೆಲ್ಗಳಿಗೆ ಆಗಮಿಸಲು ಮನಸ್ಸು ಮಾಡುತ್ತಿಲ್ಲ.
ಕೋವಿಡ್-19 ನಂತರದಲ್ಲಿ ಪದವಿ, ಸ್ನಾತಕೋತ್ತರ, ವೃತ್ತಿಪರ, ತಾಂತ್ರಿಕ ಕೋರ್ಸ್ಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನ.17ರಿಂದ ತರಗತಿಗಳನ್ನು ಸರ್ಕಾರ ಆರಂಭಿಸಿದೆ. ಇದಕ್ಕೆ ಪೂರಕವಾಗಿ ಅಂದಿನಿಂದಲೇ ಹಾಸ್ಟೆಲ್ ಗಳ ಪುನರಾರಂಭಗೊಂಡಿವೆ.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಸಜ್ಜಗೊಳಿಸಲಾಗಿದೆ.
ಮೂರು ಇಲಾಖೆಯಿಂದ ಜಿಲ್ಲೆಯಲ್ಲಿ ಸುಮಾರು 3000 ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ 65 ಹಾಸ್ಟೆಲ್ಗಳನ್ನು ಸಿದ್ಧಪಡಿಸಲಾಗಿದೆ. ಆದರೆ ಕಳೆದ 10 ದಿನಗಳಿಂದ ಮೂರು ಇಲಾಖೆಯ ಹಾಸ್ಟೆಲ್ಗಳಲ್ಲಿ ಶೇ.20 ವಿದ್ಯಾರ್ಥಿಗಳು ದಾಖಲಾಗಿಲ್ಲ.
ಇದನ್ನೂ ಓದಿ:ಡಿಸೆಂಬರ್ ಮೊದಲ ವಾರ ಸಂಜು ಬಾಬಾ ಎಂಟ್ರಿ
ತೊಲಗಿಲ್ಲ ಭೀತಿ: ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಕೋವಿಡ್-19 ಕುರಿತ ಆತಂಕ ಕಡಿಮೆಯಾಗಿಲ್ಲ. ಹಾಸ್ಟೆಲ್ ಗೆ ದಾಖಲಾಗುವ 72 ಗಂಟೆ ಮುನ್ನ ಕೋವಿಡ್-19 ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ತರಬೇಕು ಎನ್ನುವ ನಿಯಮದಿಂದ ಬಹುತೇಕರು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಕಾಲೇಜುಗಳ ಹಾಜರಾತಿ ಕಡ್ಡಾಯಗೊಳಿಸದಿರುವುದು ಹಾಗೂ ಆನ್ಲೈನ್ ಕ್ಲಾಸ್ಗಳಿಗೆ ಆದ್ಯತೆ ನೀಡಿರುವುದು ಹಾಸ್ಟೆಲ್ ಪ್ರವೇಶಕ್ಕೆ ಹೆಚ್ಚಿನ ಒತ್ತು ನೀಡುತ್ತಿಲ್ಲ. ದಿನ ಕಳೆದಂತೆ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಅಧಿಕಾರಿಗಳಲ್ಲಿದೆ.
ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳೇನು? :
-ಹಾಸ್ಟೆಲ್ ಪ್ರವೇಶ ದ್ವಾರ ಹಾಗೂ ಊಟದ ಕೋಣೆಯಲ್ಲಿ ಸ್ಯಾನಿಟೈಸರ್ ದ್ರಾವಣ
-ಊಟದ ಕೋಣೆ ಸೇರಿದಂತೆ ಇನ್ನಿತರೆ ಕಡೆ ಬಿಸಿ ನೀರು ಪೂರೈಕೆ
-ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸೀಮಿತ ಮಂಚ
-ಥರ್ಮಲ್ ಸ್ಕ್ಯಾನಿಂಗ್ ಮತ್ತು ತುರ್ತು ವೈದ್ಯಕೀಯ ಸೇವೆ
-ಸೋಂಕಿನ ಲಕ್ಷಣ ಕಂಡು ಬಂದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ
-ಹಾಸ್ಟೆಲ್, ಹಾಸಿಗೆ ಸ್ವತ್ಛತೆಗೆ ಆದ್ಯತೆ-ಶುಚಿ ರುಚಿ ಆಹಾರಕ್ಕೆಒತ್ತು
-ಸೋಡಿಯಂ ಹೈಪೋಕ್ಲೋರೈಡ್ನಿಂದ ಎರಡೆರಡು ಬಾರಿ ಸ್ಯಾನಿಟೈಸ್
ಹಾಸ್ಟೆಲ್ ಹಾಗೂ ಕೊಠಡಿಗಳ ಹಂಚಿಕೆ ಶೇ.50ಕ್ಕೆ ಸೀಮಿತ
ಕಾಲೇಜುಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಸರ್ಕಾರ ಹಾಸ್ಟೆಲ್ ಆರಂಭಕ್ಕೆ ಸೂಚನೆ ನೀಡಿದ್ದು, ಸ್ವತ್ಛತೆ ಹಾಗೂ ಕೋವಿಡ್ -19 ತಡೆ ನಿಯಮಗಳನ್ನು ಕಡ್ಡಾಯವಾಗಿ ಅಳವಡಿಸಲಾಗಿದೆ. ದಿನ ಕಳೆದಂತೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. -ಆರ್.ಎನ್. ಪುರುಷೋತ್ತಮ ಜಂಟಿ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ
-ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ