ಅಮೇಜಾನ್‌-ಫ್ಲಿಪ್‌ಕಾರ್ಟ್‌ ಪ್ರಪಂಚ ಪ್ರವೇಶಿಸಿದ ಹುಬ್ಬಳ್ಳಿ ಹುಡ್ಗ

ಟೀ ಶರ್ಟ್‌ ಮಾಡೆಲ್ ಆಗಿ ಎಲ್ಲರ ಗಮನ ಸೆಳೆದ ನವೀನ ದ್ಯಾವನಗೌಡ್ರ

Team Udayavani, Jun 28, 2019, 9:37 AM IST

hubali-tdy-2..

ನವೀನ ದ್ಯಾವನಗೌಡ್ರ

ಹುಬ್ಬಳ್ಳಿ: ಇಲ್ಲಿನ ಕೆಎಲ್ಇ ಸಂಸ್ಥೆಯ ಎಸ್‌.ಐ.ಮುನವಳ್ಳಿ ಪಾಲಿಟೆಕ್ನಿಕ್‌ ಮಹಾವಿದ್ಯಾಲಯದ ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿಯೋರ್ವ ಪ್ರಖ್ಯಾತ ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಶಾಪಿಂಗ್‌ ಜಾಹೀರಾತು ರೂಪದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್‌ ನಿವಾಸಿ ನವೀನ ದ್ಯಾವನಗೌಡ್ರ ಅಮೆಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಶಾಂಪಿಂಗ್‌ ಸಂಸ್ಥೆಗಳ ಟೀ ಶರ್ಟ್‌ ಮಾಡೆಲ್ ಆಗಿ ಎಲ್ಲರ ಗಮನ ಸೆಳೆದಿದ್ದಾರೆ.

ಕಾಲೇಜಿನಲ್ಲಿ ನಡೆಯುವ ಫನ್‌ ವೀಕ್‌ ಕಾರ್ಯಕ್ರಮದಲ್ಲಿ ಮಾಡಲಿಂಗ್‌ ಸ್ಪರ್ಧೆಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದಿದ್ದೆ. ಈ ಸಂದರ್ಭದಲ್ಲಿ 32 ಜನರನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಪಡೆದಿರುವುದು ಈ ಹಂತಕ್ಕೆ ಬರಲು ಮೂಲ ಕಾರಣ.ನನ್ನ ತಂದೆ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಮಾಡಲಿಂಗ್‌ನಲ್ಲಿ ಹೆಚ್ಚು ಒಲವು ತೋರಿಸಿದ್ದೇನೆ ಎಂದು ನವೀನ ಸ್ಮರಿಸಿದರು.

ಕರ್ನಾಟಕಸ್‌ ನೆಕ್ಸ್‌ ಟಾಪ್‌ ಮಾಡೆಲ್ ಸ್ಪರ್ಧೆ ಆಯೋಜಕರಾಗಿರುವ ಮಹೇಶ ಕಾಮಶೆಟ್ಟಿ ಅವರು ಆನ್‌ಲೈನ್‌ ಶಾಂಪಿಂಗ್‌ ಜಾಲತಾಣದಲ್ಲಿ ನಡೆಯುತ್ತಿರುವ ಪುರುಷ ರೂಪದರ್ಶಿಗಳ ಅವಕಾಶ ಕುರಿತು ಮಾಹಿತಿ ನೀಡಿದ್ದರು. ಇದನ್ನಾಧರಿಸಿ ಎರಡು ಟಿ ಶರ್ಟ್‌ ಖರೀದಿಸಿ, ಟಿ-ಶರ್ಟ್‌ ಧರಿಸಿದ ಫೋಟೊಗಳನ್ನು ಎರಡು ಕಂಪೆನಿಗಳಿಗೆ ಕಳುಹಿಸಿ ಕೊಟ್ಟಿದ್ದೆ. ನಂತರ ಜಾಲತಾಣದವರು ನಡೆಸಿದ ಟೀ ಶರ್ಟ್‌ ಜಾಹಿರಾತಿನಲ್ಲಿ ತೇರ್ಗಡೆಯಾಗಿದ್ದೇನೆ.

ಅಮೇಜಾನ್‌ ಜಾಲತಾಣದಲ್ಲಿ 3 ದಿನಗಳಲ್ಲಿ 5ಟೀ ಶರ್ಟ್‌ ಮಾರಾಟವಾಗಬೇಕು. ಆದರೆ ನಾನು ಜಾಹೀರಾತು ನೀಡಿದ ಟೀ ಶರ್ಟ್‌ ಕೇವಲ 10 ಗಂಟೆಯಲ್ಲಿ ಹಾಗೂ ಫ್ಲಿಪ್‌ಕಾರ್ಟ್‌ನಲ್ಲಿ 24ಗಂಟೆಯಲ್ಲಿ ಟೀ ಶರ್ಟ್‌ ಮಾರಾಟವಾಗಿವೆ. ತದ ನಂತರ ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಸಂಸ್ಥೆ ಶಾಪಿಂಗ್‌ ತಾಣಗಳ ರೂಪದರ್ಶಿಯಾಗಿ ಆಯ್ಕೆಯಾಗಿರುವುದನ್ನು ಖಚಿತ ಪಡಿಸಿವೆ ಎಂದು ನವೀನ ಹೇಳಿದರು.

ಮತ್ತೆರಡು ಕಡೆ ಬುಲಾವ್‌: ಅಮೇಜಾನ್‌ ಹಾಗೂ ಫ್ಲಿಪ್‌ಕಾರ್ಟ್‌ ಜಾಲತಾಣಗಳಲ್ಲಿ ರೂಪದರ್ಶಿಯಾಗಿ ಆಯ್ಕೆಯಾಗುತ್ತಿದ್ದಂತೆ ಸ್ಟಾರ್‌ಪ್ಲಸ್‌ ಹಾಗೂ ಜೀ ಟಿವಿ ಜಾಹೀರಾತು ಗಳಲ್ಲಿಯೂ ಬುಲಾವ್‌ ಬಂದಿದೆ. ಜುಲೈ 21ಕ್ಕೆ ದೆಹಲಿಗೆ ಆಗಮಿಸಲು ತಿಳಿಸಿದ್ದಾರೆ ಎಂದು ನವೀನ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಅಂತಿಮ ಸ್ಪರ್ಧೆ: ಕರ್ನಾಟಕಸ್‌ ನೆಕ್ಸ್‌r ಟಾಪ್‌ ಮಾಡೆಲ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಅದರಲ್ಲಿ ಆಗಮಿಸಿದ್ದ 125 ಜನರಲ್ಲಿ ಅಂತಿಮ 12ರ ಸ್ಥಾನಕ್ಕೆ ಆಯ್ಕೆಗೊಂಡೆ. ನಂತರ ನಂತರ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ 600 ಜನರು ಪಾಲ್ಗೊಂಡಿದ್ದು, ಅದರಲ್ಲಿ 30 ಜನರಲ್ಲಿ ಸೆಮಿಫೈನಲ್ಗೆ ಆಯ್ಕೆಗೊಂಡಿದ್ದೇನೆ. ಇದೇ ಜುಲೈ 8ರಿಂದ 12ರವರೆಗೆ ಗೋಕುಲ ರಸ್ತೆ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ಸೆಮಿಫೈನಲ್ ಹಾಗೂ ಅಂತಿಮ ಸ್ಪರ್ಧೆ ನಡೆಯಲಿದೆ ಎಂದು ನವೀನ ತಿಳಿಸಿದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.