ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರದಿಂದ ಗೆಜ್ಜೆ ಹಬ್ಬ


Team Udayavani, Jan 14, 2019, 11:28 AM IST

14-january-22.jpg

ಹುಬ್ಬಳ್ಳಿ: ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರದ 23ನೇ ವಾರ್ಷಿಕೋತ್ಸವ ಪ್ರಯುಕ್ತ ‘ಗೆಜ್ಜೆ ಹಬ್ಬ’ ಇಲ್ಲಿನ ನ್ಯೂ ಕಾಟನ್‌ ಮಾರ್ಕೆಟ್‌ನ ಸಾಂಸ್ಕೃತಿಕ ಭವನದಲ್ಲಿ ರವಿವಾರ ನಡೆಯಿತು.

ಕಲಾ ಕೇಂದ್ರದಿಂದ ರವಿದಾತಾರ ಪ್ರಶಸ್ತಿ ಸ್ವೀಕರಿಸಿ ದ ವಿದುಷಿ ವಾರಿಜಾ ನಲಿಗೆ ಮಾತನಾಡಿ, ನೃತ್ಯದಿಂದ ಆಧ್ಯಾತ್ಮ ಜ್ಞಾನ ಬೆಳೆಯುತ್ತದೆ. ಪುರಾಣ ಶಾಸ್ತ್ರ ಅಧ್ಯಯನ ಮಾಡುವುದರಿಂದ ನಾಟ್ಯ ಶಾಸ್ತ್ರಜ್ಞಾನ ಬೆಳೆಯುತ್ತದೆ. ನಾಟ್ಯಶಾಸ್ತ್ರ ತರಬೇತಿ ಪಡೆದ ತಕ್ಷಣ ಮಕ್ಕಳು ಕಾರ್ಯಕ್ರಮ ನೀಡಬೇಕು ಎನ್ನುವ ಮನಸ್ಥಿತಿಯನ್ನು ಪಾಲಕರು ಬೆಳೆಸಿಕೊಳ್ಳಬಾರದು. ನೃತ್ಯ ಒಂದು ತಪಸ್ಸು ಇದ್ದಂತೆ. ಕೆಲ ತಿಂಗಳ ತರಬೇತಿ ಪಡೆದಾಕ್ಷಣ ನೃತ್ಯ ಕರಗತವಾಗಿದೆ ಎನ್ನುವ ಭಾವನೆ ಬೇಡ ಎಂದರು.

ಡಾ| ಗಂಗೂಬಾಯಿ ಹಾನಗಲ್ಲ ಮ್ಯೂಸಿಕ್‌ ಫೌಂಡೇಶನ್‌ ಅಧ್ಯಕ್ಷ ಮನೋಜ ಹಾನಗಲ್ಲ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಸಂಗೀತ, ಸಾಹಿತ್ಯ, ನೃತ್ಯ ಕ್ಷೇತ್ರದಲ್ಲಿ ದೊಡ್ಡ ಪ್ರತಿಭೆಗಳಿವೆ. ಆದರೆ ಈ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಬೇಕಾಗಿದೆ. ಸರಕಾರ ಕೂಡ ಈ ಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. 30-40 ವರ್ಷಗಳ ಹಿಂದೆ ಈ ಭಾಗವನ್ನು ತೊರೆದು ಕಳೆದವರನ್ನು ಉತ್ತರ ಕರ್ನಾಟಕ ಕೋಟಾದಡಿ ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಈ ಭಾಗದ ಪ್ರತಿಭೆಗಳನ್ನು ವಂಚಿತರನ್ನಾಗಿಸುತ್ತಿದೆ. ಸರಕಾರ ಈ ಕುರಿತು ಸೂಕ್ತ ಗಮನ ಹರಿಸಬೇಕು ಎಂದು ಹೇಳಿದರು.

ಕಲಾ ಕೇಂದ್ರದ ನೃತ್ಯ ಗುರು ವಿದುಷಿ ಡಾ| ಸಹನಾ ಭಟ್ಟ ಮಾತನಾಡಿ, ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರ 23 ವಸಂತಗಳಲ್ಲಿ ರಾಜ್ಯ ಹಾಗೂ ದೇಶದ ಗಮನ ಸೆಳೆದಿದೆ. ಕೇಂದ್ರದಲ್ಲಿ ನೃತ್ಯ ತರಬೇತಿ ಪಡೆದ ವಿದ್ಯಾರ್ಥಿಗಳು ವಿವಿಧ ಭಾಗದಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದಾರೆ ಎಂದರು.ಡಾ| ಕಿರಣ ಕುಲಕರ್ಣಿ, ಅನಿಲ ಬಾಸಗಿ, ಕಾಡಪ್ಪ ಮೈಸೂರು, ದಿನೇಶ ವಾಗ್ಮೋಡೆ, ಸತೀಶ ಭಟ್ಟ ಇನ್ನಿತರರಿದ್ದರು.

ಪ್ರಶಸ್ತಿ ಪ್ರದಾನ: ವಿದುಷಿ ವಾರಿಜಾ ನಲಿಗೆ ಅವರಿಗೆ ರವಿದಾತಾರ ಪ್ರಶಸ್ತಿ ಹಾಗೂ ಕಲಾ ಕೇಂದ್ರದ ಹಿರಿಯ ವಿದ್ಯಾರ್ಥಿಗಳಾದ ವಿದ್ವಾನ್‌ ಮಂಜುನಾಥ ಗೋರ್ಕಲ್‌ ಹಾಗೂ ವಿದುಷಿ ಮೇಘನಾ ರಾವ್‌ ಅವರಿಗೆ ಪ್ರಸಕ್ತ ಸಾಲಿನ ರವಿದಾತಾರ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಗಮನ ಸೆಳೆದ ನೃತ್ಯ ರೂಪಕ: ಕಲಾ ಕೇಂದ್ರದ ಬಾಲ ಪ್ರತಿಭೆಗಳು ಹಾಗೂ ಹಿರಿಯ ವಿದ್ಯಾರ್ಥಿಗಳ ವಿವಿಧ ನೃತ್ಯಗಳು ಪ್ರೇಕ್ಷಕರನ್ನು ರಂಜಿಸಿದವು. ಡಾ| ಸಹನಾ ಭಟ್ಟ ಅವರು ನಿರ್ದೇಶಿಸಿ ಪ್ರಸ್ತುತ ಪಡಿಸಿದ ಶಾಕುಂತಲಾ ನೃತ್ಯ ರೂಪಕ ಗಮನ ಸಳೆಯಿತು. ಕಲಾ ಕೇಂದ್ರದ ವಿದ್ಯಾರ್ಥಿಗಳು ನೃತ್ಯರೂಪಕ ಪ್ರಸ್ತುತ ಪಡಿಸಿದರು. ಪ್ರದೀಪ ಭಟ್ಟ ಅವರ ಸಾಹಿತ್ಯ ಹಾಗೂ ಬಾಲಸುಬ್ರಹ್ಮಣ್ಯ ಶರ್ಮ ಅವರು ಸಂಗೀತ ನಿರ್ದೇಶನ ಇಂಪು ನೀಡಿತು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.