ಸಮಾಜದ ವೈಷಮ್ಯ ಸ್ಥಿತಿಗೆ ಭಗವದ್ಗೀತೆ ಸಂಜೀವಿನಿ


Team Udayavani, Oct 29, 2018, 5:30 PM IST

29-october-21.gif

ಹುಬ್ಬಳ್ಳಿ: ಇಂದಿನ ವೈಷಮ್ಯ ಸ್ಥಿತಿಗೆ ಭಗವಾನ್‌ ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆ ಸಂಜೀವಿನಿಯಾಗಿದೆ. ಜೀವನದಲ್ಲಿ ಗೀತೆಯ ಅನುಸರಣೆಯಿಂದ ಉತ್ತಮ ಸಮಾಜ ನಿರ್ಮಿಸಬಹುದು ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಜಗದ್ಗುರು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಭಗವದ್ಗೀತಾ ಅಭಿಯಾನ ಸಮರ್ಪಣಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರವಿವಾರ ಇಲ್ಲಿನ ಸ್ಟೇಶನ್‌ ರಸ್ತೆಯ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ವಿಶ್ವದಲ್ಲಿ ಇಂದು ಭಯೋತ್ಪಾದನೆ ತಾಂಡವಾಡುತ್ತಿದೆ. ಉತ್ತಮವಾಗಿರುವ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣಗಳು ನಡೆದಿದ್ದು, ಸಮಾಜ ದ್ವಂದ್ವದಲ್ಲಿ ಸಿಲುಕಿಕೊಂಡಿದೆ. ಮಾನಸಿಕ ನೆಮ್ಮದಿ ಕಳೆದುಕೊಂಡಿದೆ. ಇದೆಲ್ಲದರ ಪರಿಹಾರವಾಗಿ ಶ್ರೀಕೃಷ್ಣ ಉಪದೇಶಿಸಿದ ಭಗವದ್ಗೀತೆಯ ಅನುಷ್ಠಾನ ಮತ್ತು ಅನುಸಂಧಾನದಿಂದ ಮತ್ತೆ ಮಾನವ ಕುಲವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಅನೇಕ ದಿನಗಳಿಂದ ಅನೂಚಾನವಾಗಿ ನಡೆಸಿಕೊಂಡು ಬಂದಿರುವ ಈ ಗೀತಾ ಅಭಿಯಾನದ ಬೃಹತ್‌ ಸಮರ್ಪಣಾ ಸಮಾರಂಭ ನಗರದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿದೆ. ಭಕ್ತರು ತನು-ಮನ-ಧನದಿಂದ ಸೇವೆ ಸಲ್ಲಿಸಬೇಕು ಎಂದರು.

ಪದ್ಮಶ್ರೀ ಡಾ| ಎಂ.ಎಂ. ಜೋಶಿ ಮಾತನಾಡಿ, ಸ್ವರ್ಣವಲ್ಲಿ ಶ್ರೀಗಳು ಸಮಾಜಮುಖಿಯಾಗಿ ಭಗವದ್ಗೀತಾ ಅಭಿಯಾನ ಹಮ್ಮಿಕೊಳ್ಳುವ ಮೂಲಕ ನೈತಿಕತೆ ಮತ್ತು ಸಂಸ್ಕಾರ ಬಿತ್ತುತ್ತಿದ್ದಾರೆ. ಇಂಥ ಕಾರ್ಯಕ್ರಮಕ್ಕೆ ನಗರವು ಸದಾ ಸಿದ್ಧವಾಗಿದ್ದು, ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು. ಬ್ರಾಹ್ಮಣ ಸಮಾಜದ ಮುಖಂಡ ಎಂ.ಬಿ. ನಾತು ಮಾತನಾಡಿ, ಗೀತಾ ಜಯಂತಿ ಡಿ. 19ರಂದು ಭಗವದ್ಗೀತಾ ಅಭಿಯಾನದ ಸಮರ್ಪಣೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ವಲಯಗಳನ್ನಾಗಿಸಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಲಕ್ಷಕ್ಕೂ ಅಧಿಕ ಜನತೆ ಆಗಮಿಸುವುದರಿಂದ ವಿವಿಧ ಸಮಿತಿ ರಚಿಸಲಾಗಿದೆ. ಮಾಡಬೇಕಾದ ಕೆಲಸ ಕಾರ್ಯಗಳಿಗೆ ಇನ್ನಷ್ಟು ವೇಗ ನೀಡಬೇಕಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದರು.

ನ್ಯಾಯವಾದಿ ಬಿ.ಡಿ. ಹೆಗಡೆ, ವಿನಾಯಕ ಆಕಳವಾಡಿ, ಅನಂತ ಹೆಗಡೆ ಸೇರಿದಂತೆ ಇತರರು ಮಾತನಾಡಿ, ಶ್ರೀಗಳು ಸದಾಕಾಲ ಶ್ರೀಕೃಷ್ಣನ ಗೀತೆಯಿಂದಲೇ ಸಮಾಜದ ಉದ್ಧಾರವೆಂದು ಕಂಡಿದ್ದಾರೆ. ಆ ನಿಟ್ಟಿನಲ್ಲಿ ಸರ್ವ ಸಮಾಜದ ಏಳ್ಗೆ ಬಯಸಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತಸ ತಂದಿದೆ. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಲಾಗುವುದು ಎಂದರು.

ಎಸ್‌ಎಸ್‌ಕೆ ಸಮಾಜದ ನೀಲಕಂಠ ಜಡಿ, ವಿಠಲ ಲದ್ವಾ, ಗೀತಾ ಅಭಿಯಾನದ ಪ್ರಚಾರ ಸಮಿತಿ ಮುಖಂಡ ಎ.ಸಿ. ಗೋಪಾಲ, ಶೃಂಗಾರ ಪ್ಯಾಲೇಸ್‌ ಮಾಲೀಕ ತುಳಸಿದಾಸ ಧರ್ಮದಾಸ ಬಂಧುಗಳು, ಹೋಟೆಲ್‌ ಉದ್ಯಮಿ ಕೃಷ್ಣರಾಜ ಕೆಮ್ತೂರು, ಜುವೆಲರಿ ಮಾಲೀಕ ಶ್ರೀಕಾಂತ ಕರಿ, ನೀಲಕಂಠ ಆಕಳವಾಡಿ, ಕನ್ಹಯ್ನಾಲಾಲ್‌ ಠಕ್ಕರ, ಮನೋಹರ ಪರ್ವತಿ, ವೆಂಕಟರಮಣ ಹೆಗಡೆ, ಶ್ರೀಕಾಂತ ಹೆಗಡೆ ಮೊದಲಾದವರಿದ್ದರು. ವೀಣಾ ಶಿವರಾಮ ಹೆಗಡೆ ತಂಡದಿಂದ ಭಗವದ್ಗೀತಾ ಶ್ಲೋಕ ಪಠಣ ನಡೆಯಿತು. ಸುಭಾಸಸಿಂಗ ಜಮಾದಾರ ನಿರೂಪಿಸಿದರು. ಅರವಿಂದ ಮುತಗಿ ವಂದಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.